ಮಹಿಳೆಗೆ 1.41 ಕೋಟಿ ವಂಚನೆ…ಕೋ.ಆಪರೇಟಿವ್ ಬ್ಯಾಂಕ್ ನಿಂದ ಅಕ್ರಮವಾಗಿ ವರ್ಗಾವಣೆ…ಮ್ಯಾನೇಜರ್,ಜನರಲ್ ಮ್ಯಾನೇಜರ್,ಅಧ್ಯಕ್ಷನ ವಿರುದ್ದ ವಂಚನೆ ಪ್ರಕರಣ…

ಮಹಿಳೆಗೆ 1.41 ಕೋಟಿ ವಂಚನೆ…ಕೋ.ಆಪರೇಟಿವ್ ಬ್ಯಾಂಕ್ ನಿಂದ ಅಕ್ರಮವಾಗಿ ವರ್ಗಾವಣೆ…ಮ್ಯಾನೇಜರ್,ಜನರಲ್ ಮ್ಯಾನೇಜರ್,ಅಧ್ಯಕ್ಷನ ವಿರುದ್ದ ವಂಚನೆ ಪ್ರಕರಣ…

ಮಹಿಖೆಯೊಬ್ಬರ ಸಿಸಿಎಲ್ ಖಾತೆಯಿಂದ ಅಕ್ರಮವಾಗಿ 1.41 ಕೋಟಿ ಹಣವನ್ನ ಅನುಮತಿ ಇಲ್ಲದೆ ಅಕ್ರಮವಾಗಿ ವರ್ಗಾವಣೆ ಮಾಡಿದ ಹಿನ್ನಲೆ ಕೋ ಆಪರೇಟಿವ್ ಬ್ಯಾಂಕ್ ಒಂದರ ಮ್ಯಾನೇಜರ್,ಜನರಲ್ ಮ್ಯಾನೇಜರ್ ಹಾಗೂ ಅಧ್ಯಕ್ಷನ ವಿರುದ್ದ ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿದೆ.

ಹೂಟಗಳ್ಳಿಯಲ್ಲಿರುವ ನವನಗರ ಅರ್ಬನ್ ಕೋ ಆಪರೇಟಿವ್ ಬ್ಯಾಂಕ್ ನಲ್ಲಿ ಪ್ರಕರಣ ನಡೆದಿದ್ದು ವಂಚನೆಗೆ ಒಳಗಾದ ಸುನಿತ ಎಂಬುವರು ಮ್ಯಾನೇಜರ್ ಶಿವಕುಮಾರ್,ಜನರಲ್ ಮ್ಯಾನೇಜರ್ ಸುರೇಶ್ ಹಾಗೂ ಅಧ್ಯಕ್ಷ ಬಸಂತ್ ಎಂಬುವರ ಮೇಲೆ ಪ್ರಕರಣ ದಾಖಲಿಸಿದ್ದಾರೆ.

ಸುನಿತಾ ಮಹಿಳಾ ಮಂಡಳಿ ಅಧ್ಯಕ್ಷರಾದ ಸುನಿತಾ ರವರು ನವನಗರ ಅರ್ಬನ್ ಕೋ ಆಪರೇಟಿವ್ ಬ್ಯಾಂಕ್ ನಲ್ಲಿ ಸಿಸಿಎಲ್ ಖಾತೆ ಹೊಂದಿದ್ದಾರೆ.ಈ ಹಿಂದೆ ಸಾಲಕ್ಕಾಗಿ ಕೆಲವು ಚೆಕ್ ಗಳನ್ನ ನೀಡಿದ್ದರು.ಚೆಕ್ ಗಳನ್ನ ಬಳಸಿಕೊಂಡು ಸಿಸಿಎಲ್ ಖಾತೆಯಿಂದ ಸುನಿತಾ ರವರ ಉಳಿತಾಯ ಖಾತೆಗೆ 1,41,50,000/- ಹಣವನ್ನ ಯಾವುದೇ ಅನುಮತಿ ಪಡೆಯದೆ ವರ್ಗಾವಣೆ ಮಾಡಿದ್ದಾರೆ.ನಂತರ ಉಳಿತಾಯ ಖಾತೆಯಿಂದ ಎರಡು ಖಾತೆಗಳಿಗೆ ತಲಾ 1,25,00,000/ ಹಾಗೂ 16,00,000/- ಲಕ್ಷ ವರ್ಗಾವಣೆ ಮಾಡಿ ನಂಬಿಕೆ ದ್ರೋಹ ಮಾಡಿದ್ದಾರೆಂದು ಸುನಿತಾ ಆರೋಪಿಸಿ ಪ್ರಕರಣ ದಾಖಲಿಸಿದ್ದಾರೆ.ಇವೆಲ್ಲಾ ವಹಿವಾಟುಗಳು ನಡೆದಾಗ ಸಂದೇಶಗಳನ್ನ ಮೊಬೈಲ್ ಗೆ ಬಾರದಂತೆ ಮುನ್ನೆಚ್ಚರಿಕೆ ವಹಿಸಿ ವಂಚನೆ ಮಾಡಿದ್ದಾರೆಂದು ಪ್ರಕರಣದಲ್ಲಿ ಉಲ್ಲೇಖಿಸಿದ್ದಾರೆ…

Spread the love

Related post

ಬಲಮುರಿ ಎಡಮುರಿ ಫಾಲ್ಸ್ ಗೆ ಎಸ್ಪಿ ಮಲ್ಲಿಕಾರ್ಜುನ ಬಾಲದಿಂಡಿ ಭೇಟಿ…ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಸೂಚನೆ…

ಬಲಮುರಿ ಎಡಮುರಿ ಫಾಲ್ಸ್ ಗೆ ಎಸ್ಪಿ ಮಲ್ಲಿಕಾರ್ಜುನ ಬಾಲದಿಂಡಿ ಭೇಟಿ…ಮುನ್ನೆಚ್ಚರಿಕೆ ಕ್ರಮ…

ಕೆ.ಆರ್.ಎಸ್,ಮೇ20,Tv10 ಕನ್ನಡ ಬಲಮುರಿ ಹಾಗೂ ಎಡಮುರಿ ಫಾಲ್ಸ್ ಗಳಿಗೆ ಮಂಡ್ಯ ಜಿಲ್ಲಾ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ರವರು ಭೇಟಿ ನೀಡಿ ಸುರಕ್ಷತಾ ಕ್ರಮದ ಬಗ್ಗೆ ಕೆಲವು ಸೂಚನೆಗಳನ್ನ ನೀಡಿದರು.ಶಾಲಾ…
ಅಕ್ರಮ ಗಂಧದ ಮರದ ತುಂಡುಗಳ ಸಂಗ್ರಹ…ಓರ್ವನ ಬಂಧನ…ಹುಣಸೂರು ಗ್ರಾಮಾಂತರ ಠಾಣೆ ಪೊಲೀಸರ ಯಶಸ್ವಿ ಕಾರ್ಯಾಚರಣೆ…

ಅಕ್ರಮ ಗಂಧದ ಮರದ ತುಂಡುಗಳ ಸಂಗ್ರಹ…ಓರ್ವನ ಬಂಧನ…ಹುಣಸೂರು ಗ್ರಾಮಾಂತರ ಠಾಣೆ ಪೊಲೀಸರ…

ಹುಣಸೂರು,ಮೇ20,Tv10 ಕನ್ನಡ ಅಕ್ರಮವಾಗಿ ಗಂಧದ ಮರದ ತುಂಡುಗಳನ್ನ ಸಂಗ್ರಹಿಸಿದ್ದ ಓರ್ವ ಆರೋಪಿಯನ್ನ ಬಂಧಿಸುವಲ್ಲಿ ಹುಣಸೂರು ಗ್ರಾಮಾಂತರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.ಠಾಣಾ ವ್ಯಾಪ್ತಿಯ ಮಂಗಳೂರು ಮಾಳ ಹಾಡಿಯ ನಿವಾಸಿ ಶಿವನಂಜ…
ಮಾವಿನಕಾಯಿಗಾಗಿ ಗಲಾಟೆ…ಓರ್ವನ ಕೊ* ಯಲ್ಲಿ ಅಂತ್ಯ…

ಮಾವಿನಕಾಯಿಗಾಗಿ ಗಲಾಟೆ…ಓರ್ವನ ಕೊ* ಯಲ್ಲಿ ಅಂತ್ಯ…

ಹುಣಸೂರು,ಮೇ19,Tv10 ಕನ್ನಡ ಮಾವಿನಕಾಯಿ ಕೊಯ್ಯುವ ವಿಚಾರದಲ್ಲಿ ಶುರುವಾದ ಜಗಳ ಓರ್ವನ ಕೊಯಲ್ಲಿ ಅಂತ್ಯವಾದ ಘಟನೆ ಹುಣಸೂರು ತಾಲೂಕಿನ ಶಂಕಹಳ್ಳಿ ಗ್ರಾಮದಲ್ಲಿ ನಡೆದಿದೆ.ಮಲ್ಲೇಶ್ ಮೃತ ದುರ್ದೈವಿ.ಕೊ ಆರೋಪಿ ಚೇತನ್ ಇದೀಗ…

Leave a Reply

Your email address will not be published. Required fields are marked *