ಮಹಿಳೆಗೆ 1.41 ಕೋಟಿ ವಂಚನೆ…ಕೋ.ಆಪರೇಟಿವ್ ಬ್ಯಾಂಕ್ ನಿಂದ ಅಕ್ರಮವಾಗಿ ವರ್ಗಾವಣೆ…ಮ್ಯಾನೇಜರ್,ಜನರಲ್ ಮ್ಯಾನೇಜರ್,ಅಧ್ಯಕ್ಷನ ವಿರುದ್ದ ವಂಚನೆ ಪ್ರಕರಣ…

ಮಹಿಳೆಗೆ 1.41 ಕೋಟಿ ವಂಚನೆ…ಕೋ.ಆಪರೇಟಿವ್ ಬ್ಯಾಂಕ್ ನಿಂದ ಅಕ್ರಮವಾಗಿ ವರ್ಗಾವಣೆ…ಮ್ಯಾನೇಜರ್,ಜನರಲ್ ಮ್ಯಾನೇಜರ್,ಅಧ್ಯಕ್ಷನ ವಿರುದ್ದ ವಂಚನೆ ಪ್ರಕರಣ…

ಮಹಿಖೆಯೊಬ್ಬರ ಸಿಸಿಎಲ್ ಖಾತೆಯಿಂದ ಅಕ್ರಮವಾಗಿ 1.41 ಕೋಟಿ ಹಣವನ್ನ ಅನುಮತಿ ಇಲ್ಲದೆ ಅಕ್ರಮವಾಗಿ ವರ್ಗಾವಣೆ ಮಾಡಿದ ಹಿನ್ನಲೆ ಕೋ ಆಪರೇಟಿವ್ ಬ್ಯಾಂಕ್ ಒಂದರ ಮ್ಯಾನೇಜರ್,ಜನರಲ್ ಮ್ಯಾನೇಜರ್ ಹಾಗೂ ಅಧ್ಯಕ್ಷನ ವಿರುದ್ದ ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿದೆ.

ಹೂಟಗಳ್ಳಿಯಲ್ಲಿರುವ ನವನಗರ ಅರ್ಬನ್ ಕೋ ಆಪರೇಟಿವ್ ಬ್ಯಾಂಕ್ ನಲ್ಲಿ ಪ್ರಕರಣ ನಡೆದಿದ್ದು ವಂಚನೆಗೆ ಒಳಗಾದ ಸುನಿತ ಎಂಬುವರು ಮ್ಯಾನೇಜರ್ ಶಿವಕುಮಾರ್,ಜನರಲ್ ಮ್ಯಾನೇಜರ್ ಸುರೇಶ್ ಹಾಗೂ ಅಧ್ಯಕ್ಷ ಬಸಂತ್ ಎಂಬುವರ ಮೇಲೆ ಪ್ರಕರಣ ದಾಖಲಿಸಿದ್ದಾರೆ.

ಸುನಿತಾ ಮಹಿಳಾ ಮಂಡಳಿ ಅಧ್ಯಕ್ಷರಾದ ಸುನಿತಾ ರವರು ನವನಗರ ಅರ್ಬನ್ ಕೋ ಆಪರೇಟಿವ್ ಬ್ಯಾಂಕ್ ನಲ್ಲಿ ಸಿಸಿಎಲ್ ಖಾತೆ ಹೊಂದಿದ್ದಾರೆ.ಈ ಹಿಂದೆ ಸಾಲಕ್ಕಾಗಿ ಕೆಲವು ಚೆಕ್ ಗಳನ್ನ ನೀಡಿದ್ದರು.ಚೆಕ್ ಗಳನ್ನ ಬಳಸಿಕೊಂಡು ಸಿಸಿಎಲ್ ಖಾತೆಯಿಂದ ಸುನಿತಾ ರವರ ಉಳಿತಾಯ ಖಾತೆಗೆ 1,41,50,000/- ಹಣವನ್ನ ಯಾವುದೇ ಅನುಮತಿ ಪಡೆಯದೆ ವರ್ಗಾವಣೆ ಮಾಡಿದ್ದಾರೆ.ನಂತರ ಉಳಿತಾಯ ಖಾತೆಯಿಂದ ಎರಡು ಖಾತೆಗಳಿಗೆ ತಲಾ 1,25,00,000/ ಹಾಗೂ 16,00,000/- ಲಕ್ಷ ವರ್ಗಾವಣೆ ಮಾಡಿ ನಂಬಿಕೆ ದ್ರೋಹ ಮಾಡಿದ್ದಾರೆಂದು ಸುನಿತಾ ಆರೋಪಿಸಿ ಪ್ರಕರಣ ದಾಖಲಿಸಿದ್ದಾರೆ.ಇವೆಲ್ಲಾ ವಹಿವಾಟುಗಳು ನಡೆದಾಗ ಸಂದೇಶಗಳನ್ನ ಮೊಬೈಲ್ ಗೆ ಬಾರದಂತೆ ಮುನ್ನೆಚ್ಚರಿಕೆ ವಹಿಸಿ ವಂಚನೆ ಮಾಡಿದ್ದಾರೆಂದು ಪ್ರಕರಣದಲ್ಲಿ ಉಲ್ಲೇಖಿಸಿದ್ದಾರೆ…

Spread the love

Related post

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ… ಮೈಸೂರು,ಏ28,Tv10 ಕನ್ನಡ ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ ಶುರುವಾಗಿದೆ.ಭಿಕ್ಷೆ…
ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…

Leave a Reply

Your email address will not be published. Required fields are marked *