ಮಹಿಳೆಗೆ 1.41 ಕೋಟಿ ವಂಚನೆ…ಕೋ.ಆಪರೇಟಿವ್ ಬ್ಯಾಂಕ್ ನಿಂದ ಅಕ್ರಮವಾಗಿ ವರ್ಗಾವಣೆ…ಮ್ಯಾನೇಜರ್,ಜನರಲ್ ಮ್ಯಾನೇಜರ್,ಅಧ್ಯಕ್ಷನ ವಿರುದ್ದ ವಂಚನೆ ಪ್ರಕರಣ…

ಮಹಿಳೆಗೆ 1.41 ಕೋಟಿ ವಂಚನೆ…ಕೋ.ಆಪರೇಟಿವ್ ಬ್ಯಾಂಕ್ ನಿಂದ ಅಕ್ರಮವಾಗಿ ವರ್ಗಾವಣೆ…ಮ್ಯಾನೇಜರ್,ಜನರಲ್ ಮ್ಯಾನೇಜರ್,ಅಧ್ಯಕ್ಷನ ವಿರುದ್ದ ವಂಚನೆ ಪ್ರಕರಣ…

ಮಹಿಖೆಯೊಬ್ಬರ ಸಿಸಿಎಲ್ ಖಾತೆಯಿಂದ ಅಕ್ರಮವಾಗಿ 1.41 ಕೋಟಿ ಹಣವನ್ನ ಅನುಮತಿ ಇಲ್ಲದೆ ಅಕ್ರಮವಾಗಿ ವರ್ಗಾವಣೆ ಮಾಡಿದ ಹಿನ್ನಲೆ ಕೋ ಆಪರೇಟಿವ್ ಬ್ಯಾಂಕ್ ಒಂದರ ಮ್ಯಾನೇಜರ್,ಜನರಲ್ ಮ್ಯಾನೇಜರ್ ಹಾಗೂ ಅಧ್ಯಕ್ಷನ ವಿರುದ್ದ ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿದೆ.

ಹೂಟಗಳ್ಳಿಯಲ್ಲಿರುವ ನವನಗರ ಅರ್ಬನ್ ಕೋ ಆಪರೇಟಿವ್ ಬ್ಯಾಂಕ್ ನಲ್ಲಿ ಪ್ರಕರಣ ನಡೆದಿದ್ದು ವಂಚನೆಗೆ ಒಳಗಾದ ಸುನಿತ ಎಂಬುವರು ಮ್ಯಾನೇಜರ್ ಶಿವಕುಮಾರ್,ಜನರಲ್ ಮ್ಯಾನೇಜರ್ ಸುರೇಶ್ ಹಾಗೂ ಅಧ್ಯಕ್ಷ ಬಸಂತ್ ಎಂಬುವರ ಮೇಲೆ ಪ್ರಕರಣ ದಾಖಲಿಸಿದ್ದಾರೆ.

ಸುನಿತಾ ಮಹಿಳಾ ಮಂಡಳಿ ಅಧ್ಯಕ್ಷರಾದ ಸುನಿತಾ ರವರು ನವನಗರ ಅರ್ಬನ್ ಕೋ ಆಪರೇಟಿವ್ ಬ್ಯಾಂಕ್ ನಲ್ಲಿ ಸಿಸಿಎಲ್ ಖಾತೆ ಹೊಂದಿದ್ದಾರೆ.ಈ ಹಿಂದೆ ಸಾಲಕ್ಕಾಗಿ ಕೆಲವು ಚೆಕ್ ಗಳನ್ನ ನೀಡಿದ್ದರು.ಚೆಕ್ ಗಳನ್ನ ಬಳಸಿಕೊಂಡು ಸಿಸಿಎಲ್ ಖಾತೆಯಿಂದ ಸುನಿತಾ ರವರ ಉಳಿತಾಯ ಖಾತೆಗೆ 1,41,50,000/- ಹಣವನ್ನ ಯಾವುದೇ ಅನುಮತಿ ಪಡೆಯದೆ ವರ್ಗಾವಣೆ ಮಾಡಿದ್ದಾರೆ.ನಂತರ ಉಳಿತಾಯ ಖಾತೆಯಿಂದ ಎರಡು ಖಾತೆಗಳಿಗೆ ತಲಾ 1,25,00,000/ ಹಾಗೂ 16,00,000/- ಲಕ್ಷ ವರ್ಗಾವಣೆ ಮಾಡಿ ನಂಬಿಕೆ ದ್ರೋಹ ಮಾಡಿದ್ದಾರೆಂದು ಸುನಿತಾ ಆರೋಪಿಸಿ ಪ್ರಕರಣ ದಾಖಲಿಸಿದ್ದಾರೆ.ಇವೆಲ್ಲಾ ವಹಿವಾಟುಗಳು ನಡೆದಾಗ ಸಂದೇಶಗಳನ್ನ ಮೊಬೈಲ್ ಗೆ ಬಾರದಂತೆ ಮುನ್ನೆಚ್ಚರಿಕೆ ವಹಿಸಿ ವಂಚನೆ ಮಾಡಿದ್ದಾರೆಂದು ಪ್ರಕರಣದಲ್ಲಿ ಉಲ್ಲೇಖಿಸಿದ್ದಾರೆ…

Spread the love

Related post

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ…

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ……

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ… ಮೈಸೂರು,ಆ30,Tv10 ಕನ್ನಡ ಮೈಸೂರು ಮಹಾನಗರ ಪಾಲಿಕೆಯ ಗಾರ್ಬೇಜ್ ಮುಕ್ತ ಪಾಯಿಂಟ್ ಯೋಜನೆ…
ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು… ಮೈಸೂರು,ಆ20,Tv10 ಕನ್ನಡ ಹಳೇ ದ್ವೇಷದ ಹಿನ್ನಲೆ ನಡೆದ ಗಲಾಟೆಯಲ್ಲಿ ಕಾರಿನ ಬ್ಯಾನೆಟ್ ಮೇಲೆ…
50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ… ಮೈಸೂರು,ಆ19,Tv10 ಕನ್ನಡ 14-03-2023 ರ ನಿರ್ದೇಶನ ಉಲ್ಲಂಘಿಸಿ 50-50 ಅನುಪಾತದಡಿ ಹಂಚಿಕೆ ಮಾಡಿರುವ…

Leave a Reply

Your email address will not be published. Required fields are marked *