ಮಹಿಳೆಗೆ 1.41 ಕೋಟಿ ವಂಚನೆ…ಕೋ.ಆಪರೇಟಿವ್ ಬ್ಯಾಂಕ್ ನಿಂದ ಅಕ್ರಮವಾಗಿ ವರ್ಗಾವಣೆ…ಮ್ಯಾನೇಜರ್,ಜನರಲ್ ಮ್ಯಾನೇಜರ್,ಅಧ್ಯಕ್ಷನ ವಿರುದ್ದ ವಂಚನೆ ಪ್ರಕರಣ…

ಮಹಿಳೆಗೆ 1.41 ಕೋಟಿ ವಂಚನೆ…ಕೋ.ಆಪರೇಟಿವ್ ಬ್ಯಾಂಕ್ ನಿಂದ ಅಕ್ರಮವಾಗಿ ವರ್ಗಾವಣೆ…ಮ್ಯಾನೇಜರ್,ಜನರಲ್ ಮ್ಯಾನೇಜರ್,ಅಧ್ಯಕ್ಷನ ವಿರುದ್ದ ವಂಚನೆ ಪ್ರಕರಣ…

ಮಹಿಖೆಯೊಬ್ಬರ ಸಿಸಿಎಲ್ ಖಾತೆಯಿಂದ ಅಕ್ರಮವಾಗಿ 1.41 ಕೋಟಿ ಹಣವನ್ನ ಅನುಮತಿ ಇಲ್ಲದೆ ಅಕ್ರಮವಾಗಿ ವರ್ಗಾವಣೆ ಮಾಡಿದ ಹಿನ್ನಲೆ ಕೋ ಆಪರೇಟಿವ್ ಬ್ಯಾಂಕ್ ಒಂದರ ಮ್ಯಾನೇಜರ್,ಜನರಲ್ ಮ್ಯಾನೇಜರ್ ಹಾಗೂ ಅಧ್ಯಕ್ಷನ ವಿರುದ್ದ ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿದೆ.

ಹೂಟಗಳ್ಳಿಯಲ್ಲಿರುವ ನವನಗರ ಅರ್ಬನ್ ಕೋ ಆಪರೇಟಿವ್ ಬ್ಯಾಂಕ್ ನಲ್ಲಿ ಪ್ರಕರಣ ನಡೆದಿದ್ದು ವಂಚನೆಗೆ ಒಳಗಾದ ಸುನಿತ ಎಂಬುವರು ಮ್ಯಾನೇಜರ್ ಶಿವಕುಮಾರ್,ಜನರಲ್ ಮ್ಯಾನೇಜರ್ ಸುರೇಶ್ ಹಾಗೂ ಅಧ್ಯಕ್ಷ ಬಸಂತ್ ಎಂಬುವರ ಮೇಲೆ ಪ್ರಕರಣ ದಾಖಲಿಸಿದ್ದಾರೆ.

ಸುನಿತಾ ಮಹಿಳಾ ಮಂಡಳಿ ಅಧ್ಯಕ್ಷರಾದ ಸುನಿತಾ ರವರು ನವನಗರ ಅರ್ಬನ್ ಕೋ ಆಪರೇಟಿವ್ ಬ್ಯಾಂಕ್ ನಲ್ಲಿ ಸಿಸಿಎಲ್ ಖಾತೆ ಹೊಂದಿದ್ದಾರೆ.ಈ ಹಿಂದೆ ಸಾಲಕ್ಕಾಗಿ ಕೆಲವು ಚೆಕ್ ಗಳನ್ನ ನೀಡಿದ್ದರು.ಚೆಕ್ ಗಳನ್ನ ಬಳಸಿಕೊಂಡು ಸಿಸಿಎಲ್ ಖಾತೆಯಿಂದ ಸುನಿತಾ ರವರ ಉಳಿತಾಯ ಖಾತೆಗೆ 1,41,50,000/- ಹಣವನ್ನ ಯಾವುದೇ ಅನುಮತಿ ಪಡೆಯದೆ ವರ್ಗಾವಣೆ ಮಾಡಿದ್ದಾರೆ.ನಂತರ ಉಳಿತಾಯ ಖಾತೆಯಿಂದ ಎರಡು ಖಾತೆಗಳಿಗೆ ತಲಾ 1,25,00,000/ ಹಾಗೂ 16,00,000/- ಲಕ್ಷ ವರ್ಗಾವಣೆ ಮಾಡಿ ನಂಬಿಕೆ ದ್ರೋಹ ಮಾಡಿದ್ದಾರೆಂದು ಸುನಿತಾ ಆರೋಪಿಸಿ ಪ್ರಕರಣ ದಾಖಲಿಸಿದ್ದಾರೆ.ಇವೆಲ್ಲಾ ವಹಿವಾಟುಗಳು ನಡೆದಾಗ ಸಂದೇಶಗಳನ್ನ ಮೊಬೈಲ್ ಗೆ ಬಾರದಂತೆ ಮುನ್ನೆಚ್ಚರಿಕೆ ವಹಿಸಿ ವಂಚನೆ ಮಾಡಿದ್ದಾರೆಂದು ಪ್ರಕರಣದಲ್ಲಿ ಉಲ್ಲೇಖಿಸಿದ್ದಾರೆ…

Spread the love

Related post

ಸರ್ಕಾರಿ ಜಾಗದಲ್ಲಿ ಅಕ್ರಮ ಹೋಟೆಲ್ ನಿರ್ಮಾಣ ಆರೋಪ – ಜಿಲ್ಲಾಧಿಕಾರಿ ಗಮನ ಹರಿಸಲು ರೈತರ ಮನವಿ

ಸರ್ಕಾರಿ ಜಾಗದಲ್ಲಿ ಅಕ್ರಮ ಹೋಟೆಲ್ ನಿರ್ಮಾಣ ಆರೋಪ – ಜಿಲ್ಲಾಧಿಕಾರಿ ಗಮನ…

ಸರ್ಕಾರಿ ಜಾಗದಲ್ಲಿ ಅಕ್ರಮ ಹೋಟೆಲ್ ನಿರ್ಮಾಣ ಆರೋಪ – ಜಿಲ್ಲಾಧಿಕಾರಿ ಗಮನ ಹರಿಸಲು ರೈತರ ಮನವಿ ಗುಂಡ್ಲುಪೇಟೆ ತಾಲೂಕಿನ ಹಿರಿಕಾಟಿ ಗೇಟ್ ಸಮೀಪದ ಸರ್ವೇ ನಂ.218/1ಕ್ಕೆ ಸೇರಿದ ಸರ್ಕಾರಿ…
ಮೈಸೂರು, ಏಪ್ರಿಲ್ 13: ವಿಶ್ವಪ್ರಸಿದ್ಧ KRS Brindavan Gardens ನಲ್ಲಿ ಡಿಜಿಟಲ್ ಯುಗದಲ್ಲಿಯೂ “ಕ್ಯಾಶ್ ಮಾತ್ರ” ನಿಯಮ ಮುಂದುವರಿಯುತ್ತಿರುವುದು ಪ್ರವಾಸಿಗರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ.

ಮೈಸೂರು, ಏಪ್ರಿಲ್ 13: ವಿಶ್ವಪ್ರಸಿದ್ಧ KRS Brindavan Gardens ನಲ್ಲಿ ಡಿಜಿಟಲ್…

ಮೈಸೂರು, ಏಪ್ರಿಲ್ 13: ವಿಶ್ವಪ್ರಸಿದ್ಧ KRS Brindavan Gardens ನಲ್ಲಿ ಡಿಜಿಟಲ್ ಯುಗದಲ್ಲಿಯೂ “ಕ್ಯಾಶ್ ಮಾತ್ರ” ನಿಯಮ ಮುಂದುವರಿಯುತ್ತಿರುವುದು ಪ್ರವಾಸಿಗರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ. ಪ್ರವೇಶ ಟಿಕೆಟ್ ಪಡೆಯಲು ಬರುವವರಿಗೆ…
ಯುವಕನ ಕಿಡ್ನಾಪ್…ಮಂಗಳಮುಖಿ ವೇಷ ಹಾಕಿಸಿ ಕಲೆಕ್ಷನ್…ಸೆಕ್ಸ್ ವರ್ಕ್ ಗೆಯೂಸ್…ಕರಾಳದಂಧೆಯ ಮತ್ತೊಂದು ಮುಖ ಬಯಲು…

ಯುವಕನ ಕಿಡ್ನಾಪ್…ಮಂಗಳಮುಖಿ ವೇಷ ಹಾಕಿಸಿ ಕಲೆಕ್ಷನ್…ಸೆಕ್ಸ್ ವರ್ಕ್ ಗೆಯೂಸ್…ಕರಾಳದಂಧೆಯ ಮತ್ತೊಂದು ಮುಖ…

ಯುವಕನ ಕಿಡ್ನಾಪ್…ಮಂಗಳಮುಖಿ ವೇಷ ಹಾಕಿಸಿ ಕಲೆಕ್ಷನ್…ಸೆಕ್ಸ್ ವರ್ಕ್ ಗೆಯೂಸ್…ಕರಾಳದಂಧೆಯ ಮತ್ತೊಂದು ಮುಖ ಬಯಲು… ನಂಜನಗೂಡು,ಏ12,Tv10 ಕನ್ನಡ ಯುವಕನೊಬ್ಬನನ್ನ ಕಿಡ್ನಾಪ್ ಮಾಡಿ ಬಲವಂತವಾಗಿ ಮಂಗಳಮುಖಿ ವೇಷ ಹಾಕಿಸಿ ಕಲೆಕ್ಷನ್ ಹಾಗೂ…

Leave a Reply

Your email address will not be published. Required fields are marked *