ಕೌಟುಂಬಿಕ ಕಲಹ…ಪತಿಗೆ ಪತ್ನಿಯಿಂದ ಕೊಲೆಬೆದರಿಕೆ…5 ಮಂದಿ ವಿರುದ್ದ FIR ದಾಖಲು…

ಕೌಟುಂಬಿಕ ಕಲಹ…ಪತಿಗೆ ಪತ್ನಿಯಿಂದ ಕೊಲೆಬೆದರಿಕೆ…5 ಮಂದಿ ವಿರುದ್ದ FIR ದಾಖಲು…

  • Crime
  • May 12, 2025
  • No Comment
  • 106

ಮೈಸೂರು,ಮೇ12,Tv10 ಕನ್ನಡ

ಕೌಟುಂಬಿಕ ಕಲಹ ಹಿನ್ನಲೆ ವಿಚ್ಛೇದನ ಕೋರಿ ನ್ಯಾಯಾಲಯದ ಮೊರೆ ಹೋದ ಪತಿಗೆ ಪತ್ನಿಯೇ ಕೊಲೆ ಬೆದರಿಕೆ ಹಾಕಿದ ಆರೋಪ ಕೇಳಿಬಂದಿದೆ.ಪತ್ನಿ,ಅತ್ತೆ ಸೇರಿದಂತೆ 6 ಮಂದಿ ವಿರುದ್ದ ಪತಿ ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.ವೃತ್ತಿಯಲ್ಲಿ ಎಲೆಕ್ಟ್ರಿಕಲ್ ಕಂಟ್ರಾಕ್ಟರ್ ಆಗಿರುವ ರಾಜೇಶ್ ಕುಮಾರ್ ರವರು ಪತ್ನಿ ಉಷಾ,ಅತ್ತೆ ರಾಜಲಕ್ಷ್ಮಿ,ನಾದಿನಿ ವರ್ಷ,ಸುಂದರಮ್ಮ ಸೇರಿದಂತೆ 6 ಮಂದಿ ವಿರುದ್ದ ಕೊಲೆ ಬೆದರಿಕೆ ಹಾಕಿದ್ದಾರೆಂದು ಪ್ರಕರಣ ದಾಖಲಿಸಿದ್ದಾರೆ.

2017 ರಲ್ಲಿ ರಾಜೇಶ್ ಕುಮಾರ್ ಹಾಗೂ ಉಷ ಮದುವೆ ಆಗಿದೆ.ಮ್ಯಾಟ್ರಿಮೋನಿ ಮೂಲಕ ಪರಿಚಯವಾಗಿ ಮದುವೆ ಆಗಿದೆ.ರಾಜೇಶ್ ಕುಮಾರ್ ಪರಿಶಿಷ್ಟ ಜಾತಿಗೆ ಸೇರಿದವರಾಗಿದ್ದಾರೆ.ಉಷಾ ಆಚಾರಿ ಸಮುದಾಯಕ್ಕೆ ಸೇರಿದವರಾಗಿದ್ದಾರೆ.ಮದುವೆ ವೇಳೆ ಉಷಾ ಸಹ ತಾನು ಪರಿಶಿಷ್ಟ ಜಾತಿಗೆ ಸೇರಿದವಳೆಂದು ಸುಳ್ಳು ಹೇಳಿ ನಂಬಿಸಿದ್ದಾರೆಂದು ರಾಜೇಶ್ ಕುಮಾರ್ ಆರೋಪಿಸಿದ್ದಾರೆ.ಮದುವೆ ನಂತರ ಉಷಾ ಜಾತಿ ಬಯಲಾಗಿದೆ.ಈ ವೇಳೆ ಜಾತಿವಿಚಾರದಲ್ಲಿ ಉಷಾ ಹಾಗೂ ಅತ್ತೆ ರಾಜಲಕ್ಷ್ಮಿ ನಿಂದನೆ ಮಾಡಿ ಮಾನಸಿಕ ಕಿರುಕುಳ ನೀಡಿದ್ದಾರೆ.ಇದರಿಂದ ಬೇಸತ್ತ ರಾಜೇಶ್ ಕುಮಾರ್ ವಿಚ್ಛೇದನಕ್ಕಾಗಿ ಕೌಟುಂಬಿಕ ನ್ಯಾಯಾಲಯದ ಮೊರೆ ಹೋಗಿದ್ದಾರೆ.ಪ್ರತಿತಿಂಗಳು 25 ಸಾವಿರ ಜೀವನಾಂಶ ಪಾವತಿಸುತ್ತಾ ಬಂದಿದ್ದಾರೆ.ಕೌಟುಂಬಿಕ ನ್ಯಾಯಾಲಯದಲ್ಲಿ ವಿಚ್ಛೇದನ ಅರ್ಜಿ ತಿರಸ್ಕೃತವಾಗಿದ್ದು ಹೈಕೋರ್ಟ್ ಮೊರೆ ಹೋಗಿದ್ದಾರೆ.ಈ ಬೆಳವಣಿಗೆ ನಂತರ ಉಷಾ,ರಾಜಲಕ್ಷ್ಮಿ,ಸುಂದರಮ್ಮ,ವರ್ಷಾ ರವರು ಮನೆಗೆ ಬಂದು ಬಾಗಿಲು ಹೊಡೆದು ಅವಾಚ್ಯ ಶಬ್ದಗಳಿಂದ ನಿಂದಿಸಿ ಕೇಸ್ ಹಾಕಿದ ವಿಚಾರವನ್ನ ಪ್ರಸ್ತಾಪಿಸಿ ಕೊಲೆ ಬೆದರಿಕೆ ಹಾಕಿದ್ದಾರೆಂದು ಆರೋಪಿಸಿ ರಾಜೇಶ್ ಕುಮಾರ್ 6 ಮಂದಿ ವಿರುದ್ದ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…

Leave a Reply

Your email address will not be published. Required fields are marked *