ಕೌಟುಂಬಿಕ ಕಲಹ…ಪತಿಗೆ ಪತ್ನಿಯಿಂದ ಕೊಲೆಬೆದರಿಕೆ…5 ಮಂದಿ ವಿರುದ್ದ FIR ದಾಖಲು…

ಕೌಟುಂಬಿಕ ಕಲಹ…ಪತಿಗೆ ಪತ್ನಿಯಿಂದ ಕೊಲೆಬೆದರಿಕೆ…5 ಮಂದಿ ವಿರುದ್ದ FIR ದಾಖಲು…

  • Crime
  • May 12, 2025
  • No Comment
  • 83

ಮೈಸೂರು,ಮೇ12,Tv10 ಕನ್ನಡ

ಕೌಟುಂಬಿಕ ಕಲಹ ಹಿನ್ನಲೆ ವಿಚ್ಛೇದನ ಕೋರಿ ನ್ಯಾಯಾಲಯದ ಮೊರೆ ಹೋದ ಪತಿಗೆ ಪತ್ನಿಯೇ ಕೊಲೆ ಬೆದರಿಕೆ ಹಾಕಿದ ಆರೋಪ ಕೇಳಿಬಂದಿದೆ.ಪತ್ನಿ,ಅತ್ತೆ ಸೇರಿದಂತೆ 6 ಮಂದಿ ವಿರುದ್ದ ಪತಿ ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.ವೃತ್ತಿಯಲ್ಲಿ ಎಲೆಕ್ಟ್ರಿಕಲ್ ಕಂಟ್ರಾಕ್ಟರ್ ಆಗಿರುವ ರಾಜೇಶ್ ಕುಮಾರ್ ರವರು ಪತ್ನಿ ಉಷಾ,ಅತ್ತೆ ರಾಜಲಕ್ಷ್ಮಿ,ನಾದಿನಿ ವರ್ಷ,ಸುಂದರಮ್ಮ ಸೇರಿದಂತೆ 6 ಮಂದಿ ವಿರುದ್ದ ಕೊಲೆ ಬೆದರಿಕೆ ಹಾಕಿದ್ದಾರೆಂದು ಪ್ರಕರಣ ದಾಖಲಿಸಿದ್ದಾರೆ.

2017 ರಲ್ಲಿ ರಾಜೇಶ್ ಕುಮಾರ್ ಹಾಗೂ ಉಷ ಮದುವೆ ಆಗಿದೆ.ಮ್ಯಾಟ್ರಿಮೋನಿ ಮೂಲಕ ಪರಿಚಯವಾಗಿ ಮದುವೆ ಆಗಿದೆ.ರಾಜೇಶ್ ಕುಮಾರ್ ಪರಿಶಿಷ್ಟ ಜಾತಿಗೆ ಸೇರಿದವರಾಗಿದ್ದಾರೆ.ಉಷಾ ಆಚಾರಿ ಸಮುದಾಯಕ್ಕೆ ಸೇರಿದವರಾಗಿದ್ದಾರೆ.ಮದುವೆ ವೇಳೆ ಉಷಾ ಸಹ ತಾನು ಪರಿಶಿಷ್ಟ ಜಾತಿಗೆ ಸೇರಿದವಳೆಂದು ಸುಳ್ಳು ಹೇಳಿ ನಂಬಿಸಿದ್ದಾರೆಂದು ರಾಜೇಶ್ ಕುಮಾರ್ ಆರೋಪಿಸಿದ್ದಾರೆ.ಮದುವೆ ನಂತರ ಉಷಾ ಜಾತಿ ಬಯಲಾಗಿದೆ.ಈ ವೇಳೆ ಜಾತಿವಿಚಾರದಲ್ಲಿ ಉಷಾ ಹಾಗೂ ಅತ್ತೆ ರಾಜಲಕ್ಷ್ಮಿ ನಿಂದನೆ ಮಾಡಿ ಮಾನಸಿಕ ಕಿರುಕುಳ ನೀಡಿದ್ದಾರೆ.ಇದರಿಂದ ಬೇಸತ್ತ ರಾಜೇಶ್ ಕುಮಾರ್ ವಿಚ್ಛೇದನಕ್ಕಾಗಿ ಕೌಟುಂಬಿಕ ನ್ಯಾಯಾಲಯದ ಮೊರೆ ಹೋಗಿದ್ದಾರೆ.ಪ್ರತಿತಿಂಗಳು 25 ಸಾವಿರ ಜೀವನಾಂಶ ಪಾವತಿಸುತ್ತಾ ಬಂದಿದ್ದಾರೆ.ಕೌಟುಂಬಿಕ ನ್ಯಾಯಾಲಯದಲ್ಲಿ ವಿಚ್ಛೇದನ ಅರ್ಜಿ ತಿರಸ್ಕೃತವಾಗಿದ್ದು ಹೈಕೋರ್ಟ್ ಮೊರೆ ಹೋಗಿದ್ದಾರೆ.ಈ ಬೆಳವಣಿಗೆ ನಂತರ ಉಷಾ,ರಾಜಲಕ್ಷ್ಮಿ,ಸುಂದರಮ್ಮ,ವರ್ಷಾ ರವರು ಮನೆಗೆ ಬಂದು ಬಾಗಿಲು ಹೊಡೆದು ಅವಾಚ್ಯ ಶಬ್ದಗಳಿಂದ ನಿಂದಿಸಿ ಕೇಸ್ ಹಾಕಿದ ವಿಚಾರವನ್ನ ಪ್ರಸ್ತಾಪಿಸಿ ಕೊಲೆ ಬೆದರಿಕೆ ಹಾಕಿದ್ದಾರೆಂದು ಆರೋಪಿಸಿ ರಾಜೇಶ್ ಕುಮಾರ್ 6 ಮಂದಿ ವಿರುದ್ದ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಮುಡಾ ಹಗರಣ ಪ್ರಕರಣ…ಸಿಎಂ ಸಿದ್ದರಾಮಯ್ಯ ಆಪ್ತ ಮುಡಾ ಮಾಜಿ ಅಧ್ಯಕ್ಷ ಕೆ.ಮರೀಗೌಡ ಆಸ್ತಿ ಮುಟ್ಟುಗೋಲು…ಬಣ್ಣ ಬಯಲು ಮಾಡಿದ ಇಡಿ…

ಮುಡಾ ಹಗರಣ ಪ್ರಕರಣ…ಸಿಎಂ ಸಿದ್ದರಾಮಯ್ಯ ಆಪ್ತ ಮುಡಾ ಮಾಜಿ ಅಧ್ಯಕ್ಷ ಕೆ.ಮರೀಗೌಡ…

ಮುಡಾ ಹಗರಣ ಪ್ರಕರಣ…ಸಿಎಂ ಸಿದ್ದರಾಮಯ್ಯ ಆಪ್ತ ಮುಡಾ ಮಾಜಿ ಅಧ್ಯಕ್ಷ ಕೆ.ಮರೀಗೌಡ ಆಸ್ತಿ ಮುಟ್ಟುಗೋಲು…ಬಣ್ಣ ಬಯಲು ಮಾಡಿದ ಇಡಿ… ಬೆಂಗಳೂರು,ಜ22,Tv10 ಕನ್ನಡ ಮುಡಾ ಮಾಜಿ ಆಯುಕ್ತ GT ದಿನೇಶ್…
ಅಯೋಧ್ಯಾ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ…ಎರಡನೇ ವರ್ಷದ ಸಂಭ್ರಮಾಚರಣೆ…

ಅಯೋಧ್ಯಾ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ…ಎರಡನೇ ವರ್ಷದ ಸಂಭ್ರಮಾಚರಣೆ…

ಅಯೋಧ್ಯಾ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ…ಎರಡನೇ ವರ್ಷದ ಸಂಭ್ರಮಾಚರಣೆ… ಮೈಸೂರು,ಜ22,Tv10 ಕನ್ನಡ ಅಯೋಧ್ಯೆಯ ಭವ್ಯ ಮಂದಿರದಲ್ಲಿ ಮರ್ಯಾದಾ ಪುರುಷೋತ್ತಮ ಶ್ರೀರಾಮಚಂದ್ರನ ಪ್ರಾಣ ಪ್ರತಿಷ್ಠಾಪನೆಯಾಗಿ ಎರಡು ವರ್ಷಗಳು ಪೂರೈಸಿದ ಐತಿಹಾಸಿಕ…
ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ. ಹನೂರು Tv10 ಕನ್ನಡ21/01/2026 ಹನೂರು :ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವಕ ಚಿರತೆ ದಾಳಿಗೆ ಬಲಿಯಾದ…

Leave a Reply

Your email address will not be published. Required fields are marked *