ಕೌಟುಂಬಿಕ ಕಲಹ…ಪತಿಗೆ ಪತ್ನಿಯಿಂದ ಕೊಲೆಬೆದರಿಕೆ…5 ಮಂದಿ ವಿರುದ್ದ FIR ದಾಖಲು…

ಕೌಟುಂಬಿಕ ಕಲಹ…ಪತಿಗೆ ಪತ್ನಿಯಿಂದ ಕೊಲೆಬೆದರಿಕೆ…5 ಮಂದಿ ವಿರುದ್ದ FIR ದಾಖಲು…

  • Crime
  • May 12, 2025
  • No Comment
  • 114

ಮೈಸೂರು,ಮೇ12,Tv10 ಕನ್ನಡ

ಕೌಟುಂಬಿಕ ಕಲಹ ಹಿನ್ನಲೆ ವಿಚ್ಛೇದನ ಕೋರಿ ನ್ಯಾಯಾಲಯದ ಮೊರೆ ಹೋದ ಪತಿಗೆ ಪತ್ನಿಯೇ ಕೊಲೆ ಬೆದರಿಕೆ ಹಾಕಿದ ಆರೋಪ ಕೇಳಿಬಂದಿದೆ.ಪತ್ನಿ,ಅತ್ತೆ ಸೇರಿದಂತೆ 6 ಮಂದಿ ವಿರುದ್ದ ಪತಿ ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.ವೃತ್ತಿಯಲ್ಲಿ ಎಲೆಕ್ಟ್ರಿಕಲ್ ಕಂಟ್ರಾಕ್ಟರ್ ಆಗಿರುವ ರಾಜೇಶ್ ಕುಮಾರ್ ರವರು ಪತ್ನಿ ಉಷಾ,ಅತ್ತೆ ರಾಜಲಕ್ಷ್ಮಿ,ನಾದಿನಿ ವರ್ಷ,ಸುಂದರಮ್ಮ ಸೇರಿದಂತೆ 6 ಮಂದಿ ವಿರುದ್ದ ಕೊಲೆ ಬೆದರಿಕೆ ಹಾಕಿದ್ದಾರೆಂದು ಪ್ರಕರಣ ದಾಖಲಿಸಿದ್ದಾರೆ.

2017 ರಲ್ಲಿ ರಾಜೇಶ್ ಕುಮಾರ್ ಹಾಗೂ ಉಷ ಮದುವೆ ಆಗಿದೆ.ಮ್ಯಾಟ್ರಿಮೋನಿ ಮೂಲಕ ಪರಿಚಯವಾಗಿ ಮದುವೆ ಆಗಿದೆ.ರಾಜೇಶ್ ಕುಮಾರ್ ಪರಿಶಿಷ್ಟ ಜಾತಿಗೆ ಸೇರಿದವರಾಗಿದ್ದಾರೆ.ಉಷಾ ಆಚಾರಿ ಸಮುದಾಯಕ್ಕೆ ಸೇರಿದವರಾಗಿದ್ದಾರೆ.ಮದುವೆ ವೇಳೆ ಉಷಾ ಸಹ ತಾನು ಪರಿಶಿಷ್ಟ ಜಾತಿಗೆ ಸೇರಿದವಳೆಂದು ಸುಳ್ಳು ಹೇಳಿ ನಂಬಿಸಿದ್ದಾರೆಂದು ರಾಜೇಶ್ ಕುಮಾರ್ ಆರೋಪಿಸಿದ್ದಾರೆ.ಮದುವೆ ನಂತರ ಉಷಾ ಜಾತಿ ಬಯಲಾಗಿದೆ.ಈ ವೇಳೆ ಜಾತಿವಿಚಾರದಲ್ಲಿ ಉಷಾ ಹಾಗೂ ಅತ್ತೆ ರಾಜಲಕ್ಷ್ಮಿ ನಿಂದನೆ ಮಾಡಿ ಮಾನಸಿಕ ಕಿರುಕುಳ ನೀಡಿದ್ದಾರೆ.ಇದರಿಂದ ಬೇಸತ್ತ ರಾಜೇಶ್ ಕುಮಾರ್ ವಿಚ್ಛೇದನಕ್ಕಾಗಿ ಕೌಟುಂಬಿಕ ನ್ಯಾಯಾಲಯದ ಮೊರೆ ಹೋಗಿದ್ದಾರೆ.ಪ್ರತಿತಿಂಗಳು 25 ಸಾವಿರ ಜೀವನಾಂಶ ಪಾವತಿಸುತ್ತಾ ಬಂದಿದ್ದಾರೆ.ಕೌಟುಂಬಿಕ ನ್ಯಾಯಾಲಯದಲ್ಲಿ ವಿಚ್ಛೇದನ ಅರ್ಜಿ ತಿರಸ್ಕೃತವಾಗಿದ್ದು ಹೈಕೋರ್ಟ್ ಮೊರೆ ಹೋಗಿದ್ದಾರೆ.ಈ ಬೆಳವಣಿಗೆ ನಂತರ ಉಷಾ,ರಾಜಲಕ್ಷ್ಮಿ,ಸುಂದರಮ್ಮ,ವರ್ಷಾ ರವರು ಮನೆಗೆ ಬಂದು ಬಾಗಿಲು ಹೊಡೆದು ಅವಾಚ್ಯ ಶಬ್ದಗಳಿಂದ ನಿಂದಿಸಿ ಕೇಸ್ ಹಾಕಿದ ವಿಚಾರವನ್ನ ಪ್ರಸ್ತಾಪಿಸಿ ಕೊಲೆ ಬೆದರಿಕೆ ಹಾಕಿದ್ದಾರೆಂದು ಆರೋಪಿಸಿ ರಾಜೇಶ್ ಕುಮಾರ್ 6 ಮಂದಿ ವಿರುದ್ದ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *