ಗ್ರಾ.ಪಂ.ವ್ಯಾಪ್ತಿಯಲ್ಲಿ ನಿರ್ಮಾಣವಾದ ಅನಧಿಕೃತ ಕಟ್ಟಡಗಳ ನೆಲಸಮಗೊಳಿಸಲು ಸರ್ಕಾರದಿಂದ ಆದೇಶ…ನಿಯಮಗಳನ್ನ ಉಲ್ಲಂಘಿಸಿ ನಿರ್ಮಾಣವಾದ ಕಟ್ಟಡ ಮಾಲೀಕರಿಗೆ ಶಾಕ್…

ಗ್ರಾ.ಪಂ.ವ್ಯಾಪ್ತಿಯಲ್ಲಿ ನಿರ್ಮಾಣವಾದ ಅನಧಿಕೃತ ಕಟ್ಟಡಗಳ ನೆಲಸಮಗೊಳಿಸಲು ಸರ್ಕಾರದಿಂದ ಆದೇಶ…ನಿಯಮಗಳನ್ನ ಉಲ್ಲಂಘಿಸಿ ನಿರ್ಮಾಣವಾದ ಕಟ್ಟಡ ಮಾಲೀಕರಿಗೆ ಶಾಕ್…

ಮೈಸೂರು,ಮೇ16,Tv10 ಕನ್ನಡ

ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ನಿರ್ಮಾಣವಾಗಿರುವ ಅನಧಿಕೃತ ಕಟ್ಟಡಗಳನ್ನ ನೆಲಸಮಗೊಳಿಸುವಂತೆ ಸರ್ಕಾರದಿಂದ ಎಲ್ಲಾ ಗ್ರಾಮ ಪಂಚಾಯ್ತಿಗೆ ಆದೇಶ ಹೊರಡಿಸಲಾಗಿದೆ.ನಿಯಮಗಳನ್ನ ಉಲ್ಲಂಘಿಸಿ ನಿರ್ಮಾಣವಾಗುತ್ತಿರುವ ವಾಣಿಜ್ಯ,ವಸತಿ ಹಾಗೂ ಇತರೆ ಕಟ್ಟಡಗಳ ಕಾಮಗಾರಿ ಸ್ಥಗಿತಗೊಳಿಸುವುದು ಹಾಗೂ ಪೂರ್ಣಗೊಂಡ ಕಟ್ಟಡಗಳನ್ನ ನೆಲಸಮಗೊಳಿಸುವಂತೆ ಸರ್ಕಾರ ಸುತ್ತೋಲೆ ಹೊರಡಿಸಿದೆ.ಮಾನ್ಯ ಸರ್ವೋಚ್ಛ ನ್ಯಾಯಾಲಯದ ಆದೇಶದಂತೆ ಎಲ್ಲಾ ಗ್ರಾಮ ಪಂಚಾಯ್ತಿ ಅಧಿಕಾರಿಗಳು ಆದೇಶವನ್ನ ಪಾಲಿಸುವಂತೆ ಸೂಚಿಸಲಾಗಿದೆ.ಆದೇಶ ಪಾಲಿಸಲು ಕೆಲವು ಮಾರ್ಗಸೂಚಿಗಳನ್ನೂ ಸಹ ನೀಡಿದೆ.ಗ್ರಾಮ ಪಂಚಾಯ್ತಿಯಿಂದ ಅನುಮತಿ ಪಡೆಯದೆ ನಿರ್ಮಾಣವಾಗುತ್ತಿರುವ ಕಟ್ಟಡ ಕಾಮಗಾರಿ ಸ್ಥಗಿತಗೊಳಿಸಬೇಕು.ಒಂದು ವೇಳೆ ಅನುಮತಿ ಪಡೆದಿದ್ದರೂ ನಿಯಮಾನುಸಾರ ಹಾಗೂ ಅನುಮೋದಿತ ನಕ್ಷೆಯಂತೆ ನಿರ್ಮಾಣವಾಗುತ್ತಿದೆಯೇ ಎಂದು ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಸುತ್ತೋಲೆಯಲ್ಲಿ ತಿಳಿಸಿದೆ.ಅನುಮತಿ ಪಡೆದ ಕಟ್ಟಡ ಕಾಮಗಾರಿ ಅನುಮೋದಿತ ನಕ್ಷೆಗಿಂತ ಭಿನ್ನವಾಗಿದ್ದರೆ ಕೂಡಲೇ ನೋಟೀಸ್ ನೀಡಿ ಸರಿಪಡಿಸುವಂತೆ ಸಲಹೆ ನೀಡಬೇಕು.ಅಲ್ಲದೆ ಸಲಹೆಯಂತೆ ನಿರ್ಮಾಣವಾಗುತ್ತಿರುವ ಬಗ್ಗೆ ಖಾತರಿಪಡಿಸಿಕೊಳ್ಳಬೇಕೆಂದು ಸೂಚನೆ ನೀಡಲಾಗಿದೆ.

ಅನಧಿಕೃತ ಕಟ್ಟಡಗಳ ನೆಲಸಮಗೊಳಿಸುವ ಪ್ರಕ್ರಿಯೆ ಆರಂಭಿಸಬೇಕು.ಈ ಕಾರ್ಯಕ್ಕೆ ಸ್ಥಳೀಯ ಕಂದಾಯ ಇಲಾಖೆಗೆ ಪೊಲೀಸರು ನೆರವು ನೀಡಬೇಕು.ಹಾಗೊಂದು ವೇಳೆ ಸಹಕರಿಸದಿದ್ದಲ್ಲಿ ಸಂಭಂಧಪಟ್ಟಿ ಇಲಾಖೆ ಅಧಿಕಾರಿಗಳ ವಿರುದ್ದ ಕ್ರಮ ಕೈಗೊಳ್ಳುವುದಾಗಿ ಸುತ್ತೋಲೆಯಲ್ಲಿ ತಿಳಿಸಿದೆ.ಗ್ರಾಮ ಪಂಚಾಯ್ತಿ ಅಭಿವೃದ್ದಿ ಅಧಿಕಾರಿ ಅಥವಾ ಸಂಭಂಧಿಸಿದ ಯಾವುದೇ ಸಿಬ್ಬಂದಿಗಳನ್ನ ಗ್ರಾಮಾವಾರು ನಿಯೋಜಿಸಿ ಯಾವುದೇ ಲೈಸೆನ್ಸ್ ಇಲ್ಲದ ಕಟ್ಟಡ ನಿರ್ಮಾಣವಾಗುತ್ತಿಲ್ಲವೆಂದು ಧೃಢೀಕರಣ ಪಡೆಯಬೇಕು.ಲೈಸೆನ್ಸ್ ಇಲ್ಲದೆ ಕಟ್ಟಡ ನಿರ್ಮಾಣವಾಗುತ್ತಿರುವ ಬಗ್ಗೆ ವರದಿ ನೀಡಿದ ತಕ್ಷಣ ಕ್ರಮ ಕೈಗೊಳ್ಖಬೇಕು.ತಾಲೂಕು ಮತ್ತು ಜಿಲ್ಲಾ ಪಂಚಾಯ್ತಿ ಅಧಿಕಾರಿಗಳು ತ್ರೈಮಾಸಿಕ ತಪಾಸಣೆ ನಡೆಸಿ ಅನಧಿಕೃತ ಕಟ್ಟಡಗಳ ನಿರ್ಮಾಣ ಕುರಿತ ಮಾಹಿತಿ ಪಡೆದು ಕ್ರಮ ಕೈಗೊಳ್ಳುವಂತೆ ಗ್ರಾಮ ಪಂಚಾಯ್ತಿ ಅಧಿಕಾರಿಗಳಿಗೆ ಸೂಕ್ತ ಆದೇಶ ನೀಡಬೇಕೆಂದು ತಿಳಿಸಲಾಗಿದೆ.

ಗ್ರಾಮಪಂಚಾಯ್ತಿ ವ್ಯಾಪ್ತಿಯಲ್ಲಿ ಅನಧಿಕೃತ ಕಟ್ಟಡಗಳು ನಿರ್ಮಾಣವಾಗುತ್ತಿದ್ದರೆ ನಿರ್ಭಂಧಿಸುವಂತೆ ಹಾಗೂ ಸಾರ್ವಜನಿಕ/ಸರ್ಕಾರದ ಜಾಗದಲ್ಲಿ ಮತ್ತು ಕೆರೆ,ಕುಂಟೆ,ಕಾಲುವೆಗಳ ಮೇಲೆ ನಿರ್ಮಿಸುತ್ತಿರುವ ಅನಧಿಕೃತ ಕಟ್ಟಡಗಳನ್ನ ಸರ್ವೋಚ್ಛ ನ್ಯಾಯಾಲಯದ ಆದೇಶದಂತೆ ಹಾಗೂ ಮಾರ್ಗಸೂಚಿಗಳ ಅನ್ವಯದಂತೆ ನೆಲಸಮಗೊಳಿಸಲು ಕ್ರಮ ಕೈಗೊಳ್ಳುವಂತೆ ಎಲ್ಲಾ ಗ್ರಾಮ ಪಂಚಾಯ್ತಿ,ತಾಲೂಕು ಪಂಚಾಯ್ತಿ ಹಾಗೂ ಜಿಲ್ಲಾಪಂಚಾಯ್ತಿ ಗಳಿಗೆ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆ ಉಪಕಾರ್ಯದರ್ಶಿಗಳು ಆದೇಶ ಹೊರಡಿಸಿದ್ದಾರೆ…

Spread the love

Related post

ಮುಡಾ ಹಗರಣ ಪ್ರಕರಣ…ಸಿಎಂ ಸಿದ್ದರಾಮಯ್ಯ ಆಪ್ತ ಮುಡಾ ಮಾಜಿ ಅಧ್ಯಕ್ಷ ಕೆ.ಮರೀಗೌಡ ಆಸ್ತಿ ಮುಟ್ಟುಗೋಲು…ಬಣ್ಣ ಬಯಲು ಮಾಡಿದ ಇಡಿ…

ಮುಡಾ ಹಗರಣ ಪ್ರಕರಣ…ಸಿಎಂ ಸಿದ್ದರಾಮಯ್ಯ ಆಪ್ತ ಮುಡಾ ಮಾಜಿ ಅಧ್ಯಕ್ಷ ಕೆ.ಮರೀಗೌಡ…

ಮುಡಾ ಹಗರಣ ಪ್ರಕರಣ…ಸಿಎಂ ಸಿದ್ದರಾಮಯ್ಯ ಆಪ್ತ ಮುಡಾ ಮಾಜಿ ಅಧ್ಯಕ್ಷ ಕೆ.ಮರೀಗೌಡ ಆಸ್ತಿ ಮುಟ್ಟುಗೋಲು…ಬಣ್ಣ ಬಯಲು ಮಾಡಿದ ಇಡಿ… ಬೆಂಗಳೂರು,ಜ22,Tv10 ಕನ್ನಡ ಮುಡಾ ಮಾಜಿ ಆಯುಕ್ತ GT ದಿನೇಶ್…
ಅಯೋಧ್ಯಾ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ…ಎರಡನೇ ವರ್ಷದ ಸಂಭ್ರಮಾಚರಣೆ…

ಅಯೋಧ್ಯಾ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ…ಎರಡನೇ ವರ್ಷದ ಸಂಭ್ರಮಾಚರಣೆ…

ಅಯೋಧ್ಯಾ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ…ಎರಡನೇ ವರ್ಷದ ಸಂಭ್ರಮಾಚರಣೆ… ಮೈಸೂರು,ಜ22,Tv10 ಕನ್ನಡ ಅಯೋಧ್ಯೆಯ ಭವ್ಯ ಮಂದಿರದಲ್ಲಿ ಮರ್ಯಾದಾ ಪುರುಷೋತ್ತಮ ಶ್ರೀರಾಮಚಂದ್ರನ ಪ್ರಾಣ ಪ್ರತಿಷ್ಠಾಪನೆಯಾಗಿ ಎರಡು ವರ್ಷಗಳು ಪೂರೈಸಿದ ಐತಿಹಾಸಿಕ…
ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ. ಹನೂರು Tv10 ಕನ್ನಡ21/01/2026 ಹನೂರು :ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವಕ ಚಿರತೆ ದಾಳಿಗೆ ಬಲಿಯಾದ…

Leave a Reply

Your email address will not be published. Required fields are marked *