ರೈಲ್ವೆ ಸೆಂಟ್ರಲ್ ವರ್ಕ್ ಷಾಪ್ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ಆರೋಪ…ಕೊಲೆ ಬೆದರಿಕೆ…ನಾಲ್ವರು ಹಿರಿಯ ಅಧಿಕಾರಿಗಳ ವಿರುದ್ದ FIR ದಾಖಲು…

ರೈಲ್ವೆ ಸೆಂಟ್ರಲ್ ವರ್ಕ್ ಷಾಪ್ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ಆರೋಪ…ಕೊಲೆ ಬೆದರಿಕೆ…ನಾಲ್ವರು ಹಿರಿಯ ಅಧಿಕಾರಿಗಳ ವಿರುದ್ದ FIR ದಾಖಲು…

ಮೈಸೂರು,ಮೇ18,Tv10 ಕನ್ನಡ

ಮೈಸೂರು ಕೇಂದ್ರ ರೈಲ್ವೆ ವರ್ಕ್ ಷಾಪ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮಹಿಳಾ ಸಿಬ್ಬಂದಿಗೆ ನಾಲ್ವರು ಹಿರಿಯ ಅಧಿಕಾರಿಗಳು ಲೈಂಗಿಕ ಕಿರುಕುಳ ನೀಡಿದ ಆರೋಪ ಮಾಡಲಾಗಿದೆ.ನೊಂದ ಮಹಿಳಾ ಸಿಬ್ಬಂದಿ ನಾಲ್ವರು ಹಿರಿಯ ಅಧಿಕಾರಿಗಳ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಅಶೋಕಾಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.ಒಬ್ಬ ಅಧಿಕಾರಿ ಬಿಹಾರದಿಂದ ಹುಡುಗರನ್ನ ಕರೆಸಿ ಶೂಟ್ ಮಾಡಿಸಿ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆಂದು ಮಹಿಳಾ ಸಿಬ್ಬಂದಿ ಆರೋಪಿಸಿದ್ದಾರೆ.

ಎಸಿ ಮೆಕ್ಯಾನಿಕಲ್ ಶಾಪ್ ನ ಸೀನಿಯರ್ ಸೆಕ್ಷನ್ ಇಂಜಿನಿಯರ್ ಜೆಡ್ ಥಾಮಸ್,ಸೀನಿಯರ್ ಸೆಕ್ಷನ್ ಇಂಜಿನಿಯರ್ ಗೀತೇಶ್ ಸಿಂಗ್,ಸೀನಿಯರ್ ಸೆಕ್ಷನ್ ಇಂಜಿನಿಯರ್ ಸುಜಿತ್ ಹಾಗೂ ಪ್ರತಿಭಾ ಚೌಹಾಣ್ ಎಂಬುವರ ವಿರುದ್ದ ಎಫ್.ಐ.ಆರ್.ದಾಖಲಾಗಿದೆ.ನೊಂದ ಮಹಿಳಾ ಸಿಬ್ಬಂದಿ ಕೆಲಸ ಮಾಡುವ ವೇಳೆ ಜೆಡ್ ಥಾಮಸ್ ರವರು ಲೈಂಗಿಕವಾಗಿ ಮಾತನಾಡುವುದು,ಲೈಂಗಿಕ ಚಿತ್ರ ಬಿಡಿಸಿ ತೋರಿಸುವುದು,ಕೈಯಲ್ಲಿ ಕೆಟ್ಟದಾಗಿ ಸನ್ನೆ ಮಾಡಿ ಮಾನಸಿಕವಾಗಿ ಹಿಂಸೆ ನೀಡಿದ್ದಾರೆ.ಈ ಬಗ್ಗೆ ಮಹಿಳಾ ಸಿಬ್ಬಂದಿ ಆಂತರಿಕ ಸಮಿತಿಗೆ ದೂರು ನೀಡಿದ್ದಾರೆ.ದೂರು ನೀಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ.ಜೆಡ್ ಥಾಮಸ್ ಬೇರೆ ವಿಭಾಗಕ್ಕೆ ವರ್ಗಾವಣೆ ಆದನಂತರ ಗೀತೇಶ್ ಸಿಂಗ್ ಹಾಗೂ ಸುಜಿತ್ ರವರು ಕೆಲಸ ಮಾಡುವಾಗ ಫೋಟೋ ಹಾಗೂ ವಿಡಿಯೋ ತೆಗೆದಿದ್ದಾರೆ.ಇದಕ್ಕೆ ಸೀನಿಯರ್ ಸೆಕ್ಷನ್ ಇಂಜಿನಿಯರ್ ಪ್ರತಿಭಾ ಚೌಹಾಣ್ ಬೆಂಬಲ ನೀಡಿರುವುದಾಗಿ ನೊಂದ ಸಿಬ್ಬಂದಿ ಆರೋಪಿಸಿದ್ದಾರೆ.ಮೂವರು ಸೇರಿ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆಂದು ಕೆಲಸ ಮಾಡಲು ತೊಂದರೆ ಮಾಡುತ್ತಿದ್ದಾರೆಂದು ಆರೋಪಿಸಿದ್ದಾರೆ.ಅಲ್ಲದೆ ಗೀತೇಶ್ ಸಿಂಗ್ ರವರು ಬಿಹಾರದಿಂದ ಹುಡುಗರನ್ನ ಕರೆಸಿ ಸಾಕ್ಷಿ ಇಲ್ಲದಂತೆ ಶೂಟ್ ಮಾಡಿಸುವುದಾಗಿ ಬೆದರಿಕೆ ಹಾಕಿದ್ದಾರೆ.ನಾಲ್ವರು ಕೊಲೆ ಬೆದರಿಕೆ ಹಾಕಿದ್ದಾರೆಂದು ಆರೋಪಿಸಿ ಕಾನೂನು ಕ್ರಮ ಜರುಗಿಸುವಂತೆ ಎಫ್.ಐ.ಆರ್.ನಲ್ಲಿ ಉಲ್ಲೇಖಿಸಲಾಗಿದೆ…

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *