ರೈಲ್ವೆ ಸೆಂಟ್ರಲ್ ವರ್ಕ್ ಷಾಪ್ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ಆರೋಪ…ಕೊಲೆ ಬೆದರಿಕೆ…ನಾಲ್ವರು ಹಿರಿಯ ಅಧಿಕಾರಿಗಳ ವಿರುದ್ದ FIR ದಾಖಲು…

ರೈಲ್ವೆ ಸೆಂಟ್ರಲ್ ವರ್ಕ್ ಷಾಪ್ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ಆರೋಪ…ಕೊಲೆ ಬೆದರಿಕೆ…ನಾಲ್ವರು ಹಿರಿಯ ಅಧಿಕಾರಿಗಳ ವಿರುದ್ದ FIR ದಾಖಲು…

ಮೈಸೂರು,ಮೇ18,Tv10 ಕನ್ನಡ

ಮೈಸೂರು ಕೇಂದ್ರ ರೈಲ್ವೆ ವರ್ಕ್ ಷಾಪ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮಹಿಳಾ ಸಿಬ್ಬಂದಿಗೆ ನಾಲ್ವರು ಹಿರಿಯ ಅಧಿಕಾರಿಗಳು ಲೈಂಗಿಕ ಕಿರುಕುಳ ನೀಡಿದ ಆರೋಪ ಮಾಡಲಾಗಿದೆ.ನೊಂದ ಮಹಿಳಾ ಸಿಬ್ಬಂದಿ ನಾಲ್ವರು ಹಿರಿಯ ಅಧಿಕಾರಿಗಳ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಅಶೋಕಾಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.ಒಬ್ಬ ಅಧಿಕಾರಿ ಬಿಹಾರದಿಂದ ಹುಡುಗರನ್ನ ಕರೆಸಿ ಶೂಟ್ ಮಾಡಿಸಿ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆಂದು ಮಹಿಳಾ ಸಿಬ್ಬಂದಿ ಆರೋಪಿಸಿದ್ದಾರೆ.

ಎಸಿ ಮೆಕ್ಯಾನಿಕಲ್ ಶಾಪ್ ನ ಸೀನಿಯರ್ ಸೆಕ್ಷನ್ ಇಂಜಿನಿಯರ್ ಜೆಡ್ ಥಾಮಸ್,ಸೀನಿಯರ್ ಸೆಕ್ಷನ್ ಇಂಜಿನಿಯರ್ ಗೀತೇಶ್ ಸಿಂಗ್,ಸೀನಿಯರ್ ಸೆಕ್ಷನ್ ಇಂಜಿನಿಯರ್ ಸುಜಿತ್ ಹಾಗೂ ಪ್ರತಿಭಾ ಚೌಹಾಣ್ ಎಂಬುವರ ವಿರುದ್ದ ಎಫ್.ಐ.ಆರ್.ದಾಖಲಾಗಿದೆ.ನೊಂದ ಮಹಿಳಾ ಸಿಬ್ಬಂದಿ ಕೆಲಸ ಮಾಡುವ ವೇಳೆ ಜೆಡ್ ಥಾಮಸ್ ರವರು ಲೈಂಗಿಕವಾಗಿ ಮಾತನಾಡುವುದು,ಲೈಂಗಿಕ ಚಿತ್ರ ಬಿಡಿಸಿ ತೋರಿಸುವುದು,ಕೈಯಲ್ಲಿ ಕೆಟ್ಟದಾಗಿ ಸನ್ನೆ ಮಾಡಿ ಮಾನಸಿಕವಾಗಿ ಹಿಂಸೆ ನೀಡಿದ್ದಾರೆ.ಈ ಬಗ್ಗೆ ಮಹಿಳಾ ಸಿಬ್ಬಂದಿ ಆಂತರಿಕ ಸಮಿತಿಗೆ ದೂರು ನೀಡಿದ್ದಾರೆ.ದೂರು ನೀಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ.ಜೆಡ್ ಥಾಮಸ್ ಬೇರೆ ವಿಭಾಗಕ್ಕೆ ವರ್ಗಾವಣೆ ಆದನಂತರ ಗೀತೇಶ್ ಸಿಂಗ್ ಹಾಗೂ ಸುಜಿತ್ ರವರು ಕೆಲಸ ಮಾಡುವಾಗ ಫೋಟೋ ಹಾಗೂ ವಿಡಿಯೋ ತೆಗೆದಿದ್ದಾರೆ.ಇದಕ್ಕೆ ಸೀನಿಯರ್ ಸೆಕ್ಷನ್ ಇಂಜಿನಿಯರ್ ಪ್ರತಿಭಾ ಚೌಹಾಣ್ ಬೆಂಬಲ ನೀಡಿರುವುದಾಗಿ ನೊಂದ ಸಿಬ್ಬಂದಿ ಆರೋಪಿಸಿದ್ದಾರೆ.ಮೂವರು ಸೇರಿ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆಂದು ಕೆಲಸ ಮಾಡಲು ತೊಂದರೆ ಮಾಡುತ್ತಿದ್ದಾರೆಂದು ಆರೋಪಿಸಿದ್ದಾರೆ.ಅಲ್ಲದೆ ಗೀತೇಶ್ ಸಿಂಗ್ ರವರು ಬಿಹಾರದಿಂದ ಹುಡುಗರನ್ನ ಕರೆಸಿ ಸಾಕ್ಷಿ ಇಲ್ಲದಂತೆ ಶೂಟ್ ಮಾಡಿಸುವುದಾಗಿ ಬೆದರಿಕೆ ಹಾಕಿದ್ದಾರೆ.ನಾಲ್ವರು ಕೊಲೆ ಬೆದರಿಕೆ ಹಾಕಿದ್ದಾರೆಂದು ಆರೋಪಿಸಿ ಕಾನೂನು ಕ್ರಮ ಜರುಗಿಸುವಂತೆ ಎಫ್.ಐ.ಆರ್.ನಲ್ಲಿ ಉಲ್ಲೇಖಿಸಲಾಗಿದೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *