ಮಾವಿನಕಾಯಿಗಾಗಿ ಗಲಾಟೆ…ಓರ್ವನ ಕೊ* ಯಲ್ಲಿ ಅಂತ್ಯ…

ಮಾವಿನಕಾಯಿಗಾಗಿ ಗಲಾಟೆ…ಓರ್ವನ ಕೊ* ಯಲ್ಲಿ ಅಂತ್ಯ…

ಹುಣಸೂರು,ಮೇ19,Tv10 ಕನ್ನಡ

ಮಾವಿನಕಾಯಿ ಕೊಯ್ಯುವ ವಿಚಾರದಲ್ಲಿ ಶುರುವಾದ ಜಗಳ ಓರ್ವನ ಕೊಯಲ್ಲಿ ಅಂತ್ಯವಾದ ಘಟನೆ ಹುಣಸೂರು ತಾಲೂಕಿನ ಶಂಕಹಳ್ಳಿ ಗ್ರಾಮದಲ್ಲಿ ನಡೆದಿದೆ.ಮಲ್ಲೇಶ್ ಮೃತ ದುರ್ದೈವಿ.ಕೊ ಆರೋಪಿ ಚೇತನ್ ಇದೀಗ ಪೊಲೀಸರ ವಶದಲ್ಲಿದ್ದಾನೆ.

ಶಂಕಹಳ್ಳಿಯಲ್ಲಿರುವ ಜಮೀನಿನಲ್ಲಿ ಮಲ್ಲೇಶ್ ವ್ಯವಸಾಯ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು.ಜಮೀನು ವಿಚಾರದಲ್ಲಿ ವಿವಾದ ಶುರುವಾಗಿ ನ್ಯಾಯಾಲಯದ ಮೆಟ್ಟಿಲೇರಿತ್ತು.ಈ ವೇಳೆ ಮಲ್ಲೇಶ್ ಜಮೀನಿನಲ್ಲಿದ್ದ ಮಾವಿನ ಮರದಿಂದ ಕಾಯಿಗಳನ್ನ ಕೀಳಿಸುವಾಗ ಚೇತನ್ ಕಿರೀಕ್ ತೆಗೆದಿದ್ದಾನೆ.ಈ ವೇಳೆ ಮಾತಿಗೆ ಮಾತು ಬೆಳೆದಿದೆ.ಚೇತನ್ ಜೊತೆ ಸರಿತಾ,ಪ್ರವೀಣ,ಪವನ್,ಮಂಜುಳ,ಕರಿಗೌಡ ಸಹ ಸೇರಿ ಗಲಾಟೆ ಮಾಡಿದ್ದಾರೆ.ಈ ವೇಳೆ ಚೇತನ್ ತನ್ನ ಬಳಿ ಇದ್ದ ಚಾಕುವಿನಿಂದ ಮಲ್ಲೇಶ್ ಗೆ ಇರಿದು ಪರಾರಿಯಾಗಿದ್ದಾನೆ.ರಕ್ತಸ್ರಾವದಿಂದ ನರಳುತ್ತಿದ್ದ ಮಲ್ಲೇಶ್ ರನ್ನ ಆಸ್ಪತ್ರೆಗೆ ಸಾಗಿಸಿದ್ದು ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ.ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ.ಮೃತ ಮಲ್ಲೇಶ್ ಪತ್ನಿ ನಾಗಮ್ಮ ಚೇತನ್ ಸೇರಿದಂತೆ 6 ಮಂದಿ ವಿರುದ್ದ ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *