ಮಾವಿನಕಾಯಿಗಾಗಿ ಗಲಾಟೆ…ಓರ್ವನ ಕೊ* ಯಲ್ಲಿ ಅಂತ್ಯ…

ಮಾವಿನಕಾಯಿಗಾಗಿ ಗಲಾಟೆ…ಓರ್ವನ ಕೊ* ಯಲ್ಲಿ ಅಂತ್ಯ…

ಹುಣಸೂರು,ಮೇ19,Tv10 ಕನ್ನಡ

ಮಾವಿನಕಾಯಿ ಕೊಯ್ಯುವ ವಿಚಾರದಲ್ಲಿ ಶುರುವಾದ ಜಗಳ ಓರ್ವನ ಕೊಯಲ್ಲಿ ಅಂತ್ಯವಾದ ಘಟನೆ ಹುಣಸೂರು ತಾಲೂಕಿನ ಶಂಕಹಳ್ಳಿ ಗ್ರಾಮದಲ್ಲಿ ನಡೆದಿದೆ.ಮಲ್ಲೇಶ್ ಮೃತ ದುರ್ದೈವಿ.ಕೊ ಆರೋಪಿ ಚೇತನ್ ಇದೀಗ ಪೊಲೀಸರ ವಶದಲ್ಲಿದ್ದಾನೆ.

ಶಂಕಹಳ್ಳಿಯಲ್ಲಿರುವ ಜಮೀನಿನಲ್ಲಿ ಮಲ್ಲೇಶ್ ವ್ಯವಸಾಯ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು.ಜಮೀನು ವಿಚಾರದಲ್ಲಿ ವಿವಾದ ಶುರುವಾಗಿ ನ್ಯಾಯಾಲಯದ ಮೆಟ್ಟಿಲೇರಿತ್ತು.ಈ ವೇಳೆ ಮಲ್ಲೇಶ್ ಜಮೀನಿನಲ್ಲಿದ್ದ ಮಾವಿನ ಮರದಿಂದ ಕಾಯಿಗಳನ್ನ ಕೀಳಿಸುವಾಗ ಚೇತನ್ ಕಿರೀಕ್ ತೆಗೆದಿದ್ದಾನೆ.ಈ ವೇಳೆ ಮಾತಿಗೆ ಮಾತು ಬೆಳೆದಿದೆ.ಚೇತನ್ ಜೊತೆ ಸರಿತಾ,ಪ್ರವೀಣ,ಪವನ್,ಮಂಜುಳ,ಕರಿಗೌಡ ಸಹ ಸೇರಿ ಗಲಾಟೆ ಮಾಡಿದ್ದಾರೆ.ಈ ವೇಳೆ ಚೇತನ್ ತನ್ನ ಬಳಿ ಇದ್ದ ಚಾಕುವಿನಿಂದ ಮಲ್ಲೇಶ್ ಗೆ ಇರಿದು ಪರಾರಿಯಾಗಿದ್ದಾನೆ.ರಕ್ತಸ್ರಾವದಿಂದ ನರಳುತ್ತಿದ್ದ ಮಲ್ಲೇಶ್ ರನ್ನ ಆಸ್ಪತ್ರೆಗೆ ಸಾಗಿಸಿದ್ದು ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ.ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ.ಮೃತ ಮಲ್ಲೇಶ್ ಪತ್ನಿ ನಾಗಮ್ಮ ಚೇತನ್ ಸೇರಿದಂತೆ 6 ಮಂದಿ ವಿರುದ್ದ ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಸಿಸಿಬಿ ಪೊಲೀಸರ ಕಾರ್ಯಾಚರಣೆ…ನಾಲ್ವರ ಬಂಧನ…10.40 ಲಕ್ಷ ಮೌಲ್ಯದ ಎಂಡಿಎಂಎ ಒಂದು ಕಾರ್ ವಶ…

ಸಿಸಿಬಿ ಪೊಲೀಸರ ಕಾರ್ಯಾಚರಣೆ…ನಾಲ್ವರ ಬಂಧನ…10.40 ಲಕ್ಷ ಮೌಲ್ಯದ ಎಂಡಿಎಂಎ ಒಂದು ಕಾರ್…

ಸಿಸಿಬಿ ಪೊಲೀಸರ ಕಾರ್ಯಾಚರಣೆ…ನಾಲ್ವರ ಬಂಧನ…10.40 ಲಕ್ಷ ಮೌಲ್ಯದ ಎಂಡಿಎಂಎ ಒಂದು ಕಾರ್ ವಶ… ಮೈಸೂರು,ಫೆ23,Tv10 ಕನ್ನಡ ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆಯಲ್ಲಿ ನಾಲ್ವರು ಆರೋಪಿಗಳನ್ನ ವಶಕ್ಕೆ ಪಡೆಯಲಾಗಿದ್ದು ಬಂಧಿತರಿಂದ…
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ! ಆಲ್ಫಾ ಅಂದರೇನೇ ಡಾಮಿನೇಶನ್. ಈ ವಾರ ತೆರೆಕಂಡ ಆಲ್ಫಾ‌ ಚಿತ್ರದಲ್ಲಿ ಡಾಮಿನೇಟ್ ಮಾಡುತ್ತಿರುವವರೇ ಚಿತ್ರದ ನಾಯಕ ಹೇಮಂತ್ ಕುಮಾರ್. ಹೇಮಂತ್…
ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ ಸಂಕೀರ್ಣ…ಸುಮಾರು 250 ಕೋಟಿ ಮೌಲ್ಯದ ಆಸ್ತಿ…ಅಲರ್ಟ್ ಆಗ್ತಾರ ಆಯುಕ್ತ ರಕ್ಷಿತ್…

ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ…

ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ ಸಂಕೀರ್ಣ…ಸುಮಾರು 250 ಕೋಟಿ ಮೌಲ್ಯದ ಆಸ್ತಿ…ಅಲರ್ಟ್ ಆಗ್ತಾರ ಆಯುಕ್ತ ರಕ್ಷಿತ್… ಮೈಸೂರು,ಫೆ17,Tv10 ಕನ್ನಡ ಮೈಸೂರಿನ ಹೃದಯಭಾಗದಲ್ಲಿರುವ…

Leave a Reply

Your email address will not be published. Required fields are marked *