ಬಲಮುರಿ ಎಡಮುರಿ ಫಾಲ್ಸ್ ಗೆ ಎಸ್ಪಿ ಮಲ್ಲಿಕಾರ್ಜುನ ಬಾಲದಿಂಡಿ ಭೇಟಿ…ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಸೂಚನೆ…

ಬಲಮುರಿ ಎಡಮುರಿ ಫಾಲ್ಸ್ ಗೆ ಎಸ್ಪಿ ಮಲ್ಲಿಕಾರ್ಜುನ ಬಾಲದಿಂಡಿ ಭೇಟಿ…ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಸೂಚನೆ…

ಕೆ.ಆರ್.ಎಸ್,ಮೇ20,Tv10 ಕನ್ನಡ

ಬಲಮುರಿ ಹಾಗೂ ಎಡಮುರಿ ಫಾಲ್ಸ್ ಗಳಿಗೆ ಮಂಡ್ಯ ಜಿಲ್ಲಾ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ರವರು ಭೇಟಿ ನೀಡಿ ಸುರಕ್ಷತಾ ಕ್ರಮದ ಬಗ್ಗೆ ಕೆಲವು ಸೂಚನೆಗಳನ್ನ ನೀಡಿದರು.ಶಾಲಾ ಕಾಲೇಜುಗಳಿಗೆ ರಜೆ ಹಿನ್ನಲೆ ಹಾಗೂ ಸರ್ಕಾರಿ ರಜೆಗಳ ಹಿನ್ನಲೆ ಎರಡೂ ಪಾಲ್ಸ್ ಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸಿ ನದಿಯಲ್ಲಿ ಈಜಲು ಇಳಿದು ಮೃತಪಡುತ್ತಿರುವ ಪ್ರಕರಣಗಳು ಆಗಾಗ ನಡೆಯುತ್ತಿವರ.ಈ ಹಿನ್ನಲೆ ತೆಗೆದುಕೊಳ್ಳಬೇಕಾದ ಅಗತ್ಯ ಮುಂಜಾಗ್ರತಾ ಕ್ರಮ ಗಳ ಬಗ್ಗೆ ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು.ಪ್ರತಿ ನಿತ್ಯ ಸಾವಿರಾರು ಪ್ರವಾಸಿಗರು ತಾಲೂಕಿನ ಎಡಮುರಿ ಹಾಗೂ ಬಲಮುರಿ ಫಾಲ್ಸ್ ಗಳಿಗೆ ಬೇಟಿ ನೀಡಿ ನೀರಿಗಿಳಿ ಆಟವಾಡುತ್ತಾರೆ ಇದರಲ್ಲಿ ಹಲವರು ನೀರಿನ ಸುಳಿ ಗೊತ್ತಿಲ್ಲದೆ ಮುಳುಗಿ ಸತ್ತರೆ ಇನ್ನೂ‌ ಹಲವಾರು ಜನ ಕುಡಿದು ಪಾರ್ಟಿ ಮಾಡಿ ಮೋಜು ಮಸ್ತಿ ಮಾಡಿ ನಂತರ ನೀರಿಗಿಳಿದು ಸಾವನಪ್ಪುತ್ತಾರೆ.ಈಗ ಸಾವನಪ್ಪುವ ಜನರಲ್ಲಿ ಎಲ್ಲರೂ ಕೂಡ ಯುವಕರೇ ಆಗಿರುವುದು ದುರಂತವೇ ಸರಿ. ಹಾಗಾಗಿ ಪೊಲೀಸ್ ಇಲಾಖೆ ಇನ್ನಾದರು ಎಚ್ಚೆತ್ತು ಪ್ರವಾಸಿಗರನ್ನು ನೀರಿಗಿಳಿಯುವುದನ್ನು ನಿಷೇದಿಸ ಬೇಕಿದೆ ಎಂಬುದು ಸ್ಥಳೀಯರು ಒತ್ತಾಯಿಸಿದ್ದಾರೆ…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *