ನನ್ನ ಲವರ್ ತಂಟೆಗೆ ಬಂದ್ರೆ ಹುಷಾರ್…ಪ್ರಿಯತಮಳ ಜೊತೆ ಚಾಟ್ ಮಾಡಿದ ಯುವಕನಿಗೆ ಪ್ರಿಯತಮನಿಂದ ಹಲ್ಲೆ…ಇಬ್ಬರ ವಿರುದ್ದ FIR…

ನನ್ನ ಲವರ್ ತಂಟೆಗೆ ಬಂದ್ರೆ ಹುಷಾರ್…ಪ್ರಿಯತಮಳ ಜೊತೆ ಚಾಟ್ ಮಾಡಿದ ಯುವಕನಿಗೆ ಪ್ರಿಯತಮನಿಂದ ಹಲ್ಲೆ…ಇಬ್ಬರ ವಿರುದ್ದ FIR…

  • Crime
  • May 23, 2025
  • No Comment
  • 93

ಮೈಸೂರು,ಮೇ22,Tv10 ಕನ್ನಡ

ಪ್ರಿಯತಮಳ ಜೊತೆ ಮೊಬೈಲ್ ನಲ್ಲಿ ಮಾತನಾಡಿದ ಯುವಕನ ಮೇಲೆ ಲವರ್ ಹಲ್ಲೆ ನಡೆಸಿದ ಘಟನೆ ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ವೇಣುಗೋಪಾಲ್ (21) ಗಾಯಗೊಂಡ ಯುವಕ.ಲವರ್ ರಾಜು ಹಾಗೂ ಆತನ ಸ್ನೇಹಿತನ ಮೇಲೆ ವೇಣುಗೋಪಾಲ್ ಪ್ರಕರಣ ದಾಖಲಿಸಿದ್ದಾರೆ.

ಜನತಾ ನಗರ ನಿವಾಸಿ ವೇಣುಗೋಪಾಲ್ ರವರು ಪಕ್ಕದ ರಸ್ತೆ ಯುವತಿ ಜೊತೆ ಪರಿಚಯವಿದ್ದ ಕಾರಣ ಆಗಾಗ ಮೊಬೈಲ್ ಮೂಲಕ ಮಾತನಾಡಿ ಚಾಟ್ ಮಾಡಿರುತ್ತಾರೆ.ಇದನ್ನ ಸಹಿಸದ ಲವರ್ ರಾಜು ಹಲ್ಲೆ ನಡೆಸಿದ್ದಾನೆ.ನಿನ್ನನ್ನು ಮಾತನಾಡಬೇಕು ಬಾ ಎಂದು ಕರೆಸಿಕೊಂಡ ರಾಜು ಹಾಗೂ ಸ್ನೇಹಿತ ಬೈಕ್ ನಲ್ಲಿ ವಿಜಯನಗರ ಹೈಟೆನ್ಷನ್ ವೈರ್ ಬಳಿಯ ಪ್ರದೇಶಕ್ಕೆ ಕರೆದೊಯ್ದು ಅವಳು ನನ್ನ ಲವರ್ ಅಂತ ಗೊತ್ತಿದ್ರೂ ಮಾತಾಡ್ತೀಯ ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿ ಲಾಂಗ್ ನ ಹಿಂಬದಿಯಿಂದ ಹಲ್ಲೆ ನಡೆಸಿದ್ದಾನೆ.ಇಬ್ಬರಿಂದ ತಪ್ಪಿಸಿಕೊಂಡ ವೇಣುಗೋಪಾಲ್ ಪೊಲೀಸರ ನೆರವಿನಿಂದ ಬಚಾವ್ ಆಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಗಾಯಗೊಂಡ ವೇಣುಗೋಪಾಲ್ ವಿಜಯನಗರ ಪೊಲೀಸ್ ಠಾಣೆಯಲ್ಲಿ ರಾಜು ಹಾಗೂ ಸ್ನೇಹಿತನ ವಿರುದ್ದ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಆರ್.ಟಿ.ಐ.ಮಾಹಿತಿ ಪತ್ರಿಕೆ ಅಸ್ತಿತ್ವಕ್ಕೆ…ಭಾಷ್ಯಂ ಸ್ವಾಮೀಜಿ ರವರಿಂದ ಬಿಡುಗಡೆ…

ಆರ್.ಟಿ.ಐ.ಮಾಹಿತಿ ಪತ್ರಿಕೆ ಅಸ್ತಿತ್ವಕ್ಕೆ…ಭಾಷ್ಯಂ ಸ್ವಾಮೀಜಿ ರವರಿಂದ ಬಿಡುಗಡೆ…

ಮೈಸೂರು,ಜು7,Tv10 ಕನ್ನಡ ಮೈಸೂರಿನ ಯೋಗನರಸಿಂಹ ಸ್ವಾಮಿ ದೇವಾಲಯದಲ್ಲಿ ಇಂದು ಆರ್.ಟಿ.ಐ.ಮಾಹಿತಿ ಪತ್ರಿಕೆ ಬಿಡುಗಡೆ ಮಾಡಲಾಯಿತು.ದೇವಾಲಯದ ಸಂಸ್ಥಾಪಕರಾದ ಪ್ರೊ.ಭಾಷ್ಯಂ ಸ್ವಾಮೀಜಿ ರವರು ಬಿಡುಗಡೆ ಮಾಡಿದರು.ಈ ವೇಳೆ ದೇವಸ್ಥಾನದ ಆಡಳಿತಾಧಿಕಾರಿ ಶ್ರೀನಿವಾಸ್…
ಮಹಿಳೆ ಬಗ್ಗೆ ಕಂಪನಿ ಸಾಮಾಜಿಕ ಜಾಲತಾಣದಲ್ಲಿ ಅಸಭ್ಯ ಪೋಸ್ಟ್…ಅಪ್ ಲೋಡ್ ಮಾಡಿದ ಮಹಿಳೆ ಮೇಲೆ FIR…

ಮಹಿಳೆ ಬಗ್ಗೆ ಕಂಪನಿ ಸಾಮಾಜಿಕ ಜಾಲತಾಣದಲ್ಲಿ ಅಸಭ್ಯ ಪೋಸ್ಟ್…ಅಪ್ ಲೋಡ್ ಮಾಡಿದ…

ಮೈಸೂರು,ಜು6,Tv10 ಕನ್ನಡ ಖಾಸಗಿ ಕಂಪನಿ ಉದ್ಯೋಗಿ ಬಗ್ಗೆ ಅಸಭ್ಯ ಹಾಗೂ ಅಶ್ಲೀಲವಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಮಹಿಳೆಯೊಬ್ಬರ ಮೇಲೆ ಕೆ.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಕ್ರಾಪಿನ್ ಕಂಪನಿಗೆ ಸೇರಿದ…
ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ…

ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ…

ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ… ಮೈಸೂರು,ಜು6,Tv10 ಕನ್ನಡ ಹುಚ್ಚುನಾಯಿ ಕಡಿತದಿಂದ ಮೃತಪಟ್ಟ ಮಹಾಲಿಂಗೇಶ್ವರ ದೇವಸ್ಥಾನದ ಬಸವನಿಗೆ ಮೇಟಗಳ್ಳಿ ಗ್ರಾಮಸ್ಥರು ಶ್ರದ್ದಾಂಜಲಿ ಅರ್ಪಿಸಿದ್ದಾರೆ.ಕೆಲವು…

Leave a Reply

Your email address will not be published. Required fields are marked *