ಕುರಿದೊಡ್ಡಿಯಾದ ಟ್ರಿಣ್ ಟ್ರಿಣ್ ಸೈಕಲ್ ಸ್ಟ್ಯಾಂಡ್…ಹಳ್ಳ ಹಿಡಿಯುತ್ತಿರುವ ಸಿಎಂ ಸಿದ್ದರಾಮಯ್ಯ ಮಹತ್ತರ ಯೋಜನೆ…

ಕುರಿದೊಡ್ಡಿಯಾದ ಟ್ರಿಣ್ ಟ್ರಿಣ್ ಸೈಕಲ್ ಸ್ಟ್ಯಾಂಡ್…ಹಳ್ಳ ಹಿಡಿಯುತ್ತಿರುವ ಸಿಎಂ ಸಿದ್ದರಾಮಯ್ಯ ಮಹತ್ತರ ಯೋಜನೆ…

ಮೈಸೂರು,ಜೂ2,Tv10 ಕನ್ನಡ

ಟ್ರಿಣ್ ಟ್ರಿಣ್ ಸೈಕಲ್ ಗಳು ತುಂಬಿರಬೇಕಾದ ಸ್ಟ್ಯಾಂಡ್ ಇದೀಗ ಕುರಿದೊಡ್ಡಿಯಾಗಿ ಪರಿವರ್ತನೆಯಾಗಿದೆ.ಪರಿಸರ ಉಳಿವಿಗಾಗಿ ತಂದ ಯೋಜನೆ ನೈರ್ಮಲ್ಯಕ್ಕೆ ಕಾರಣವಾಗುತ್ತಿದೆ.ಸೈಕಲ್ ಗಳು ತುಂಬಿರಬೇಕಿದ್ದ ಸ್ಥಳದಲ್ಲಿ ಕುರಿಗಳನ್ನ ತುಂಬಿದ್ದರೂ ಅಧಿಕಾರಿಗಳ ಗಮನಕ್ಕೂ ಬಂದಿಲ್ಲ.ಸಿಎಂ ಸಿದ್ದರಾಮಯ್ಯ ರವರ ಮಹತ್ತರ ಯೋಜನೆ ಈ ಮೂಲಕ ಹಳ್ಳ ಹಿಡಿಯುವ ಸೂಚನೆ ತೋರಿಸುತ್ತಿದೆ.

ಪರಿಸರ ನೈರ್ಮಲ್ಯ ಕಾಪಾಡುವ ದೃಷ್ಟಿಯಿಂದ ಸಿದ್ದರಾಮಯ್ಯ ನವರು ಈ ಯೋಜನೆಯನ್ನ 2016 ರಲ್ಲಿ ಜಾರಿಗೆ ತಂದರು.ಪ್ರಾಯೋಗಿಕವಾಗಿ ಆರಂಭವಾದ ಯೋಜನೆಗೆ ಸಾರ್ವಜನಿಕರೂ ಸಹ ಉತ್ತಮವಾಗಿ ಸ್ಪಂದಿಸಿ ಸೈಕಲ್ ಬಳಕೆಯತ್ತ ಗಮನ ಹರಿಸಿದ್ರು.ಲಕ್ಷಾಂತರ ಮಂದಿ ಟ್ರಿಣ್ ಟ್ರಿಣ್ ಸೈಕಲ್ ವ್ಯವಸ್ಥೆಯನ್ನ ಸಮರ್ಪಕವಾಗಿಯೂ ಬಳಸಿಕೊಂಡ್ರು.ಇತ್ತೀಚೆಗೆ ಯೋಜನೆ ಹಳ್ಳ ಹಿಡಿಯುವ ಸೂಚನೆ ಕಾಣುತ್ತಿದೆ.ಸೈಕಲ್ ಗಳ ಬದಲಾಗಿ ಕುರಿಗಳನ್ನ ತುಂಬಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ.ಸೈಕಲ್ ಗಳನ್ನ ಖರೀದಿಸುವತ್ತ ಪಾಲಿಕೆ ಗಮನ ಹರಿಸದ ಕಾರಣ ಸಂಖ್ಯೆ ಕ್ಷೀಣಿಸುತ್ತಿದೆ.ಸೈಕಲ್ ಗಳ ಕೊರತೆಯಿಂದಾಗ ನಿಲ್ದಾಣಗಳು ಖಾಲಿಯಾಗುತ್ತಿವೆ.ಇದನ್ನೇ ಖಾಸಗಿ ವ್ಯಕ್ತಿಗಳು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ.ನಿಲ್ದಾಣದಲ್ಲಿ ಕುರಿಗಳನ್ನ ತುಂಬಿಸಿಕೊಂಡು ದೊಡ್ಡಿ ಮಾಡಿಕೊಂಡಿದ್ದಾರೆ.ಮೈಸೂರಿನ ಒಂಟಿಕೊಪ್ಪಲಿನ ಮಾತೃ ಮಂಡಳಿ ವೃತ್ತದ ಬಳಿ ಇರುವ ಟ್ರಿಣ್ ಟ್ರಿಣ್ ಸೈಕಲ್ ನಿಲ್ದಾಣದ ಪರಿಸ್ಥಿತಿ ಇದು.

ಸಿಎಂ ಸಿದ್ದರಾಮಯ್ಯ ನವರು 2016 ರಲ್ಲಿ ಖುದ್ದು ಸೈಕಲ್ ಸವಾರಿ ಮಾಡುವ ಮೂಲಕ ಈ ಯೋಜನೆಗೆ ಅದ್ದೂರಿ ಚಾಲನೆ ನೀಡಿದ್ರು.ಸಿದ್ದರಾಮಯ್ಯ ರವರ ಮಹತ್ತರ ಯೋಜನೆಗಳಲ್ಲಿ ಒಂದಾದ ಟ್ರಿಣ್ ಟ್ರಿಣ್ ಸೈಕಲ್ ಯೋಜನೆ ಮತ್ತಷ್ಟು ಅಧೋಗತಿಗೆ ಇಳಿಯುವ ಮುನ್ನ ಪಾಲಿಕೆ ಅಧಿಕಾರಿಗಳು ಗಮನ ಹರಿಸಬೇಕಿದೆ.ಅಧಿಕಾರಿಗಳ ದಿವ್ಯನಿರ್ಲಕ್ಷ್ಯಕ್ಕೆ ಒಳಗಾದ ಟ್ರಿಣ್ ಟ್ರಿಣ್ ಸೈಕಲ್ ಯೋಜನೆಗೆ ಅಧಿಕಾರಿಗಳು ಚುರುಕು ನೀಡಬೇಕಿದೆ…

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *