ಕುರಿದೊಡ್ಡಿಯಾದ ಟ್ರಿಣ್ ಟ್ರಿಣ್ ಸೈಕಲ್ ಸ್ಟ್ಯಾಂಡ್…ಹಳ್ಳ ಹಿಡಿಯುತ್ತಿರುವ ಸಿಎಂ ಸಿದ್ದರಾಮಯ್ಯ ಮಹತ್ತರ ಯೋಜನೆ…

ಕುರಿದೊಡ್ಡಿಯಾದ ಟ್ರಿಣ್ ಟ್ರಿಣ್ ಸೈಕಲ್ ಸ್ಟ್ಯಾಂಡ್…ಹಳ್ಳ ಹಿಡಿಯುತ್ತಿರುವ ಸಿಎಂ ಸಿದ್ದರಾಮಯ್ಯ ಮಹತ್ತರ ಯೋಜನೆ…

ಮೈಸೂರು,ಜೂ2,Tv10 ಕನ್ನಡ

ಟ್ರಿಣ್ ಟ್ರಿಣ್ ಸೈಕಲ್ ಗಳು ತುಂಬಿರಬೇಕಾದ ಸ್ಟ್ಯಾಂಡ್ ಇದೀಗ ಕುರಿದೊಡ್ಡಿಯಾಗಿ ಪರಿವರ್ತನೆಯಾಗಿದೆ.ಪರಿಸರ ಉಳಿವಿಗಾಗಿ ತಂದ ಯೋಜನೆ ನೈರ್ಮಲ್ಯಕ್ಕೆ ಕಾರಣವಾಗುತ್ತಿದೆ.ಸೈಕಲ್ ಗಳು ತುಂಬಿರಬೇಕಿದ್ದ ಸ್ಥಳದಲ್ಲಿ ಕುರಿಗಳನ್ನ ತುಂಬಿದ್ದರೂ ಅಧಿಕಾರಿಗಳ ಗಮನಕ್ಕೂ ಬಂದಿಲ್ಲ.ಸಿಎಂ ಸಿದ್ದರಾಮಯ್ಯ ರವರ ಮಹತ್ತರ ಯೋಜನೆ ಈ ಮೂಲಕ ಹಳ್ಳ ಹಿಡಿಯುವ ಸೂಚನೆ ತೋರಿಸುತ್ತಿದೆ.

ಪರಿಸರ ನೈರ್ಮಲ್ಯ ಕಾಪಾಡುವ ದೃಷ್ಟಿಯಿಂದ ಸಿದ್ದರಾಮಯ್ಯ ನವರು ಈ ಯೋಜನೆಯನ್ನ 2016 ರಲ್ಲಿ ಜಾರಿಗೆ ತಂದರು.ಪ್ರಾಯೋಗಿಕವಾಗಿ ಆರಂಭವಾದ ಯೋಜನೆಗೆ ಸಾರ್ವಜನಿಕರೂ ಸಹ ಉತ್ತಮವಾಗಿ ಸ್ಪಂದಿಸಿ ಸೈಕಲ್ ಬಳಕೆಯತ್ತ ಗಮನ ಹರಿಸಿದ್ರು.ಲಕ್ಷಾಂತರ ಮಂದಿ ಟ್ರಿಣ್ ಟ್ರಿಣ್ ಸೈಕಲ್ ವ್ಯವಸ್ಥೆಯನ್ನ ಸಮರ್ಪಕವಾಗಿಯೂ ಬಳಸಿಕೊಂಡ್ರು.ಇತ್ತೀಚೆಗೆ ಯೋಜನೆ ಹಳ್ಳ ಹಿಡಿಯುವ ಸೂಚನೆ ಕಾಣುತ್ತಿದೆ.ಸೈಕಲ್ ಗಳ ಬದಲಾಗಿ ಕುರಿಗಳನ್ನ ತುಂಬಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ.ಸೈಕಲ್ ಗಳನ್ನ ಖರೀದಿಸುವತ್ತ ಪಾಲಿಕೆ ಗಮನ ಹರಿಸದ ಕಾರಣ ಸಂಖ್ಯೆ ಕ್ಷೀಣಿಸುತ್ತಿದೆ.ಸೈಕಲ್ ಗಳ ಕೊರತೆಯಿಂದಾಗ ನಿಲ್ದಾಣಗಳು ಖಾಲಿಯಾಗುತ್ತಿವೆ.ಇದನ್ನೇ ಖಾಸಗಿ ವ್ಯಕ್ತಿಗಳು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ.ನಿಲ್ದಾಣದಲ್ಲಿ ಕುರಿಗಳನ್ನ ತುಂಬಿಸಿಕೊಂಡು ದೊಡ್ಡಿ ಮಾಡಿಕೊಂಡಿದ್ದಾರೆ.ಮೈಸೂರಿನ ಒಂಟಿಕೊಪ್ಪಲಿನ ಮಾತೃ ಮಂಡಳಿ ವೃತ್ತದ ಬಳಿ ಇರುವ ಟ್ರಿಣ್ ಟ್ರಿಣ್ ಸೈಕಲ್ ನಿಲ್ದಾಣದ ಪರಿಸ್ಥಿತಿ ಇದು.

ಸಿಎಂ ಸಿದ್ದರಾಮಯ್ಯ ನವರು 2016 ರಲ್ಲಿ ಖುದ್ದು ಸೈಕಲ್ ಸವಾರಿ ಮಾಡುವ ಮೂಲಕ ಈ ಯೋಜನೆಗೆ ಅದ್ದೂರಿ ಚಾಲನೆ ನೀಡಿದ್ರು.ಸಿದ್ದರಾಮಯ್ಯ ರವರ ಮಹತ್ತರ ಯೋಜನೆಗಳಲ್ಲಿ ಒಂದಾದ ಟ್ರಿಣ್ ಟ್ರಿಣ್ ಸೈಕಲ್ ಯೋಜನೆ ಮತ್ತಷ್ಟು ಅಧೋಗತಿಗೆ ಇಳಿಯುವ ಮುನ್ನ ಪಾಲಿಕೆ ಅಧಿಕಾರಿಗಳು ಗಮನ ಹರಿಸಬೇಕಿದೆ.ಅಧಿಕಾರಿಗಳ ದಿವ್ಯನಿರ್ಲಕ್ಷ್ಯಕ್ಕೆ ಒಳಗಾದ ಟ್ರಿಣ್ ಟ್ರಿಣ್ ಸೈಕಲ್ ಯೋಜನೆಗೆ ಅಧಿಕಾರಿಗಳು ಚುರುಕು ನೀಡಬೇಕಿದೆ…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *