ಸಂಚಾರಿ ಪೊಲೀಸರಿಗೆ ಮೂಗುದಾರ…ತಪಾಸಣೆ ವೇಳೆ ಮುನ್ನೆಚ್ಚರಿಕೆ ವಹಿಸಿ…ಖಡಕ್ ವಾರ್ನಿಂಗ್…

ಸಂಚಾರಿ ಪೊಲೀಸರಿಗೆ ಮೂಗುದಾರ…ತಪಾಸಣೆ ವೇಳೆ ಮುನ್ನೆಚ್ಚರಿಕೆ ವಹಿಸಿ…ಖಡಕ್ ವಾರ್ನಿಂಗ್…

ಮೈಸೂರು,ಜೂ2,Tv10 ಕನ್ನಡ

ತಪಾಸಣೆ ವೇಳೆ ಮಗು ಸಾವನ್ನಪ್ಪಿದ ಘಟನೆ ನಂತರ ಪೊಲೀಸ್ ಇಲಾಖೆ ಎಚ್ಚೆತ್ತುಕೊಂಡಿದೆ.ಸಂಚಾರಿ ಪೊಲೀಸರಿಗೆ ತಪಾಸಣೆ ವೇಳೆ ನಿಯಮಗಳನ್ನ ಪಾಲಿಸುವಂತೆ ಖಡಕ್ ಆದೇಶ ಹೊರಡಿಸಿದೆ.ವಾಹನ ಸವಾರರಿಗೆ ಅಪಾಯ ಆಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದೆ.ವಾಹನ ತಪಾಸಣೆ ವೇಳೆ ಅನುಸರಿಸಬೇಕಾದ ಅಂಶಗಳ ಸುತ್ತೋಲೆಯನ್ನ ಹೊರಡಿಸಿದೆ.

ದಾಖಲೆ ಪರಿಶೀಲಿಸುವ ವೇಳೆ ವೇಳೆ ಸಕಾರಣವಿಲ್ಲದೆ ವಾಹನಗಳನ್ನ ತಡೆದು ತಪಾಸಣೆ ನಡೆಸಬಾರದು.ಸಂಚಾರಿ ನಿಯಮಗಳು ಉಲ್ಲಂಘನೆ ಆಗಿರುವುದು ಕಂಡುಬಂದಾಗ ಮಾತ್ರ ವಾಹನಗಳನ್ನು ನಿಲ್ಲಿಸಿ ಪ್ರಕರಣಗಳನ್ನ ದಾಖಲಿಸಬೇಕು.ಪ್ರಕರಣಗಳನ್ನ ದಾಖಲಿಸುವ ಮುನ್ನ ಹೆದ್ದಾರಿಗಳಲ್ಲಿ zig zag ಮಾದರಿಯಲ್ಲಿ ಬ್ಯಾರಿಕೇಡ್ ಗಳನ್ನ ಅಳವಡಿಸಿ ವಾಹನಗಳನ್ನ ತಡೆಯಬಾರದು.ಧಿಢೀರನೆ ಅಡ್ಡಬಂದು ವಾಹನ ನಿಲ್ಲಿಸುವಂತೆ ಹೇಳಬಾರದು.ಹಿಂಬದಿ ಸವಾರನನ್ನು ಹಿಡಿದು ಎಳೆಯುವುದು,ಕೀಗಳನ್ನ ಕಿತ್ತುಕೊಳ್ಳುವುದು ಮಾಡಬಾರದು.ವೇಗವಾಗಿ ಚಲಾಯಿಸಿಕೊಂಡು ಬರುವ ವಾಹನಗಳನ್ನ ಬೆನ್ನಟ್ಟದೇ ನಂಬರ್ ಗಳನ್ನ ಗುರುತಿಸಿ ಅವರ ಮಾಹಿತಿ ಪತ್ತೆ ಹಚ್ಚಿ ಪ್ರಕರಣ ದಾಖಲಿಸಬೇಕು.ವಾಹನ ತಪಾಸಣೆ ವೇಳೆ ರಿಫ್ಲೆಕ್ಟಿವ್ ಜಾಕೆಟ್ ಗಳನ್ನ ಧರಿಸಬೇಕು.ಸಂಜೆ ವೇಳೆ ಕಡ್ಡಾಯವಾಗಿ ಎಲ್.ಇ.ಡಿ.ಬೇಟನ್ ಬಳಸಬೇಕು.ಹೆದ್ದಾರಿಗಳಲ್ಲಿ ವೇಗವಾಗಿ ಚಲಾಯಿಸುವ ವಾಹನಗಳನ್ನ ತಡೆಯುವ ಪ್ರಯತ್ನ ಮಾಡದೆ ತಂತ್ರಜ್ಞಾನದ ನೆರವಿನಿಂದ ಪತ್ತೆ ಹಚ್ಚಿ ಪ್ರಕರಣ ದಾಖಲಿಸಬೇಕು.ಸಾಧ್ಯವಾದಷ್ಟು ಸಿಗ್ನಲ್ ದೀಪಗಳ ಬಳಿ ತಪಾಸಣೆ ನಡೆಸಬೇಕು ಎನ್ನುವುದು ಸೇರಿದಂತೆ ಹಲವು ನಿಯಮಗಳನ್ನ ಪಾಲಿಸುವಂತೆ ಸಂಚಾರಿ ಪೊಲೀಸರಿಗೆ ಮಹಾ ನಿರ್ದೇಶಕರು ಹಾಗೂ ಪೊಲೀಸ್ ಮಹಾ ನಿರೀಕ್ಷಕರಾದ ಡಾ.ಎಂ.ಎ.ಸಲೀಂ ಆದೇಶ ಹೊರಡಿಸಿದ್ದಾರೆ…

Spread the love

Related post

ಬಿಸಿ ನೀರಿನ ಪಾತ್ರೆಯಲ್ಲಿ ಬಿದ್ದು ಮಗು ಸಾವು…

ಬಿಸಿ ನೀರಿನ ಪಾತ್ರೆಯಲ್ಲಿ ಬಿದ್ದು ಮಗು ಸಾವು…

ಬಿಸಿ ನೀರಿನ ಪಾತ್ರೆಯಲ್ಲಿ ಬಿದ್ದು ಮಗು ಸಾವು… ಹುಣಸೂರು,ಡಿ20,Tv10 ಕನ್ನಡ ಸುಡುತ್ತಿರುವ ಬಿಸಿನೀರಿನ ಪಾತ್ರೆಗೆ ಬಿದ್ದು ಹೆಣ್ಣುಮಗು ಸಾವನ್ನಪ್ಪಿದ ಘಟನೆ ಹುಣಸೂರು ತಾಲೂಕಿನ ವಿಜಯಗಿರಿ ಹಾಡಿಯಲ್ಲಿ ನಡೆದಿದೆ. ಆದಿವಾಸಿ…
ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಗಲಾಟೆ…ಓರ್ವನ ಕೊಲೆಯಲ್ಲಿ ಅಂತ್ಯ…

ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಗಲಾಟೆ…ಓರ್ವನ ಕೊಲೆಯಲ್ಲಿ ಅಂತ್ಯ…

ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಗಲಾಟೆ…ಓರ್ವನ ಕೊಲೆಯಲ್ಲಿ ಅಂತ್ಯ… ಹುಣಸೂರು,ಡಿ19,Tv10 ಕನ್ನಡ ಕ್ಲುಲ್ಲಕ ಕಾರಣಕ್ಕೆ ಸ್ನೇಹಿತನನ್ನೇ ಕೊಲೆ ಮಾಡಿರುವ ಘಟನೆ ಹುಣಸೂರು ನಗರದಲ್ಲಿ ನಡೆದಿದೆ.ನಿಜಾಂ ಮೊಹಲ್ಲಾದ ನಿವಾಸಿ ಖಾಜಾಪೀರ್(44)ಕೊಲೆಯಾದ…
ಕಾಂಗ್ರೆಸ್ ಮಾಜಿ ಶಾಸಕ ಹಾಗೂ ಪುತ್ರನ ಗೂಂಡಾಗಿರಿ…ಆಸ್ತಿ ವಿಚಾರದಲ್ಲಿ ದರ್ಪ…ಮೊಬೈಲ್ ನಲ್ಲಿ ಸೆರೆಯಾದ ಬೆದರಿಕೆ…

ಕಾಂಗ್ರೆಸ್ ಮಾಜಿ ಶಾಸಕ ಹಾಗೂ ಪುತ್ರನ ಗೂಂಡಾಗಿರಿ…ಆಸ್ತಿ ವಿಚಾರದಲ್ಲಿ ದರ್ಪ…ಮೊಬೈಲ್ ನಲ್ಲಿ…

ಕಾಂಗ್ರೆಸ್ ಮಾಜಿ ಶಾಸಕ ಹಾಗೂ ಪುತ್ರನ ಗೂಂಡಾಗಿರಿ…ಆಸ್ತಿ ವಿಚಾರದಲ್ಲಿ ದರ್ಪ…ಮೊಬೈಲ್ ನಲ್ಲಿ ಸೆರೆಯಾದ ಬೆದರಿಕೆ… ಮಂಡ್ಯ,ಡಿ19,Tv10 ಕನ್ನಡ ಜಮೀನು ವಿಚಾರದಲ್ಲಿ ಮಾಜಿ ಶಾಸಕ ಹಾಗೂ ಪುತ್ರ ವ್ಯಕ್ತಿ ಮೇಲೆ…

Leave a Reply

Your email address will not be published. Required fields are marked *