ವರದಕ್ಷಿಣೆ ಕಿರುಕುಳ…ಪತ್ನಿ ಮಗಳು ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…ಗಂಡನ ಮೇಲೆ ಗ್ರಾಮಸ್ಥರಿಂದಲೇ ಕೊಲೆ ಆರೋಪ…

ವರದಕ್ಷಿಣೆ ಕಿರುಕುಳ…ಪತ್ನಿ ಮಗಳು ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…ಗಂಡನ ಮೇಲೆ ಗ್ರಾಮಸ್ಥರಿಂದಲೇ ಕೊಲೆ ಆರೋಪ…

  • Crime
  • June 10, 2025
  • No Comment
  • 181

ನಂಜನಗೂಡು,ಜೂ10,Tv10 ಕನ್ನಡ

ಮದುವೆ ಆಗಿ 22 ವರ್ಷವಾದರೂ ಗಂಡನಿಂದ ವರದಕ್ಷಿಣೆ ಕಿರುಕುಳ ಅನುಭವಿಸಿದ ಗೃಹಿಣಿ ಹಾಗೂ ಮಗಳು ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.ಇಬ್ಬರ ಸಾವಿಗೆ ಪತಿ ಗಂಡನೇ ಹೊಣೆ ಎಂದು ಗ್ರಾಮಸ್ಥರು ಕೊಲೆ ಆರೋಪ ಹೊರೆಸಿದ್ದಾರೆ.ತಾಯಿ ಮಗಳ ಸಾವಿಗೆ ಕಾರಣ ಕೇಳಲು ಹೋದ ಗ್ರಾಮಸ್ಥರ ಜೊತೆ ಪೊಲೀಸರು ಸಂಯಮದಿಂದ ವರ್ತಿಸಿಲ್ಲವೆಂದು ಆರೋಪಿಸಿದ್ದಾರೆ.ಪತಿರಾಯನೇ ಪತ್ನಿ ಹಾಗೂ ಮಗಳನ್ನ ಕೊಲೆ ಮಾಡಿದ್ದಾನೆಂದು ಆರೋಪಿಸಿದ್ದಾರೆ.

ನಂಜನಗೂಡು ತಾಲೂಕು ಹುಲ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕೊತ್ತನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.ತಾಯಿ ಮಹದೇವಮ್ಮ( 38) ಮಗಳು ಸುಪ್ರಿಯ(20) ಮೃತ ದುರ್ದೈವಿಗಳು.ಕೊಲೆ ಆರೋಪ ಹೊತ್ತ ಪತಿ ಜಯರಾಮು ನಾಪತ್ತೆಯಾಗಿದ್ದಾನೆ.22 ವರ್ಷಗಳ ಹಿಂದೆ ಮಹದೇವಮ್ಮಳನ್ನ ಮದುವೆ ಆಗಿದ್ದ ಜಯರಾಮ ದಂಪತಿಗೆ ಸುಪ್ರಿಯ ಎಂಬ ಮಗಳಿದ್ದಾಳೆ.ವರ್ಷಗಳು ಉರುಳಿದರೂ ಜಯರಾಮು ಗೆ ವರದಕ್ಷಿಣೆ ದಾಹ ಕಡಿಮೆ ಆಗಿರಲಿಲ್ಲ.ಈ ವಿಚಾರದಲ್ಲಿ ಪತ್ನಿ ಜೊತೆ ಜಗಳವಾಡುತ್ತಲೇ ಇದ್ದ.ಇದರಿಂದ ಮಗಳು ಸುಪ್ರಿಯ ಸಹ ನೊಂದಿದ್ದಳು.ಗಂಡನ ವರ್ತನೆಯಿಂದ ಬೇಸತ್ತ ಮಹದೇವಮ್ಮ ಹಲವು ಬಾರಿ ಹುಲ್ಲಹಳ್ಳಿ ಠಾಣೆ ಪೊಲೀಸರ ಮೊರೆ ಹೋಗಿದ್ದಳೆಂದು ಹೇಳಲಾಗಿದೆ.ಪೊಲೀಸರಿಂದಾಗಲಿ ಅಥವಾ ಕುಟುಂಬಸ್ಥರಿಂದ ಮಹದೇವಮ್ಮ ಗೆ ನ್ಯಾಯ ದೊರೆತಿಲ್ಲವೆಂದು ಗ್ರಾಮಸ್ಥರು ಆರೋಪಿಸಿದ್ದಾರೆ.ಗಂಡನ ವರದಕ್ಷಿಣೆ ದಾಹಕ್ಕೆ ಬೇಸತ್ತಿದ್ದ ಮಹದೇವಮ್ಮ ಹಾಗೂ ಮಗಳು ಮನೆಯ ತಂಬಾಕು ಬೇಯಿಸುವ ಬ್ಯಾರೆನ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.ಇಬ್ಬರ ಸಾವಿಗೆ ಗಂಡ ಜಯರಾಮು ಕಾರಣ ಎಂದು ಆರೋಪಿಸಿರುವ ಗ್ರಾಮಸ್ಥರು ಪೊಲೀಸರ ವರ್ತನೆಯನ್ನೂ ಸಹ ಖಂಡಿಸಿದ್ದಾರೆ…

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *