ಜೆಕೆ ಟೈರ್ಸ್ ಕಾರ್ಮಿಕನ ಕಾಲು ಬೆರಳು ಕಟ್…ಕೆಲಸದ ವೇಳೆ ಘಟನೆ…ಮೂವರ ವಿರುದ್ದ ಪ್ರಕರಣ ದಾಖಲು…

ಜೆಕೆ ಟೈರ್ಸ್ ಕಾರ್ಮಿಕನ ಕಾಲು ಬೆರಳು ಕಟ್…ಕೆಲಸದ ವೇಳೆ ಘಟನೆ…ಮೂವರ ವಿರುದ್ದ ಪ್ರಕರಣ ದಾಖಲು…

  • Crime
  • June 10, 2025
  • No Comment
  • 195

ಮೈಸೂರು,ಜೂ10,Tv10 ಕನ್ನಡ

ಕೆಲಸ ನಿರ್ವಹಿಸುತ್ತಿದ್ದ ವೇಳೆ ಕಾರ್ಮಿಕನ ಕಾಲಿನ ಮೂರು ಬೆರಳು ಕಟ್ ಆದ ಘಟನೆ ಮೈಸೂರಿನ ಜೆಕೆ ಫ್ಯಾಕ್ಟರಿಯಲ್ಲಿ ನಡೆದಿದೆ.ಫ್ಯಾಕ್ಟರಿಯ ವಿಭಾಗದ ಮೂವರು ಮುಖ್ಯಸ್ಥರ ವಿರುದ್ದ ಮೇಟಗಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಸೂಕ್ತ ತರಬೇತಿ ನೀಡದೆ ಅನುಭವ ಇಲ್ಲದ ವಿಭಾಗದಲ್ಲಿ ಬಲವಂತವಾಗಿ ಕೆಲಸ ಮಾಡಿಸಿರುವುದಾಗಿ ಆರೋಪಿಸಿ ಗಾಯಗೊಂಡ ಕಾರ್ಮಿಕನ ಪತ್ನಿ ಮೂವರು ಮುಖ್ಯಸ್ಥರ ವಿರುದ್ದ ಪ್ರಕರಣ ದಾಖಲಿಸಿದ್ದಾರೆ.ಸೂಪರ್ ವೈಸರ್ ನಾಗರಾಜು,ಮ್ಯಾನೇಜರ್ ಆನಂದ್ ಹಾಗೂ ಪ್ರೊಡಕ್ಷನ್ ಇನ್ಚಾರ್ಜ್ ರಾಜೀವ್ ಕುಮಾರ್ ವಿರುದ್ದ ಪ್ರಕರಣ ದಾಖಲಾಗಿದೆ.25 ವರ್ಷಗಳಿಂದ ಕೆಲಸ ಮಾಡುತ್ತಿರುವ ಜಯೇಶ್ ಎಂಬುವರು ಗಾಯಗೊಂಡವರು.

ರಾತ್ರಿಪಾಳಿಯಲ್ಲಿ 10TK ದೋಷಪೂರಿತ ಮೆಷಿನ್ ನಲ್ಲಿ ಕೆಲಸ ಮಾಡುವಾಗಿ ಎಡಗಾಲಿನ ಮೂರು ಬೆರಳುಗಳು ಕಟ್ ಆಗಿದೆ.25 ವರ್ಷದಿಂದ ಕೆಲಸ ಮಾಡುತ್ತಿದ್ದ ಜಯೇಶ್ ರವರನ್ನ ಕಾರಣ ನೀಡದೆ ಕೆಲಸದಿಂದ ತೆಗೆದುಹಾಕಿದ್ದರು.ಈ ಬಗ್ಗೆ ಪ್ರಶ್ನಿಸಿ ಜಯೇಶ್ ಕಾರ್ಮಿಕ ನ್ಯಾಯಾಲಯ ಮೆಟ್ಟಲೇರಿದ್ದರು.ಜಯೇಶ್ ರವರನ್ನ ಪುನರ್ ನೇಮಕ ಮಾಡಿಕೊಳ್ಳುವಂತೆ ಕಾರ್ಮಿಕ ನ್ಯಾಯಾಲಯ ಆದೇಶಿಸಿತ್ತು.ನ್ಯಾಯಾಲಯದ ಆದೇಶದಂತೆ ನೇಮಕ ಮಾಡಿಕೊಂಡ ಫ್ಯಾಕ್ಟರಿ ಈ ಹಿಂದೆ ಕೆಲಸ ಮಾಡುತ್ತಿದ್ದ ವಿಭಾಗದಲ್ಲಿ ಅವಕಾಶ ನೀಡದೆ ಮತ್ತೊಂದು ವಿಭಾಗದಲ್ಲಿ ನೇಮಕ ಮಾಡಿತ್ತು.ಆ ವಿಭಾಗದಲ್ಲಿ ಕೆಲಸ ಮಾಡಲು ಸೂಕ್ತ ತರಬೇತಿ ನೀಡದೆ ಬಲವಂತವಾಗಿ ಕೆಲಸ ಮಾಡುವಂತೆ ಮೂವರು ಒತ್ತಾಯ ಮಾಡಿ ಮಾನಸಿಕವಾಗಿ ಹಾಗೂ ದೈಹಿಕವಾಗಿ ಕಿರುಕುಳ ನೀಡಿದ್ದರೆಂದು ಜಯೇಶ್ ರವರ ಪತ್ನಿ ಜ್ಯೋತಿ ಆರೋಪಿಸಿದ್ದಾರೆ…

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *