ಜೆಕೆ ಟೈರ್ಸ್ ಕಾರ್ಮಿಕನ ಕಾಲು ಬೆರಳು ಕಟ್…ಕೆಲಸದ ವೇಳೆ ಘಟನೆ…ಮೂವರ ವಿರುದ್ದ ಪ್ರಕರಣ ದಾಖಲು…

ಜೆಕೆ ಟೈರ್ಸ್ ಕಾರ್ಮಿಕನ ಕಾಲು ಬೆರಳು ಕಟ್…ಕೆಲಸದ ವೇಳೆ ಘಟನೆ…ಮೂವರ ವಿರುದ್ದ ಪ್ರಕರಣ ದಾಖಲು…

  • Crime
  • June 10, 2025
  • No Comment
  • 193

ಮೈಸೂರು,ಜೂ10,Tv10 ಕನ್ನಡ

ಕೆಲಸ ನಿರ್ವಹಿಸುತ್ತಿದ್ದ ವೇಳೆ ಕಾರ್ಮಿಕನ ಕಾಲಿನ ಮೂರು ಬೆರಳು ಕಟ್ ಆದ ಘಟನೆ ಮೈಸೂರಿನ ಜೆಕೆ ಫ್ಯಾಕ್ಟರಿಯಲ್ಲಿ ನಡೆದಿದೆ.ಫ್ಯಾಕ್ಟರಿಯ ವಿಭಾಗದ ಮೂವರು ಮುಖ್ಯಸ್ಥರ ವಿರುದ್ದ ಮೇಟಗಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಸೂಕ್ತ ತರಬೇತಿ ನೀಡದೆ ಅನುಭವ ಇಲ್ಲದ ವಿಭಾಗದಲ್ಲಿ ಬಲವಂತವಾಗಿ ಕೆಲಸ ಮಾಡಿಸಿರುವುದಾಗಿ ಆರೋಪಿಸಿ ಗಾಯಗೊಂಡ ಕಾರ್ಮಿಕನ ಪತ್ನಿ ಮೂವರು ಮುಖ್ಯಸ್ಥರ ವಿರುದ್ದ ಪ್ರಕರಣ ದಾಖಲಿಸಿದ್ದಾರೆ.ಸೂಪರ್ ವೈಸರ್ ನಾಗರಾಜು,ಮ್ಯಾನೇಜರ್ ಆನಂದ್ ಹಾಗೂ ಪ್ರೊಡಕ್ಷನ್ ಇನ್ಚಾರ್ಜ್ ರಾಜೀವ್ ಕುಮಾರ್ ವಿರುದ್ದ ಪ್ರಕರಣ ದಾಖಲಾಗಿದೆ.25 ವರ್ಷಗಳಿಂದ ಕೆಲಸ ಮಾಡುತ್ತಿರುವ ಜಯೇಶ್ ಎಂಬುವರು ಗಾಯಗೊಂಡವರು.

ರಾತ್ರಿಪಾಳಿಯಲ್ಲಿ 10TK ದೋಷಪೂರಿತ ಮೆಷಿನ್ ನಲ್ಲಿ ಕೆಲಸ ಮಾಡುವಾಗಿ ಎಡಗಾಲಿನ ಮೂರು ಬೆರಳುಗಳು ಕಟ್ ಆಗಿದೆ.25 ವರ್ಷದಿಂದ ಕೆಲಸ ಮಾಡುತ್ತಿದ್ದ ಜಯೇಶ್ ರವರನ್ನ ಕಾರಣ ನೀಡದೆ ಕೆಲಸದಿಂದ ತೆಗೆದುಹಾಕಿದ್ದರು.ಈ ಬಗ್ಗೆ ಪ್ರಶ್ನಿಸಿ ಜಯೇಶ್ ಕಾರ್ಮಿಕ ನ್ಯಾಯಾಲಯ ಮೆಟ್ಟಲೇರಿದ್ದರು.ಜಯೇಶ್ ರವರನ್ನ ಪುನರ್ ನೇಮಕ ಮಾಡಿಕೊಳ್ಳುವಂತೆ ಕಾರ್ಮಿಕ ನ್ಯಾಯಾಲಯ ಆದೇಶಿಸಿತ್ತು.ನ್ಯಾಯಾಲಯದ ಆದೇಶದಂತೆ ನೇಮಕ ಮಾಡಿಕೊಂಡ ಫ್ಯಾಕ್ಟರಿ ಈ ಹಿಂದೆ ಕೆಲಸ ಮಾಡುತ್ತಿದ್ದ ವಿಭಾಗದಲ್ಲಿ ಅವಕಾಶ ನೀಡದೆ ಮತ್ತೊಂದು ವಿಭಾಗದಲ್ಲಿ ನೇಮಕ ಮಾಡಿತ್ತು.ಆ ವಿಭಾಗದಲ್ಲಿ ಕೆಲಸ ಮಾಡಲು ಸೂಕ್ತ ತರಬೇತಿ ನೀಡದೆ ಬಲವಂತವಾಗಿ ಕೆಲಸ ಮಾಡುವಂತೆ ಮೂವರು ಒತ್ತಾಯ ಮಾಡಿ ಮಾನಸಿಕವಾಗಿ ಹಾಗೂ ದೈಹಿಕವಾಗಿ ಕಿರುಕುಳ ನೀಡಿದ್ದರೆಂದು ಜಯೇಶ್ ರವರ ಪತ್ನಿ ಜ್ಯೋತಿ ಆರೋಪಿಸಿದ್ದಾರೆ…

Spread the love

Related post

ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು…

ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು…

ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು… ಎಚ್.ಡಿ.ಕೋಟೆ,ಜೂ4,Tv10 ಕನ್ನಡ ಸರ್ಕಾರಿ ಶಾಲಾ ದಾಖಲಾತಿಯಲ್ಲಿ ಬೋವಿ ಎಂಬುದನ್ನು ಬೋಯಿ ಎಂದು ತಿದ್ದಿದ ಆರೋಪದ ಹಿನ್ನಲೆ ಶಾಲೆ ಮುಖ್ಯಶಿಕ್ಷಕ ಅಮಾನತುಪಡಿಸಲಾಗಿದೆ.ಹೆಚ್.ಡಿ.ಕೋಟೆ…
ಚಿಕ್ಕಾಟಿ ಗ್ರಾಮದಲ್ಲಿ ಮಹಿಳೆಯರಿಗೆ ಮುಟ್ಟು ವೃತು ಚಕ್ರ ಜಾಗೃತಿ

ಚಿಕ್ಕಾಟಿ ಗ್ರಾಮದಲ್ಲಿ ಮಹಿಳೆಯರಿಗೆ ಮುಟ್ಟು ವೃತು ಚಕ್ರ ಜಾಗೃತಿ

ಚಿಕ್ಕಾಟಿ ಗ್ರಾಮದಲ್ಲಿ ಮಹಿಳೆಯರಿಗೆ ಮುಟ್ಟು ವೃತು ಚಕ್ರ ಜಾಗೃತಿ ಚಾಮರಾಜನಗರ ಜಿಲ್ಲೆಯ ಚಿಕ್ಕಾಟಿ ಗ್ರಾಮದಲ್ಲಿ ಗ್ರಾಮ ಪಂಚಾಯತ್, ಸಂಜೀವಿನಿ ಇಲಾಖೆ ಹಾಗೂ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ಮಹಿಳೆಯರ ಆರೋಗ್ಯ…
ವಿಜಯನಗರ ಪೊಲೀಸರ ಕಾರ್ಯಾಚರಣೆ…ನರ್ಸಿಂಗ್ ಸೇವೆ ನೀಡುವ ನೆಪದಲ್ಲಿ ಚಿನ್ನಾಭರಣ ಕಳುವು…ಆರೋಪಿ ಅಂದರ್…22.10 ಲಕ್ಷ ಮೌಲ್ಯದ ಪದಾರ್ಥ ವಶ…

ವಿಜಯನಗರ ಪೊಲೀಸರ ಕಾರ್ಯಾಚರಣೆ…ನರ್ಸಿಂಗ್ ಸೇವೆ ನೀಡುವ ನೆಪದಲ್ಲಿ ಚಿನ್ನಾಭರಣ ಕಳುವು…ಆರೋಪಿ ಅಂದರ್…22.10…

ವಿಜಯನಗರ ಪೊಲೀಸರ ಕಾರ್ಯಾಚರಣೆ…ನರ್ಸಿಂಗ್ ಸೇವೆ ನೀಡುವ ನೆಪದಲ್ಲಿ ಚಿನ್ನಾಭರಣ ಕಳುವು…ಆರೋಪಿ ಅಂದರ್…22.10 ಲಕ್ಷ ಮೌಲ್ಯದ ಪದಾರ್ಥ ವಶ… ಮೈಸೂರು,ಮೇ27,Tv10 ಕನ್ನಡ ವೃದ್ದೆ ಮನೆಯಲ್ಲಿ ನರ್ಸಿಂಗ್ ಸೇವೆಗೆ ಸೇರಿಕೊಂಡ ಐನಾತಿ…

Leave a Reply

Your email address will not be published. Required fields are marked *