ಕಾವೇರಿ ಆರತಿ,ಅಮ್ಯೂಸ್ ಮೆಂಟ್ ಪಾರ್ಕ್ ಗೆ ವಿರೋಧ…ರೈತರ ಪ್ರತಿಭಟನೆ…

ಕಾವೇರಿ ಆರತಿ,ಅಮ್ಯೂಸ್ ಮೆಂಟ್ ಪಾರ್ಕ್ ಗೆ ವಿರೋಧ…ರೈತರ ಪ್ರತಿಭಟನೆ…

ಮಂಡ್ಯ,ಜೂ12,Tv10 ಕನ್ನಡ

ಕೆಆರ್ ಎಸ್ ನಲ್ಲಿ ಕಾವೇರಿ ಆರತಿ ಹಾಗೂ ಅಮ್ಯೂಸ್ಮೆಂಟ್ ಪಾರ್ಕ್ ಗೆ ತೀವ್ರ ವಿರೋಧ ವ್ಯಕ್ತವಾಗಿದೆ.
ರೈತ ಸಂಘದಿಂದ ಬೃಹತ್ ಪ್ರತಿಭಟನೆ ನಡೆದಿದೆ.
ಕೆಆರ್ ಎಸ್ ಬೃಂದಾವನದ ಬಳಿ ಪ್ರತಿಭಟನೆ ನಡೆಸಿದ್ದಾರೆ.
ವಿರೋಧದ ನಡುವೆಯೂ ಕಾವೇರಿ ಆರತಿಗೆ ಸರ್ಕಾರ ಸಿದ್ದತೆ ನಡೆಸುತ್ತಿರದೆ.
ಬೃಂದಾವನದ ಬೋಟಿಂಗ್ ಪಾಯಿಂಟ್ ಬಳಿ ಆರತಿಗೆ ಸಿದ್ದತೆ ಮಾಡಲಾಗುತ್ತಿದೆ.
ಸರ್ಕಾರದ ನಡೆ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೂಡಲೇ ಕಾವೇರಿ ಆರತಿ ಯೋಜನೆ ಕೈಬಿಡಬೇಕು.
ಈ ಯೋಜನೆಯಿಂದ ಐತಿಹಾಸಿಕ ಕೆಆರ್ ಎಸ್ ಡ್ಯಾಂಗೆ ಮಾರಕ ಎಂದು ಆರೋಪಿಸಿದ್ದಾರೆ.
ಶಾಸಕ ಗಣಿಗ ರವಿಕುಮಾರ್ ವಿರುದ್ದ ಪ್ರತಿಭಟನಾಕಾರರ ಸಿಡಿದೆದ್ದಿದ್ದಾರೆ.
ಕಾವೇರಿ ಆರತಿ, ಅಮ್ಯೂಸ್ಮೆಂಟ್ ಪಾರ್ಕ್ ಮಾಡೇ ಮಾಡ್ತೀವಿ ಎಂದು ಸವಾಲ್ ಹಾಕಿರುವ
ಗಣಿಗ ರವಿಕುಮಾರ್ ಗೆ ಕಿವಿಮಾತು ಹೇಳಿದ್ದಾರೆ. ನೀವು ಹೇಳ್ತಿರೋದು ಸರಿಯಲ್ಲ.ರೈತರು ಎದ್ದರೇ ನಿಮಗೆ ಮಂಗಳಾರತಿ ಆಗುತ್ತೆ ಎಂದು ಎಚ್ಚರಿಕೆ ಕೊಟ್ಟಿದ್ದಾರೆ.
ಇದೇ ವೇಳೆ ಡಿಕೆಶಿ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾಲ್ತುಳಿತ ಪ್ರಕರಣಕ್ಕೆ ಸಿಎಂ,‌ಡಿಸಿಎಂ ಕಾರಣ.
ಸಹೋದರ ಸೋತಿದ್ರಿಂದ ಡಿಕೆಶಿಗೆ ಹುಚ್ಚು ಬಂದಿದೆ.
30 ವರ್ಷ ರಜೆಯನ್ನೆ ಹಾಕದ ಐಪಿಎಸ್ ಅಧಿಕಾರಿ ದಯಾನಂದ್ ರನ್ನ ಸಸ್ಪೆಂಡ್ ಮಾಡ್ತೀರಾ?.
ನಿಮ್ಮ ವಂಶಗಳೆಲ್ಲ ನಿರ್ನಾಮವಾಗುತ್ತೆ ಎಂದು ರಾಜಕಾರಣಿಗಳ ವಿರುದ್ದ ಸಾಹಿತಿ ಹರಿಹರ ಪ್ರಿಯ ವಾಗ್ದಾಳಿ ನಡೆಸಿದರು…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *