ಕೆರೆ ಅಭಿವೃದ್ದಿ ಕಾಮಗಾರಿಯಲ್ಲಿ ಅಕ್ರಮ ಆರೋಪ ಸಾಬೀತು…ಗ್ರಾ.ಪಂ.ಅಧ್ಯಕ್ಷ ಸೇರಿ 4 ಅಧಿಕಾರಿಗಳಿಗೆ ದಂಡ ವಿಧಿಸಿದ ಓಂಬುಡ್ಸ್ ಪರ್ಸನ್…Tv10 ಸುದ್ದಿ ಇಂಪ್ಯಾಕ್ಟ್…

ಕೆರೆ ಅಭಿವೃದ್ದಿ ಕಾಮಗಾರಿಯಲ್ಲಿ ಅಕ್ರಮ ಆರೋಪ ಸಾಬೀತು…ಗ್ರಾ.ಪಂ.ಅಧ್ಯಕ್ಷ ಸೇರಿ 4 ಅಧಿಕಾರಿಗಳಿಗೆ ದಂಡ ವಿಧಿಸಿದ ಓಂಬುಡ್ಸ್ ಪರ್ಸನ್…Tv10 ಸುದ್ದಿ ಇಂಪ್ಯಾಕ್ಟ್…

ಕೆರೆ ಅಭಿವೃದ್ದಿ ಕಾಮಗಾರಿಯಲ್ಲಿ ಅಕ್ರಮ ಆರೋಪ ಸಾಬೀತು…ಗ್ರಾ.ಪಂ.ಅಧ್ಯಕ್ಷ ಸೇರಿ 4 ಅಧಿಕಾರಿಗಳಿಗೆ ದಂಡ ವಿಧಿಸಿದ ಓಂಬುಡ್ಸ್ ಪರ್ಸನ್…Tv10 ಸುದ್ದಿ ಇಂಪ್ಯಾಕ್ಟ್…

ಹುಣಸೂರು,ಜೂ18,Tv10 ಕನ್ನಡ

ಕೆರೆ ಅಭಿವೃದ್ದಿ ಕಾಮಗಾರಿಯಲ್ಲಿ ಅಕ್ರಮ ಎಸಗಿದ ಚಿಲ್ಕುಂದ ಗ್ರಾಮ ಪಂಚಾಯ್ತಿಯ ಅಧ್ಯಕ್ಷ ಹಾಗೂ ನಾಲ್ವರು ಅಧಿಕಾರಿಗಳಿಗೆ ಓಂಬುಡ್ಸ್ ಪರ್ಸನ್ ದಂಡ ವಿಧಿಸಿ ತೀರ್ಪು ನೀಡಿದೆ.ಪಿಡಿಓ ರವಿ,ಗ್ರಾಮ ಪಂಚಾಯ್ತಿ ಅಧ್ಯಕ್ಷ ಸತೀಶ್,ತಾಂತ್ರಿಕ ಸಹಾಯಕ,ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಸಹಾಯಕ ನಿರ್ದೇಶಕ ರಿಗೆ ದಂಡ ಪಾವತಿಸುವಂತೆ ತೀರ್ಪು ನೀಡಿದೆ.ಇದು Tv10 ವರದಿ ಫಲಶೃತಿ

ಹುಣಸೂರು ತಾಲೂಕು ಚಿಲ್ಕುಂದ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಸರ್ವೆ ನಂ.198 ರ ದೊಂಡೆಕೆರೆಗೆ ಸಮಗ್ರ ಅಭಿವೃದ್ದಿ ಯೋಜನೆಗೆ ಅನುಮೋದನೆ ಪಡೆದು ಸರ್ವೆ ನಂ 158 ರ ಹುಲ್ಲುಕೆರೆಯನ್ನ ಅಭಿವೃದ್ದಿ ಪಡಿಸಿದ್ದ ಆರೋಪ ಸಾಬೀತಾದ ಹಿನ್ನಲೆ ಅಧ್ಯಕ್ಷ ಸತೀಶ್ ಹಾಗೂ ಪಿಡಿಓ ರವಿ ರವರಿಂದ 1,12,496/- ರೂ ವಸೂಲಿ ಮಾಡುವಂತೆ ಹಾಗೂ ಈ ಅಕ್ರಮಕ್ಕೆ ಸಹಕರಿಸಿದ ತಾಂತ್ರಿಕ ಸಹಾಯಕ ನಂದ ಶ್ರೀನಿವಾಸ್ ,ಕಾರ್ಯನಿರ್ವಾಹಕ ಅಧಿಕಾರಿ ಮನು. ಹಾಗೂ ಸಹಾಯಕ ನಿರ್ದೇಶಕ ಲೋಕೇಶ್ ರಿಗೆ ತಲಾ 1000 ವಸೂಲಿ ಮಾಡುವಂತೆ ತೀರ್ಪು ನೀಡಿದೆ.

ದೊಂಡೆಕೆರೆ ಅಭಿವೃದ್ದಿಗೆ ಅನುಮೋದನೆ ಪಡೆದು ಹುಲ್ಲುಕೆರೆಯನ್ನ ಅಭಿವೃದ್ದಿಪಡಿಸಿದ್ದರು.ಮನರೇಗಾ ಯೋಜನೆಯ ನಿಯಮಗಳನ್ನ ಗಾಳಿಗೆ ತೂರಿ ಸರ್ಕಾರದ ಕಣ್ಣಿಗೆ ಮಣ್ಣೆರಚಿದ್ದರು.ಈ ಅಕ್ರಮದ ಬಗ್ಗೆ ಹಿಂದೆ Tv10 ಕನ್ನಡ ವಾಹಿನಿಯಲ್ಲಿ ಸುದ್ದಿ ಮಾಡಿ ಸರ್ಕಾರದ ಕಣ್ಣು ತೆರಸಲಾಗಿತ್ತು.ಹಾಗೂ ಸ್ಥಳೀಯರಾದ ಪ್ರೇಂ ಕುಮಾರ್ ಎಂಬುವರು ಓಂಬುಡ್ಸ್ ಪರ್ಸನ್ ಮೊರೆ ಹೋಗಿದ್ದರು.

ಓಂಬುಡ್ಸ್ ಪರ್ಸನ್ ದಾಖಲೆಗಳನ್ನ ಪರಿಶೀಲಿಸಿದಾಗ ಅಕ್ರಮ ಬಯಲಿಗೆ ಬಂದು ಕಾಮಗಾರಿಗೆ ಖರ್ಚು ಮಾಡಿದ ಕೂಲಿ ಮೊತ್ತವನ್ನ ಪಾವತಿಸುವಂತೆ ಆದೇಶ ನೀಡಿತ್ತು.ಆದ್ರೆ ಅಧಿಕಾರಿಗಳು ಮೇಲ್ಮನವಿ ಸಲ್ಲಿಸಿದ್ದರು.ಮೇಲ್ಮನವಿ ಪ್ರಾಧಿಕಾರ ಕೂಲಂಕುಶವಾಗಿ ದಾಖಲೆಗಳನ್ನ ಪರಿಶೀಲಿಸಿದಾಗ ಮನರೇಗಾ ಯೋಜನೆ ನಿಯಮಗಳನ್ನ ಉಲ್ಲಂಘಿಸಿರುವುದು ಸ್ಪಷ್ಟವಾಗಿತ್ತು.ದೂರು ದಾಖಲಾದ ನಂತರ ಎರಡೂ ಕೆರೆಗಳು ಒಂದೇ ಸರ್ವೆ ನಂಬರ್ ನಲ್ಲಿ ಬರುತ್ತದೆ ಎಂಬ ಸುಳ್ಳು ಹೇಳಿಕೆ ನೀಡಿದ್ದರು.ಅಲ್ಲದೆ ವಿಚಾರಣೆ ವೇಳೆ ಅನುಮೋದನೆಯನ್ನ ಬದಲಾಯಿಸಲು ಜಿಲ್ಲಾಪಂಚಾಯ್ತಿಯಿಂದ ಅನುಮತಿ ಪಡೆದಿರುವುದಾಗಿ ತಿಳಿಸಿದ್ರು.ಅಲ್ಲದೆ ಕ್ರಿಯಾಯೋಜನೆಯ ಅಂದಾಜು ಪಟ್ಟಿಯನ್ನ 10 ರಿಂದ 20 ಲಕ್ಷಕ್ಕೆ ಹೆಚ್ಚಿಸಿದ್ದರು.ಜಿಲ್ಲಾ ಪಂಚಾಯ್ತಿಯಲ್ಲಿ ದಾಖಲೆಗಳನ್ನ ಪರಿಶೀಲಿಸಿದಾಗ ಹೆಚ್ಚುವರಿ ಅನುಮೋದನೆ ಪಡೆದಿಲ್ಲದಿರುವುದು ಸಹ ಬೆಳಕಿಗೆ ಬಂದಿದೆ.ಕಾನೂನು ಬಾಹಿರವಾಗಿ ಕೆರೆ ಅಭಿವೃದ್ದಿಪಡಿಸಿದ ಆರೋಪ ಸಾಬೀತಾದ ಹಿನ್ನಲೆ ಗ್ರಾಮ ಪಂಚಾಯ್ತಿ ಅಧ್ಯಕ್ಷ ಹಾಗೂ ನಾಲ್ವರು ಅಧಿಕಾರಿಗಳಿಗೆ ಓಂಬುಡ್ಸ್ ಪರ್ಸನ್ ದಂಡ ವಿಧಿಸಿ ತೀರ್ಪು ನೀಡಿದೆ.ಇದು Tv10 ವರದಿಯ ಫಲಶೃತಿಯಾಗಿದೆ…

Spread the love

Related post

ಗ್ರಾಮದೇವತೆ ಜಾತ್ರೆ ವಿಡಿಯೋ ಮಾಡಿದ್ರೆ ಹುಷಾರ್…30 ಸಾವಿರ ದಂಡ ಎಚ್ಚರಿಕೆ…ಡಂಗುರ ಸಾರಿ ಪ್ರಚಾರ…

ಗ್ರಾಮದೇವತೆ ಜಾತ್ರೆ ವಿಡಿಯೋ ಮಾಡಿದ್ರೆ ಹುಷಾರ್…30 ಸಾವಿರ ದಂಡ ಎಚ್ಚರಿಕೆ…ಡಂಗುರ ಸಾರಿ…

ಗ್ರಾಮದೇವತೆ ಜಾತ್ರೆ ವಿಡಿಯೋ ಮಾಡಿದ್ರೆ ಹುಷಾರ್…30 ಸಾವಿರ ದಂಡ ಎಚ್ಚರಿಕೆ…ಡಂಗುರ ಸಾರಿ ಪ್ರಚಾರ… ನಂಜನಗೂಡು,ಫೆ9,Tv10 ಕನ್ನಡ ಗ್ರಾಮದೇವತೆ ಜಾತ್ರೇಲಿ ಕುಡಿದು ಗಲಾಟೆ ಮಾಡಿದ್ರೆ,ಹೆಣ್ಣು ಮಕ್ಕಳ ವಿಡಿಯೋ ಮಾಡಿದ್ರೆ 30…
ಅಂಬಿಕಾಪುರ ಗ್ರಾಮದಲ್ಲಿ ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಗ್ರಾಮ ಘಟಕ ಉದ್ಘಾಟನೆ.

ಅಂಬಿಕಾಪುರ ಗ್ರಾಮದಲ್ಲಿ ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ…

ಅಂಬಿಕಾಪುರ ಗ್ರಾಮದಲ್ಲಿ ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಗ್ರಾಮ ಘಟಕ ಉದ್ಘಾಟನೆ. ಹನೂರು Tv10 ಕನ್ನಡ07/02/2026. ಹನೂರು :ರೈತಾಪಿ ವರ್ಗದ ಜನರು…
ಭೂಗಳ್ಳರಿಗೆ ಬಿಸಿ…ಜೆಸಿಬಿ ಘರ್ಜನೆ…140 ಕೋಟಿ ಮೌಲ್ಯದ ಆಸ್ತಿ ಮೈಸೂರು ಅಭಿವೃದ್ದಿ ಪ್ರಾಧಿಕಾರದ ವಶಕ್ಕೆ…

ಭೂಗಳ್ಳರಿಗೆ ಬಿಸಿ…ಜೆಸಿಬಿ ಘರ್ಜನೆ…140 ಕೋಟಿ ಮೌಲ್ಯದ ಆಸ್ತಿ ಮೈಸೂರು ಅಭಿವೃದ್ದಿ ಪ್ರಾಧಿಕಾರದ…

ಭೂಗಳ್ಳರಿಗೆ ಬಿಸಿ…ಜೆಸಿಬಿ ಘರ್ಜನೆ…140 ಕೋಟಿ ಮೌಲ್ಯದ ಆಸ್ತಿ ಮೈಸೂರು ಅಭಿವೃದ್ದಿ ಪ್ರಾಧಿಕಾರದ ವಶಕ್ಕೆ… ಮೈಸೂರು,ಫೆ7,Tv10 ಕನ್ನಡ ಬೆಳ್ಳಬೆಳಗ್ಗೆ ಮೈಸೂರು ಅಭಿವೃದ್ದ ಪ್ರಾಧಿಕಾರ ಭೂಗಳ್ಳರಿಗೆ ಬಿಸಿ ಮುಟ್ಟಿಸಿದೆ.ಮೈಸೂರು ತಾಲೂಕು ಕಸಬ…

Leave a Reply

Your email address will not be published. Required fields are marked *