ಕೆರೆ ಅಭಿವೃದ್ದಿ ಕಾಮಗಾರಿಯಲ್ಲಿ ಅಕ್ರಮ ಆರೋಪ ಸಾಬೀತು…ಗ್ರಾ.ಪಂ.ಅಧ್ಯಕ್ಷ ಸೇರಿ 4 ಅಧಿಕಾರಿಗಳಿಗೆ ದಂಡ ವಿಧಿಸಿದ ಓಂಬುಡ್ಸ್ ಪರ್ಸನ್…Tv10 ಸುದ್ದಿ ಇಂಪ್ಯಾಕ್ಟ್…

ಕೆರೆ ಅಭಿವೃದ್ದಿ ಕಾಮಗಾರಿಯಲ್ಲಿ ಅಕ್ರಮ ಆರೋಪ ಸಾಬೀತು…ಗ್ರಾ.ಪಂ.ಅಧ್ಯಕ್ಷ ಸೇರಿ 4 ಅಧಿಕಾರಿಗಳಿಗೆ ದಂಡ ವಿಧಿಸಿದ ಓಂಬುಡ್ಸ್ ಪರ್ಸನ್…Tv10 ಸುದ್ದಿ ಇಂಪ್ಯಾಕ್ಟ್…

ಕೆರೆ ಅಭಿವೃದ್ದಿ ಕಾಮಗಾರಿಯಲ್ಲಿ ಅಕ್ರಮ ಆರೋಪ ಸಾಬೀತು…ಗ್ರಾ.ಪಂ.ಅಧ್ಯಕ್ಷ ಸೇರಿ 4 ಅಧಿಕಾರಿಗಳಿಗೆ ದಂಡ ವಿಧಿಸಿದ ಓಂಬುಡ್ಸ್ ಪರ್ಸನ್…Tv10 ಸುದ್ದಿ ಇಂಪ್ಯಾಕ್ಟ್…

ಹುಣಸೂರು,ಜೂ18,Tv10 ಕನ್ನಡ

ಕೆರೆ ಅಭಿವೃದ್ದಿ ಕಾಮಗಾರಿಯಲ್ಲಿ ಅಕ್ರಮ ಎಸಗಿದ ಚಿಲ್ಕುಂದ ಗ್ರಾಮ ಪಂಚಾಯ್ತಿಯ ಅಧ್ಯಕ್ಷ ಹಾಗೂ ನಾಲ್ವರು ಅಧಿಕಾರಿಗಳಿಗೆ ಓಂಬುಡ್ಸ್ ಪರ್ಸನ್ ದಂಡ ವಿಧಿಸಿ ತೀರ್ಪು ನೀಡಿದೆ.ಪಿಡಿಓ ರವಿ,ಗ್ರಾಮ ಪಂಚಾಯ್ತಿ ಅಧ್ಯಕ್ಷ ಸತೀಶ್,ತಾಂತ್ರಿಕ ಸಹಾಯಕ,ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಸಹಾಯಕ ನಿರ್ದೇಶಕ ರಿಗೆ ದಂಡ ಪಾವತಿಸುವಂತೆ ತೀರ್ಪು ನೀಡಿದೆ.ಇದು Tv10 ವರದಿ ಫಲಶೃತಿ

ಹುಣಸೂರು ತಾಲೂಕು ಚಿಲ್ಕುಂದ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಸರ್ವೆ ನಂ.198 ರ ದೊಂಡೆಕೆರೆಗೆ ಸಮಗ್ರ ಅಭಿವೃದ್ದಿ ಯೋಜನೆಗೆ ಅನುಮೋದನೆ ಪಡೆದು ಸರ್ವೆ ನಂ 158 ರ ಹುಲ್ಲುಕೆರೆಯನ್ನ ಅಭಿವೃದ್ದಿ ಪಡಿಸಿದ್ದ ಆರೋಪ ಸಾಬೀತಾದ ಹಿನ್ನಲೆ ಅಧ್ಯಕ್ಷ ಸತೀಶ್ ಹಾಗೂ ಪಿಡಿಓ ರವಿ ರವರಿಂದ 1,12,496/- ರೂ ವಸೂಲಿ ಮಾಡುವಂತೆ ಹಾಗೂ ಈ ಅಕ್ರಮಕ್ಕೆ ಸಹಕರಿಸಿದ ತಾಂತ್ರಿಕ ಸಹಾಯಕ ನಂದ ಶ್ರೀನಿವಾಸ್ ,ಕಾರ್ಯನಿರ್ವಾಹಕ ಅಧಿಕಾರಿ ಮನು. ಹಾಗೂ ಸಹಾಯಕ ನಿರ್ದೇಶಕ ಲೋಕೇಶ್ ರಿಗೆ ತಲಾ 1000 ವಸೂಲಿ ಮಾಡುವಂತೆ ತೀರ್ಪು ನೀಡಿದೆ.

ದೊಂಡೆಕೆರೆ ಅಭಿವೃದ್ದಿಗೆ ಅನುಮೋದನೆ ಪಡೆದು ಹುಲ್ಲುಕೆರೆಯನ್ನ ಅಭಿವೃದ್ದಿಪಡಿಸಿದ್ದರು.ಮನರೇಗಾ ಯೋಜನೆಯ ನಿಯಮಗಳನ್ನ ಗಾಳಿಗೆ ತೂರಿ ಸರ್ಕಾರದ ಕಣ್ಣಿಗೆ ಮಣ್ಣೆರಚಿದ್ದರು.ಈ ಅಕ್ರಮದ ಬಗ್ಗೆ ಹಿಂದೆ Tv10 ಕನ್ನಡ ವಾಹಿನಿಯಲ್ಲಿ ಸುದ್ದಿ ಮಾಡಿ ಸರ್ಕಾರದ ಕಣ್ಣು ತೆರಸಲಾಗಿತ್ತು.ಹಾಗೂ ಸ್ಥಳೀಯರಾದ ಪ್ರೇಂ ಕುಮಾರ್ ಎಂಬುವರು ಓಂಬುಡ್ಸ್ ಪರ್ಸನ್ ಮೊರೆ ಹೋಗಿದ್ದರು.

ಓಂಬುಡ್ಸ್ ಪರ್ಸನ್ ದಾಖಲೆಗಳನ್ನ ಪರಿಶೀಲಿಸಿದಾಗ ಅಕ್ರಮ ಬಯಲಿಗೆ ಬಂದು ಕಾಮಗಾರಿಗೆ ಖರ್ಚು ಮಾಡಿದ ಕೂಲಿ ಮೊತ್ತವನ್ನ ಪಾವತಿಸುವಂತೆ ಆದೇಶ ನೀಡಿತ್ತು.ಆದ್ರೆ ಅಧಿಕಾರಿಗಳು ಮೇಲ್ಮನವಿ ಸಲ್ಲಿಸಿದ್ದರು.ಮೇಲ್ಮನವಿ ಪ್ರಾಧಿಕಾರ ಕೂಲಂಕುಶವಾಗಿ ದಾಖಲೆಗಳನ್ನ ಪರಿಶೀಲಿಸಿದಾಗ ಮನರೇಗಾ ಯೋಜನೆ ನಿಯಮಗಳನ್ನ ಉಲ್ಲಂಘಿಸಿರುವುದು ಸ್ಪಷ್ಟವಾಗಿತ್ತು.ದೂರು ದಾಖಲಾದ ನಂತರ ಎರಡೂ ಕೆರೆಗಳು ಒಂದೇ ಸರ್ವೆ ನಂಬರ್ ನಲ್ಲಿ ಬರುತ್ತದೆ ಎಂಬ ಸುಳ್ಳು ಹೇಳಿಕೆ ನೀಡಿದ್ದರು.ಅಲ್ಲದೆ ವಿಚಾರಣೆ ವೇಳೆ ಅನುಮೋದನೆಯನ್ನ ಬದಲಾಯಿಸಲು ಜಿಲ್ಲಾಪಂಚಾಯ್ತಿಯಿಂದ ಅನುಮತಿ ಪಡೆದಿರುವುದಾಗಿ ತಿಳಿಸಿದ್ರು.ಅಲ್ಲದೆ ಕ್ರಿಯಾಯೋಜನೆಯ ಅಂದಾಜು ಪಟ್ಟಿಯನ್ನ 10 ರಿಂದ 20 ಲಕ್ಷಕ್ಕೆ ಹೆಚ್ಚಿಸಿದ್ದರು.ಜಿಲ್ಲಾ ಪಂಚಾಯ್ತಿಯಲ್ಲಿ ದಾಖಲೆಗಳನ್ನ ಪರಿಶೀಲಿಸಿದಾಗ ಹೆಚ್ಚುವರಿ ಅನುಮೋದನೆ ಪಡೆದಿಲ್ಲದಿರುವುದು ಸಹ ಬೆಳಕಿಗೆ ಬಂದಿದೆ.ಕಾನೂನು ಬಾಹಿರವಾಗಿ ಕೆರೆ ಅಭಿವೃದ್ದಿಪಡಿಸಿದ ಆರೋಪ ಸಾಬೀತಾದ ಹಿನ್ನಲೆ ಗ್ರಾಮ ಪಂಚಾಯ್ತಿ ಅಧ್ಯಕ್ಷ ಹಾಗೂ ನಾಲ್ವರು ಅಧಿಕಾರಿಗಳಿಗೆ ಓಂಬುಡ್ಸ್ ಪರ್ಸನ್ ದಂಡ ವಿಧಿಸಿ ತೀರ್ಪು ನೀಡಿದೆ.ಇದು Tv10 ವರದಿಯ ಫಲಶೃತಿಯಾಗಿದೆ…

Spread the love

Related post

ಸರ್ಕಾರಿ ಜಾಗದಲ್ಲಿ ಅಕ್ರಮ ಹೋಟೆಲ್ ನಿರ್ಮಾಣ ಆರೋಪ – ಜಿಲ್ಲಾಧಿಕಾರಿ ಗಮನ ಹರಿಸಲು ರೈತರ ಮನವಿ

ಸರ್ಕಾರಿ ಜಾಗದಲ್ಲಿ ಅಕ್ರಮ ಹೋಟೆಲ್ ನಿರ್ಮಾಣ ಆರೋಪ – ಜಿಲ್ಲಾಧಿಕಾರಿ ಗಮನ…

ಸರ್ಕಾರಿ ಜಾಗದಲ್ಲಿ ಅಕ್ರಮ ಹೋಟೆಲ್ ನಿರ್ಮಾಣ ಆರೋಪ – ಜಿಲ್ಲಾಧಿಕಾರಿ ಗಮನ ಹರಿಸಲು ರೈತರ ಮನವಿ ಗುಂಡ್ಲುಪೇಟೆ ತಾಲೂಕಿನ ಹಿರಿಕಾಟಿ ಗೇಟ್ ಸಮೀಪದ ಸರ್ವೇ ನಂ.218/1ಕ್ಕೆ ಸೇರಿದ ಸರ್ಕಾರಿ…
ಮೈಸೂರು, ಏಪ್ರಿಲ್ 13: ವಿಶ್ವಪ್ರಸಿದ್ಧ KRS Brindavan Gardens ನಲ್ಲಿ ಡಿಜಿಟಲ್ ಯುಗದಲ್ಲಿಯೂ “ಕ್ಯಾಶ್ ಮಾತ್ರ” ನಿಯಮ ಮುಂದುವರಿಯುತ್ತಿರುವುದು ಪ್ರವಾಸಿಗರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ.

ಮೈಸೂರು, ಏಪ್ರಿಲ್ 13: ವಿಶ್ವಪ್ರಸಿದ್ಧ KRS Brindavan Gardens ನಲ್ಲಿ ಡಿಜಿಟಲ್…

ಮೈಸೂರು, ಏಪ್ರಿಲ್ 13: ವಿಶ್ವಪ್ರಸಿದ್ಧ KRS Brindavan Gardens ನಲ್ಲಿ ಡಿಜಿಟಲ್ ಯುಗದಲ್ಲಿಯೂ “ಕ್ಯಾಶ್ ಮಾತ್ರ” ನಿಯಮ ಮುಂದುವರಿಯುತ್ತಿರುವುದು ಪ್ರವಾಸಿಗರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ. ಪ್ರವೇಶ ಟಿಕೆಟ್ ಪಡೆಯಲು ಬರುವವರಿಗೆ…
ಯುವಕನ ಕಿಡ್ನಾಪ್…ಮಂಗಳಮುಖಿ ವೇಷ ಹಾಕಿಸಿ ಕಲೆಕ್ಷನ್…ಸೆಕ್ಸ್ ವರ್ಕ್ ಗೆಯೂಸ್…ಕರಾಳದಂಧೆಯ ಮತ್ತೊಂದು ಮುಖ ಬಯಲು…

ಯುವಕನ ಕಿಡ್ನಾಪ್…ಮಂಗಳಮುಖಿ ವೇಷ ಹಾಕಿಸಿ ಕಲೆಕ್ಷನ್…ಸೆಕ್ಸ್ ವರ್ಕ್ ಗೆಯೂಸ್…ಕರಾಳದಂಧೆಯ ಮತ್ತೊಂದು ಮುಖ…

ಯುವಕನ ಕಿಡ್ನಾಪ್…ಮಂಗಳಮುಖಿ ವೇಷ ಹಾಕಿಸಿ ಕಲೆಕ್ಷನ್…ಸೆಕ್ಸ್ ವರ್ಕ್ ಗೆಯೂಸ್…ಕರಾಳದಂಧೆಯ ಮತ್ತೊಂದು ಮುಖ ಬಯಲು… ನಂಜನಗೂಡು,ಏ12,Tv10 ಕನ್ನಡ ಯುವಕನೊಬ್ಬನನ್ನ ಕಿಡ್ನಾಪ್ ಮಾಡಿ ಬಲವಂತವಾಗಿ ಮಂಗಳಮುಖಿ ವೇಷ ಹಾಕಿಸಿ ಕಲೆಕ್ಷನ್ ಹಾಗೂ…

Leave a Reply

Your email address will not be published. Required fields are marked *