ಕೆರೆ ಅಭಿವೃದ್ದಿ ಕಾಮಗಾರಿಯಲ್ಲಿ ಅಕ್ರಮ ಆರೋಪ ಸಾಬೀತು…ಗ್ರಾ.ಪಂ.ಅಧ್ಯಕ್ಷ ಸೇರಿ 4 ಅಧಿಕಾರಿಗಳಿಗೆ ದಂಡ ವಿಧಿಸಿದ ಓಂಬುಡ್ಸ್ ಪರ್ಸನ್…Tv10 ಸುದ್ದಿ ಇಂಪ್ಯಾಕ್ಟ್…

ಕೆರೆ ಅಭಿವೃದ್ದಿ ಕಾಮಗಾರಿಯಲ್ಲಿ ಅಕ್ರಮ ಆರೋಪ ಸಾಬೀತು…ಗ್ರಾ.ಪಂ.ಅಧ್ಯಕ್ಷ ಸೇರಿ 4 ಅಧಿಕಾರಿಗಳಿಗೆ ದಂಡ ವಿಧಿಸಿದ ಓಂಬುಡ್ಸ್ ಪರ್ಸನ್…Tv10 ಸುದ್ದಿ ಇಂಪ್ಯಾಕ್ಟ್…

ಕೆರೆ ಅಭಿವೃದ್ದಿ ಕಾಮಗಾರಿಯಲ್ಲಿ ಅಕ್ರಮ ಆರೋಪ ಸಾಬೀತು…ಗ್ರಾ.ಪಂ.ಅಧ್ಯಕ್ಷ ಸೇರಿ 4 ಅಧಿಕಾರಿಗಳಿಗೆ ದಂಡ ವಿಧಿಸಿದ ಓಂಬುಡ್ಸ್ ಪರ್ಸನ್…Tv10 ಸುದ್ದಿ ಇಂಪ್ಯಾಕ್ಟ್…

ಹುಣಸೂರು,ಜೂ18,Tv10 ಕನ್ನಡ

ಕೆರೆ ಅಭಿವೃದ್ದಿ ಕಾಮಗಾರಿಯಲ್ಲಿ ಅಕ್ರಮ ಎಸಗಿದ ಚಿಲ್ಕುಂದ ಗ್ರಾಮ ಪಂಚಾಯ್ತಿಯ ಅಧ್ಯಕ್ಷ ಹಾಗೂ ನಾಲ್ವರು ಅಧಿಕಾರಿಗಳಿಗೆ ಓಂಬುಡ್ಸ್ ಪರ್ಸನ್ ದಂಡ ವಿಧಿಸಿ ತೀರ್ಪು ನೀಡಿದೆ.ಪಿಡಿಓ ರವಿ,ಗ್ರಾಮ ಪಂಚಾಯ್ತಿ ಅಧ್ಯಕ್ಷ ಸತೀಶ್,ತಾಂತ್ರಿಕ ಸಹಾಯಕ,ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಸಹಾಯಕ ನಿರ್ದೇಶಕ ರಿಗೆ ದಂಡ ಪಾವತಿಸುವಂತೆ ತೀರ್ಪು ನೀಡಿದೆ.ಇದು Tv10 ವರದಿ ಫಲಶೃತಿ

ಹುಣಸೂರು ತಾಲೂಕು ಚಿಲ್ಕುಂದ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಸರ್ವೆ ನಂ.198 ರ ದೊಂಡೆಕೆರೆಗೆ ಸಮಗ್ರ ಅಭಿವೃದ್ದಿ ಯೋಜನೆಗೆ ಅನುಮೋದನೆ ಪಡೆದು ಸರ್ವೆ ನಂ 158 ರ ಹುಲ್ಲುಕೆರೆಯನ್ನ ಅಭಿವೃದ್ದಿ ಪಡಿಸಿದ್ದ ಆರೋಪ ಸಾಬೀತಾದ ಹಿನ್ನಲೆ ಅಧ್ಯಕ್ಷ ಸತೀಶ್ ಹಾಗೂ ಪಿಡಿಓ ರವಿ ರವರಿಂದ 1,12,496/- ರೂ ವಸೂಲಿ ಮಾಡುವಂತೆ ಹಾಗೂ ಈ ಅಕ್ರಮಕ್ಕೆ ಸಹಕರಿಸಿದ ತಾಂತ್ರಿಕ ಸಹಾಯಕ ನಂದ ಶ್ರೀನಿವಾಸ್ ,ಕಾರ್ಯನಿರ್ವಾಹಕ ಅಧಿಕಾರಿ ಮನು. ಹಾಗೂ ಸಹಾಯಕ ನಿರ್ದೇಶಕ ಲೋಕೇಶ್ ರಿಗೆ ತಲಾ 1000 ವಸೂಲಿ ಮಾಡುವಂತೆ ತೀರ್ಪು ನೀಡಿದೆ.

ದೊಂಡೆಕೆರೆ ಅಭಿವೃದ್ದಿಗೆ ಅನುಮೋದನೆ ಪಡೆದು ಹುಲ್ಲುಕೆರೆಯನ್ನ ಅಭಿವೃದ್ದಿಪಡಿಸಿದ್ದರು.ಮನರೇಗಾ ಯೋಜನೆಯ ನಿಯಮಗಳನ್ನ ಗಾಳಿಗೆ ತೂರಿ ಸರ್ಕಾರದ ಕಣ್ಣಿಗೆ ಮಣ್ಣೆರಚಿದ್ದರು.ಈ ಅಕ್ರಮದ ಬಗ್ಗೆ ಹಿಂದೆ Tv10 ಕನ್ನಡ ವಾಹಿನಿಯಲ್ಲಿ ಸುದ್ದಿ ಮಾಡಿ ಸರ್ಕಾರದ ಕಣ್ಣು ತೆರಸಲಾಗಿತ್ತು.ಹಾಗೂ ಸ್ಥಳೀಯರಾದ ಪ್ರೇಂ ಕುಮಾರ್ ಎಂಬುವರು ಓಂಬುಡ್ಸ್ ಪರ್ಸನ್ ಮೊರೆ ಹೋಗಿದ್ದರು.

ಓಂಬುಡ್ಸ್ ಪರ್ಸನ್ ದಾಖಲೆಗಳನ್ನ ಪರಿಶೀಲಿಸಿದಾಗ ಅಕ್ರಮ ಬಯಲಿಗೆ ಬಂದು ಕಾಮಗಾರಿಗೆ ಖರ್ಚು ಮಾಡಿದ ಕೂಲಿ ಮೊತ್ತವನ್ನ ಪಾವತಿಸುವಂತೆ ಆದೇಶ ನೀಡಿತ್ತು.ಆದ್ರೆ ಅಧಿಕಾರಿಗಳು ಮೇಲ್ಮನವಿ ಸಲ್ಲಿಸಿದ್ದರು.ಮೇಲ್ಮನವಿ ಪ್ರಾಧಿಕಾರ ಕೂಲಂಕುಶವಾಗಿ ದಾಖಲೆಗಳನ್ನ ಪರಿಶೀಲಿಸಿದಾಗ ಮನರೇಗಾ ಯೋಜನೆ ನಿಯಮಗಳನ್ನ ಉಲ್ಲಂಘಿಸಿರುವುದು ಸ್ಪಷ್ಟವಾಗಿತ್ತು.ದೂರು ದಾಖಲಾದ ನಂತರ ಎರಡೂ ಕೆರೆಗಳು ಒಂದೇ ಸರ್ವೆ ನಂಬರ್ ನಲ್ಲಿ ಬರುತ್ತದೆ ಎಂಬ ಸುಳ್ಳು ಹೇಳಿಕೆ ನೀಡಿದ್ದರು.ಅಲ್ಲದೆ ವಿಚಾರಣೆ ವೇಳೆ ಅನುಮೋದನೆಯನ್ನ ಬದಲಾಯಿಸಲು ಜಿಲ್ಲಾಪಂಚಾಯ್ತಿಯಿಂದ ಅನುಮತಿ ಪಡೆದಿರುವುದಾಗಿ ತಿಳಿಸಿದ್ರು.ಅಲ್ಲದೆ ಕ್ರಿಯಾಯೋಜನೆಯ ಅಂದಾಜು ಪಟ್ಟಿಯನ್ನ 10 ರಿಂದ 20 ಲಕ್ಷಕ್ಕೆ ಹೆಚ್ಚಿಸಿದ್ದರು.ಜಿಲ್ಲಾ ಪಂಚಾಯ್ತಿಯಲ್ಲಿ ದಾಖಲೆಗಳನ್ನ ಪರಿಶೀಲಿಸಿದಾಗ ಹೆಚ್ಚುವರಿ ಅನುಮೋದನೆ ಪಡೆದಿಲ್ಲದಿರುವುದು ಸಹ ಬೆಳಕಿಗೆ ಬಂದಿದೆ.ಕಾನೂನು ಬಾಹಿರವಾಗಿ ಕೆರೆ ಅಭಿವೃದ್ದಿಪಡಿಸಿದ ಆರೋಪ ಸಾಬೀತಾದ ಹಿನ್ನಲೆ ಗ್ರಾಮ ಪಂಚಾಯ್ತಿ ಅಧ್ಯಕ್ಷ ಹಾಗೂ ನಾಲ್ವರು ಅಧಿಕಾರಿಗಳಿಗೆ ಓಂಬುಡ್ಸ್ ಪರ್ಸನ್ ದಂಡ ವಿಧಿಸಿ ತೀರ್ಪು ನೀಡಿದೆ.ಇದು Tv10 ವರದಿಯ ಫಲಶೃತಿಯಾಗಿದೆ…

Spread the love

Related post

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…
ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಕೊಳ್ಳೇಗಾಲ,ಜೂ26,Tv10 ಕನ್ನಡ ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ಮೂರು ಮರಿಗಳು ಅಸಹಜ ಸಾವಿಗೀಡಾಗಿರುವ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ…
ಪೀಡಿಯಾಟ್ರಿಕ್ ನ್ಯೂರೋಲಾಜಿಸ್ಟ್ ಡಾ. ಅನುಷಾ ರಾಜ್ ಗೆ ಮಿಸ್. ಮೆಡಿಕ್ವೀನ್ 2025 ಕಿರೀಟ…

ಪೀಡಿಯಾಟ್ರಿಕ್ ನ್ಯೂರೋಲಾಜಿಸ್ಟ್ ಡಾ. ಅನುಷಾ ರಾಜ್ ಗೆ ಮಿಸ್. ಮೆಡಿಕ್ವೀನ್ 2025…

ಮೈಸೂರು,ಜೂ26,Tv10 ಕನ್ನಡ ಮೈಸೂರಿನ ಪೀಡಿಯಾಟ್ರಿಕ್ ನ್ಯೂರಾಲಜಿಸ್ಟ್ ಡಾ.ಅನೂಷಾ ರಾಜ್ ರವರು ಮಿಸ್ ಮೆಡಿಕ್ವೀನ್ 2025 ಸ್ಪರ್ಧೆಯಲ್ಲಿ ವಿಜಯಿಯಾಗಿ ಹೊರಹೊಮ್ಮಿದ್ದಾರೆ. ಜೂನ್ 22 ರಂದು ಮಹಾರಾಷ್ಟ್ರದ ಪುಣೆಯಲ್ಲಿ ನಡೆದ ಸ್ಪರ್ಧೆಯಲ್ಲಿ…

Leave a Reply

Your email address will not be published. Required fields are marked *