ಪತಿಯ ಅನೈತಿಕ ಸಂಭಂಧ…ರೆಡ್ ಹ್ಯಾಂಡಾಗಿ ಹಿಡಿದ ಪತ್ನಿ…ಪ್ರಶ್ನಿಸಿದ್ದಕ್ಕೆ ಹಲ್ಲೆ…

ಪತಿಯ ಅನೈತಿಕ ಸಂಭಂಧ…ರೆಡ್ ಹ್ಯಾಂಡಾಗಿ ಹಿಡಿದ ಪತ್ನಿ…ಪ್ರಶ್ನಿಸಿದ್ದಕ್ಕೆ ಹಲ್ಲೆ…

ಮೈಸೂರು,ಜೂ18,Tv10 ಕನ್ನಡ

ಪತಿಯ ಅನೈತಿಕ ಸಂಭಂಧ ರೆಡ್ ಹ್ಯಾಂಡಾಗಿ ಹಿಡಿದು ಪ್ರಶ್ನಿಸಿದ ಪತ್ನಿಗೆ ಪ್ರಿಯತಮೆ ಜೊತೆ ಸೇರಿ ಹಲ್ಲೆ ನಡೆಸಿ ಪ್ರಾಣ ಬೆದರಿಕೆ ಹಾಕಿದ ಘಟನೆ ಮೈಸೂರಿನ ಶಿವನಗರದಲ್ಲಿ ನಡೆದಿದೆ.ಹಲ್ಲೆಗೊಳಗಾದ ಪತ್ನಿ ಮಿಲನ ರವರು ಪತಿ ಶಿವಲಿಂಗಸ್ವಾಮಿ ಹಾಗೂ ಪ್ರಿಯತಮೆ ಪವಿತ್ರಾ ಎಂಬುವರ ವಿರುದ್ದ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

12 ವರ್ಷಗಳ ಹಿಂದೆ ಮಿಲನ ಹಾಗೂ ಶಿವಲಿಂಗಸ್ವಾಮಿ ದಂಪತಿಗಳಾಗಿದ್ದು ಇಬ್ಬರು ಮಕ್ಕಳಿದ್ದಾರೆ.ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿರುವ ಶಿವಲಿಂಗಸ್ವಾಮಿ ಇತ್ತೀಚೆಗೆ ಪವಿತ್ರ ಎಂಬಾಕೆ ಜೊತೆ ಅನೈತಿಕ ಸಂಭಂಧ ಬೆಳೆಸಿದ್ದಾರೆ.ಈ ವಿಚಾರದಲ್ಲಿ ದಂಪತಿ ನಡುವೆ ಆಗಾಗ ಗಲಾಟೆ ಆಗಿದೆ.ಗಾರ್ಮೆಂಟ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿರುವ ಮಿಲನ ಮೊನ್ನೆ ಮನೆಗೆ ಹಿಂದಿರುಗಿದಾಗ ಪತಿ ಶಿವಲಿಂಗಸ್ವಾಮಿ ಪ್ರಿಯತಮೆ ಪವಿತ್ರಾ ಜೊತೆ ಮನೆಯಲ್ಲಿ ಸಿಕ್ಕಿಬಿದ್ದಿದ್ದಾನೆ.ಈ ಬಗ್ಗೆ ಪ್ರಶ್ನಿಸಿದಾಗ ಪ್ರಿಯತಮೆ ಜೊತೆ ಸೇರಿ ಪತಿ ಶಿವಲಿಂಗಸ್ವಾಮಿ ಪತ್ನಿ ಮೇಲೆ ಹಲ್ಲೆ ನಡೆಸಿ ನಿನ್ನನ್ನ ಸಾಯಿಸಿ ಪವಿತ್ರಾಳನ್ನ ಮದುವೆ ಆಗುವುದಾಗಿ ಧಂಕಿ ಹಾಕಿದ್ದಾನೆ.ಗಾಯಗೊಂಡ ಮಿಲನ ಚಿಕಿತ್ಸೆ ಪಡೆದು ನಂತರ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪತಿ ಹಾಗೂ ಪ್ರಿಯತಮೆ ವಿರುದ್ದ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಅಸಲಿ ಇದ್ದರೂ ನಕಲಿ ವ್ಯಕ್ತಿಗಳಿಂದ ಆಸ್ತಿ ಕಬಳಿಸಲು ಸಂಚು…ಐವರ ವಿರುದ್ದ ಹಿರಿಯ ಉಪನೊಂದಣಾಧಿಕಾರಿಗಳಿಂದ ಪ್ರಕರಣ ದಾಖಲು…

ಅಸಲಿ ಇದ್ದರೂ ನಕಲಿ ವ್ಯಕ್ತಿಗಳಿಂದ ಆಸ್ತಿ ಕಬಳಿಸಲು ಸಂಚು…ಐವರ ವಿರುದ್ದ ಹಿರಿಯ…

ಮೈಸೂರು,ಜು10,Tv10 ಕನ್ನಡ ಅಸಲಿ ವ್ಯಕ್ತಿ ಇದ್ದರೂ ನಕಲಿ ವ್ಯಕ್ತಿಗಳು ಆಸ್ತಿಯನ್ನ ಕಬಳಿಸಲು ಯತ್ನಿಸಿ ಸಿಕ್ಕಿಬಿದ್ದ ಘಟನೆ ಮೈಸೂರು ಪೂರ್ವ ಉಪನೊಂದಣಾಧಿಕಾರಿ ಕಚೇರಿಯಲ್ಲಿ ನಡೆದಿದೆ.ಸಂಚು ರೂಪಿಸಿ ಸಿಕ್ಕಿಬಿದ್ದ ಐದು ಭೂಗಳ್ಳರ…
ಹೃದಯ ಅಪಘಾತದಿಂದ ಗದ್ದಿಗೆ ಅರ್ಚಿಕರು ಸಾವು

ಹೃದಯ ಅಪಘಾತದಿಂದ ಗದ್ದಿಗೆ ಅರ್ಚಿಕರು ಸಾವು

ಹುಣಸೂರು ತಾಲೂಕಿನ ಗದ್ದಿಗೆ ಚಂಡುಗಣ್ಣ ಸ್ವಾಮಿ ಎಂಬ ಹೆಸರಿನ ಪ್ರಸಿದ್ದ ದೇವಸ್ಥಾನದಲ್ಲಿ ಕೆಂಡಗಣ್ಣ ಸ್ವಾಮಿ ಎಂಬ ಅರ್ಚಕರು ಬೆಳಗಿನ ಜಾವ ದೇವಸ್ಥಾನಕ್ಕೆ ಪೂಜೆ ಸಲ್ಲಿಸಲು ತಯಾರಿ ನಡೆಸುವ ವೇಳೆ…
ಹೃದಯಾಘಾತದಿಂದ ಯುವಕ ಸಾವು…

ಹೃದಯಾಘಾತದಿಂದ ಯುವಕ ಸಾವು…

ಮೈಸೂರು,ಜು10,Tv10 ಕನ್ನಡ ಮೈಸೂರಿನಲ್ಲಿ ಹೃದಯಾಘಾತದಿಂದ ಯುವಕ ಸಾವನ್ನಪ್ಪಿದ್ದಾನೆ.ದರ್ಶನ್ ಚೌದ್ರಿ (29) ಸಾವನ್ನಪ್ಪಿದ ಯುವಕ.ಮೈಸೂರಿನ ಚಾಮರಾಜ ಮೊಹಲ್ಲಾದ ನಿವಾಸಿಯಾಗಿದ್ದುದೇವರಾಜ ಮೊಹಲ್ಲಾದಲ್ಲಿ ಬಣ್ಣದ ಅಂಗಡಿ ಮಾಲೀಕನಾಗಿದ್ದ.ನೆನ್ನೆ ರಾತ್ರಿ ದಿಢೀರ್ ಎದೆ ನೋವು…

Leave a Reply

Your email address will not be published. Required fields are marked *