ವ್ಯಕ್ತಿಯನ್ನ ಅಕ್ರಮವಾಗಿ ಬಂಧಿಸಿ ಹಣ ವಸೂಲಿಗೆ ಪ್ರಯತ್ನ…ಬಲವಂತವಾಗಿ ಚೆಕ್ ಪಡೆದು ಬೌನ್ಸ್ ಮಾಡಿದ ಉದ್ಯಮಿಗಳ ವಿರುದ್ದ FIR…

ವ್ಯಕ್ತಿಯನ್ನ ಅಕ್ರಮವಾಗಿ ಬಂಧಿಸಿ ಹಣ ವಸೂಲಿಗೆ ಪ್ರಯತ್ನ…ಬಲವಂತವಾಗಿ ಚೆಕ್ ಪಡೆದು ಬೌನ್ಸ್ ಮಾಡಿದ ಉದ್ಯಮಿಗಳ ವಿರುದ್ದ FIR…

  • Crime
  • June 20, 2025
  • No Comment
  • 201

ಮೈಸೂರು,ಜೂ20,Tv10 ಕನ್ನಡ

ವ್ಯಕ್ತಿಯೊಬ್ಬರನ್ನ ಅಕ್ರಮವಾಗಿ ಬಂಧಿಸಿ ಬಲವಂತವಾಗಿ ಚೆಕ್ ಗೆ ಸಹಿ ಮಾಡಿಸಿಕೊಂಡು ನಂತರ ಬೌನ್ಸ್ ಮಾಡಿದ ಆರೋಪದ ಹಿನ್ನಲೆ ಬೆಂಗಳೂರು ಮೂಲದ ನಾಲ್ವರು ಉದ್ಯಮಿಗಳ ವಿರುದ್ದ ಮೈಸೂರಿನ ಎನ್.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ನೊಂದ ವ್ಯಕ್ತಿ ಕುಟುಂಬ ನ್ಯಾಯಾಲಯದ ಮೊರೆ ಹೋಗಿ ಪ್ರಕರಣ ದಾಖಲಿಸಿದ್ದಾರೆ.ಬೆಂಗಳೂರಿನ ಉದ್ಯಮಿಗಳಾದ ಗೋವಿಂದಬಾಬು ಪೂಜಾರಿ,ಸುರೇಶ್ ಎನ್ ಪೂಜಾರಿ ಹಾಗೂ ಇವರ ಸಹಚರರಾದ ಸುಖೇಶ್ ಶೆಟ್ಟಿ ,ಪ್ರಜ್ವಲ್ ಎಂಬುವರ ವಿರುದ್ದ ಎಫ್.ಐ.ಆರ್.ದಾಖಲಾಗಿದೆ.ಎನ್.ಆರ್.ಮೊಹಲ್ಲಾ ನಿವಾಸಿಗಳಾದ ಸುನಿಲ್ ಎಂಬುವರ ಪತ್ನಿ ಕವಿತಾ ರವರು ಪ್ರಕರಣ ದಾಖಲಿಸಿದ್ದಾರೆ.

ಸುನಿಲ್ ರವರು ಗೋವಿಂದ್ ಬಾಬು ಪೂಜಾರಿ ಹಾಗೂ ಸುರೇಶ್ ಎನ್ ಪೂಜಾರಿ ಒಡೆತನದ CHEFTAK FOOD & HOSPITALITY SERVICES ಉದ್ಯಮದ ವ್ಯವಸ್ಥಾಪಕರಾಗಿ ಕೆಲಸ ಮಾಡುತ್ತಿದ್ದರು.ಇವರ ಮೇಲೆ ಹಣ ದುರುಪಯೋಗಪಡಿಸಿದ ಆರೋಪ ಮಾಡಿದ್ದ ಮುಖ್ಯಸ್ಥರು 2022 ರಲ್ಲಿ ಅಕ್ರಮವಾಗಿ ಬಂಧಿಸಿ ಬಲವಂತವಾಗಿ 5 ಚೆಕ್ ಗಳಿಗೆ ಸಹಿ ಮಾಡಿಸಿಕೊಂಡಿದ್ದರು.ಈ ಸಂಭಂಧ ಸುನಿಲ್ ಹಾಗೂ ಇವರ ಪತ್ನಿ ಕವಿತಾ ರವರು ಸಹಿ ಮಾಡಿದ ಚೆಕ್ ಗಳನ್ನ ವಾಪಸ್ ಕೊಡುವಂತೆ ದುಂಬಾಲು ಬಿದ್ದಿದ್ದಾರೆ.ಚೆಕ್ ಹಿಂದಿರುಗಿಸುವುದಾಗಿ ನಂಬಿಕೆ ಹುಟ್ಟಿಸುತ್ತಾ 5 ಚೆಕ್ ಗಳಿಂದ 21 ಲಕ್ಷ ರೂಗಳನ್ನ ನಮೂದಿಸಿ ಬೌನ್ಸ್ ಮಾಡಿಸಿ ವಾರೆಂಟ್ ತಂದಿದ್ದಾರೆ.ಈ ಬೆಳವಣಿಗೆಯಿಂದ ನೊಂದ ಸುನಿಲ್ ಹಾಗೂ ಪತ್ನಿ ಕವಿತಾ ನ್ಯಾಯಕ್ಕಾಗಿ ನ್ಯಾಯಾಲಯದ ಮೊರೆ ಹೋಗಿದ್ದಾರೆ.ಮೂರು ವರ್ಷ ವಾದ ಆಲಿಸಿದ ಮೈಸೂರು ನ್ಯಾಯಾಲಯ ಉದ್ಯಮಿಗಳ ವಿರುದ್ದ FIR ದಾಖಲಿಸುವಂತೆ ಆದೇಶ ನೀಡಿದೆ.ಇದೇ ವೇಳೆ ಕೇಸ್ ವಾಪಸ್ ಪಡೆಯುವಂತೆ ಧಂಕಿ ಹಾಕಿದ್ದಾರೆಂದು ಆರೋಪಿಸಲಾಗಿದೆ.ಸಧ್ಯ ಎನ್.ಆರ್.ಪೊಲೀಸ್ ಠಾಣೆಯಲ್ಲಿ ಉದ್ಯಮಿಗಳ ವಿರುದ್ದ ಪ್ರಕರಣ ದಾಖಲಾಗಿದೆ…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು… ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *