ವ್ಯಕ್ತಿಯನ್ನ ಅಕ್ರಮವಾಗಿ ಬಂಧಿಸಿ ಹಣ ವಸೂಲಿಗೆ ಪ್ರಯತ್ನ…ಬಲವಂತವಾಗಿ ಚೆಕ್ ಪಡೆದು ಬೌನ್ಸ್ ಮಾಡಿದ ಉದ್ಯಮಿಗಳ ವಿರುದ್ದ FIR…

ವ್ಯಕ್ತಿಯನ್ನ ಅಕ್ರಮವಾಗಿ ಬಂಧಿಸಿ ಹಣ ವಸೂಲಿಗೆ ಪ್ರಯತ್ನ…ಬಲವಂತವಾಗಿ ಚೆಕ್ ಪಡೆದು ಬೌನ್ಸ್ ಮಾಡಿದ ಉದ್ಯಮಿಗಳ ವಿರುದ್ದ FIR…

  • Crime
  • June 20, 2025
  • No Comment
  • 240

ಮೈಸೂರು,ಜೂ20,Tv10 ಕನ್ನಡ

ವ್ಯಕ್ತಿಯೊಬ್ಬರನ್ನ ಅಕ್ರಮವಾಗಿ ಬಂಧಿಸಿ ಬಲವಂತವಾಗಿ ಚೆಕ್ ಗೆ ಸಹಿ ಮಾಡಿಸಿಕೊಂಡು ನಂತರ ಬೌನ್ಸ್ ಮಾಡಿದ ಆರೋಪದ ಹಿನ್ನಲೆ ಬೆಂಗಳೂರು ಮೂಲದ ನಾಲ್ವರು ಉದ್ಯಮಿಗಳ ವಿರುದ್ದ ಮೈಸೂರಿನ ಎನ್.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ನೊಂದ ವ್ಯಕ್ತಿ ಕುಟುಂಬ ನ್ಯಾಯಾಲಯದ ಮೊರೆ ಹೋಗಿ ಪ್ರಕರಣ ದಾಖಲಿಸಿದ್ದಾರೆ.ಬೆಂಗಳೂರಿನ ಉದ್ಯಮಿಗಳಾದ ಗೋವಿಂದಬಾಬು ಪೂಜಾರಿ,ಸುರೇಶ್ ಎನ್ ಪೂಜಾರಿ ಹಾಗೂ ಇವರ ಸಹಚರರಾದ ಸುಖೇಶ್ ಶೆಟ್ಟಿ ,ಪ್ರಜ್ವಲ್ ಎಂಬುವರ ವಿರುದ್ದ ಎಫ್.ಐ.ಆರ್.ದಾಖಲಾಗಿದೆ.ಎನ್.ಆರ್.ಮೊಹಲ್ಲಾ ನಿವಾಸಿಗಳಾದ ಸುನಿಲ್ ಎಂಬುವರ ಪತ್ನಿ ಕವಿತಾ ರವರು ಪ್ರಕರಣ ದಾಖಲಿಸಿದ್ದಾರೆ.

ಸುನಿಲ್ ರವರು ಗೋವಿಂದ್ ಬಾಬು ಪೂಜಾರಿ ಹಾಗೂ ಸುರೇಶ್ ಎನ್ ಪೂಜಾರಿ ಒಡೆತನದ CHEFTAK FOOD & HOSPITALITY SERVICES ಉದ್ಯಮದ ವ್ಯವಸ್ಥಾಪಕರಾಗಿ ಕೆಲಸ ಮಾಡುತ್ತಿದ್ದರು.ಇವರ ಮೇಲೆ ಹಣ ದುರುಪಯೋಗಪಡಿಸಿದ ಆರೋಪ ಮಾಡಿದ್ದ ಮುಖ್ಯಸ್ಥರು 2022 ರಲ್ಲಿ ಅಕ್ರಮವಾಗಿ ಬಂಧಿಸಿ ಬಲವಂತವಾಗಿ 5 ಚೆಕ್ ಗಳಿಗೆ ಸಹಿ ಮಾಡಿಸಿಕೊಂಡಿದ್ದರು.ಈ ಸಂಭಂಧ ಸುನಿಲ್ ಹಾಗೂ ಇವರ ಪತ್ನಿ ಕವಿತಾ ರವರು ಸಹಿ ಮಾಡಿದ ಚೆಕ್ ಗಳನ್ನ ವಾಪಸ್ ಕೊಡುವಂತೆ ದುಂಬಾಲು ಬಿದ್ದಿದ್ದಾರೆ.ಚೆಕ್ ಹಿಂದಿರುಗಿಸುವುದಾಗಿ ನಂಬಿಕೆ ಹುಟ್ಟಿಸುತ್ತಾ 5 ಚೆಕ್ ಗಳಿಂದ 21 ಲಕ್ಷ ರೂಗಳನ್ನ ನಮೂದಿಸಿ ಬೌನ್ಸ್ ಮಾಡಿಸಿ ವಾರೆಂಟ್ ತಂದಿದ್ದಾರೆ.ಈ ಬೆಳವಣಿಗೆಯಿಂದ ನೊಂದ ಸುನಿಲ್ ಹಾಗೂ ಪತ್ನಿ ಕವಿತಾ ನ್ಯಾಯಕ್ಕಾಗಿ ನ್ಯಾಯಾಲಯದ ಮೊರೆ ಹೋಗಿದ್ದಾರೆ.ಮೂರು ವರ್ಷ ವಾದ ಆಲಿಸಿದ ಮೈಸೂರು ನ್ಯಾಯಾಲಯ ಉದ್ಯಮಿಗಳ ವಿರುದ್ದ FIR ದಾಖಲಿಸುವಂತೆ ಆದೇಶ ನೀಡಿದೆ.ಇದೇ ವೇಳೆ ಕೇಸ್ ವಾಪಸ್ ಪಡೆಯುವಂತೆ ಧಂಕಿ ಹಾಕಿದ್ದಾರೆಂದು ಆರೋಪಿಸಲಾಗಿದೆ.ಸಧ್ಯ ಎನ್.ಆರ್.ಪೊಲೀಸ್ ಠಾಣೆಯಲ್ಲಿ ಉದ್ಯಮಿಗಳ ವಿರುದ್ದ ಪ್ರಕರಣ ದಾಖಲಾಗಿದೆ…

Spread the love

Related post

ಸರ್ಕಾರಿ ಜಾಗದಲ್ಲಿ ಅಕ್ರಮ ಹೋಟೆಲ್ ನಿರ್ಮಾಣ ಆರೋಪ – ಜಿಲ್ಲಾಧಿಕಾರಿ ಗಮನ ಹರಿಸಲು ರೈತರ ಮನವಿ

ಸರ್ಕಾರಿ ಜಾಗದಲ್ಲಿ ಅಕ್ರಮ ಹೋಟೆಲ್ ನಿರ್ಮಾಣ ಆರೋಪ – ಜಿಲ್ಲಾಧಿಕಾರಿ ಗಮನ…

ಸರ್ಕಾರಿ ಜಾಗದಲ್ಲಿ ಅಕ್ರಮ ಹೋಟೆಲ್ ನಿರ್ಮಾಣ ಆರೋಪ – ಜಿಲ್ಲಾಧಿಕಾರಿ ಗಮನ ಹರಿಸಲು ರೈತರ ಮನವಿ ಗುಂಡ್ಲುಪೇಟೆ ತಾಲೂಕಿನ ಹಿರಿಕಾಟಿ ಗೇಟ್ ಸಮೀಪದ ಸರ್ವೇ ನಂ.218/1ಕ್ಕೆ ಸೇರಿದ ಸರ್ಕಾರಿ…
ಮೈಸೂರು, ಏಪ್ರಿಲ್ 13: ವಿಶ್ವಪ್ರಸಿದ್ಧ KRS Brindavan Gardens ನಲ್ಲಿ ಡಿಜಿಟಲ್ ಯುಗದಲ್ಲಿಯೂ “ಕ್ಯಾಶ್ ಮಾತ್ರ” ನಿಯಮ ಮುಂದುವರಿಯುತ್ತಿರುವುದು ಪ್ರವಾಸಿಗರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ.

ಮೈಸೂರು, ಏಪ್ರಿಲ್ 13: ವಿಶ್ವಪ್ರಸಿದ್ಧ KRS Brindavan Gardens ನಲ್ಲಿ ಡಿಜಿಟಲ್…

ಮೈಸೂರು, ಏಪ್ರಿಲ್ 13: ವಿಶ್ವಪ್ರಸಿದ್ಧ KRS Brindavan Gardens ನಲ್ಲಿ ಡಿಜಿಟಲ್ ಯುಗದಲ್ಲಿಯೂ “ಕ್ಯಾಶ್ ಮಾತ್ರ” ನಿಯಮ ಮುಂದುವರಿಯುತ್ತಿರುವುದು ಪ್ರವಾಸಿಗರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ. ಪ್ರವೇಶ ಟಿಕೆಟ್ ಪಡೆಯಲು ಬರುವವರಿಗೆ…
ಯುವಕನ ಕಿಡ್ನಾಪ್…ಮಂಗಳಮುಖಿ ವೇಷ ಹಾಕಿಸಿ ಕಲೆಕ್ಷನ್…ಸೆಕ್ಸ್ ವರ್ಕ್ ಗೆಯೂಸ್…ಕರಾಳದಂಧೆಯ ಮತ್ತೊಂದು ಮುಖ ಬಯಲು…

ಯುವಕನ ಕಿಡ್ನಾಪ್…ಮಂಗಳಮುಖಿ ವೇಷ ಹಾಕಿಸಿ ಕಲೆಕ್ಷನ್…ಸೆಕ್ಸ್ ವರ್ಕ್ ಗೆಯೂಸ್…ಕರಾಳದಂಧೆಯ ಮತ್ತೊಂದು ಮುಖ…

ಯುವಕನ ಕಿಡ್ನಾಪ್…ಮಂಗಳಮುಖಿ ವೇಷ ಹಾಕಿಸಿ ಕಲೆಕ್ಷನ್…ಸೆಕ್ಸ್ ವರ್ಕ್ ಗೆಯೂಸ್…ಕರಾಳದಂಧೆಯ ಮತ್ತೊಂದು ಮುಖ ಬಯಲು… ನಂಜನಗೂಡು,ಏ12,Tv10 ಕನ್ನಡ ಯುವಕನೊಬ್ಬನನ್ನ ಕಿಡ್ನಾಪ್ ಮಾಡಿ ಬಲವಂತವಾಗಿ ಮಂಗಳಮುಖಿ ವೇಷ ಹಾಕಿಸಿ ಕಲೆಕ್ಷನ್ ಹಾಗೂ…

Leave a Reply

Your email address will not be published. Required fields are marked *