ವ್ಯಕ್ತಿಯನ್ನ ಅಕ್ರಮವಾಗಿ ಬಂಧಿಸಿ ಹಣ ವಸೂಲಿಗೆ ಪ್ರಯತ್ನ…ಬಲವಂತವಾಗಿ ಚೆಕ್ ಪಡೆದು ಬೌನ್ಸ್ ಮಾಡಿದ ಉದ್ಯಮಿಗಳ ವಿರುದ್ದ FIR…

ವ್ಯಕ್ತಿಯನ್ನ ಅಕ್ರಮವಾಗಿ ಬಂಧಿಸಿ ಹಣ ವಸೂಲಿಗೆ ಪ್ರಯತ್ನ…ಬಲವಂತವಾಗಿ ಚೆಕ್ ಪಡೆದು ಬೌನ್ಸ್ ಮಾಡಿದ ಉದ್ಯಮಿಗಳ ವಿರುದ್ದ FIR…

  • Crime
  • June 20, 2025
  • No Comment
  • 245

ಮೈಸೂರು,ಜೂ20,Tv10 ಕನ್ನಡ

ವ್ಯಕ್ತಿಯೊಬ್ಬರನ್ನ ಅಕ್ರಮವಾಗಿ ಬಂಧಿಸಿ ಬಲವಂತವಾಗಿ ಚೆಕ್ ಗೆ ಸಹಿ ಮಾಡಿಸಿಕೊಂಡು ನಂತರ ಬೌನ್ಸ್ ಮಾಡಿದ ಆರೋಪದ ಹಿನ್ನಲೆ ಬೆಂಗಳೂರು ಮೂಲದ ನಾಲ್ವರು ಉದ್ಯಮಿಗಳ ವಿರುದ್ದ ಮೈಸೂರಿನ ಎನ್.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ನೊಂದ ವ್ಯಕ್ತಿ ಕುಟುಂಬ ನ್ಯಾಯಾಲಯದ ಮೊರೆ ಹೋಗಿ ಪ್ರಕರಣ ದಾಖಲಿಸಿದ್ದಾರೆ.ಬೆಂಗಳೂರಿನ ಉದ್ಯಮಿಗಳಾದ ಗೋವಿಂದಬಾಬು ಪೂಜಾರಿ,ಸುರೇಶ್ ಎನ್ ಪೂಜಾರಿ ಹಾಗೂ ಇವರ ಸಹಚರರಾದ ಸುಖೇಶ್ ಶೆಟ್ಟಿ ,ಪ್ರಜ್ವಲ್ ಎಂಬುವರ ವಿರುದ್ದ ಎಫ್.ಐ.ಆರ್.ದಾಖಲಾಗಿದೆ.ಎನ್.ಆರ್.ಮೊಹಲ್ಲಾ ನಿವಾಸಿಗಳಾದ ಸುನಿಲ್ ಎಂಬುವರ ಪತ್ನಿ ಕವಿತಾ ರವರು ಪ್ರಕರಣ ದಾಖಲಿಸಿದ್ದಾರೆ.

ಸುನಿಲ್ ರವರು ಗೋವಿಂದ್ ಬಾಬು ಪೂಜಾರಿ ಹಾಗೂ ಸುರೇಶ್ ಎನ್ ಪೂಜಾರಿ ಒಡೆತನದ CHEFTAK FOOD & HOSPITALITY SERVICES ಉದ್ಯಮದ ವ್ಯವಸ್ಥಾಪಕರಾಗಿ ಕೆಲಸ ಮಾಡುತ್ತಿದ್ದರು.ಇವರ ಮೇಲೆ ಹಣ ದುರುಪಯೋಗಪಡಿಸಿದ ಆರೋಪ ಮಾಡಿದ್ದ ಮುಖ್ಯಸ್ಥರು 2022 ರಲ್ಲಿ ಅಕ್ರಮವಾಗಿ ಬಂಧಿಸಿ ಬಲವಂತವಾಗಿ 5 ಚೆಕ್ ಗಳಿಗೆ ಸಹಿ ಮಾಡಿಸಿಕೊಂಡಿದ್ದರು.ಈ ಸಂಭಂಧ ಸುನಿಲ್ ಹಾಗೂ ಇವರ ಪತ್ನಿ ಕವಿತಾ ರವರು ಸಹಿ ಮಾಡಿದ ಚೆಕ್ ಗಳನ್ನ ವಾಪಸ್ ಕೊಡುವಂತೆ ದುಂಬಾಲು ಬಿದ್ದಿದ್ದಾರೆ.ಚೆಕ್ ಹಿಂದಿರುಗಿಸುವುದಾಗಿ ನಂಬಿಕೆ ಹುಟ್ಟಿಸುತ್ತಾ 5 ಚೆಕ್ ಗಳಿಂದ 21 ಲಕ್ಷ ರೂಗಳನ್ನ ನಮೂದಿಸಿ ಬೌನ್ಸ್ ಮಾಡಿಸಿ ವಾರೆಂಟ್ ತಂದಿದ್ದಾರೆ.ಈ ಬೆಳವಣಿಗೆಯಿಂದ ನೊಂದ ಸುನಿಲ್ ಹಾಗೂ ಪತ್ನಿ ಕವಿತಾ ನ್ಯಾಯಕ್ಕಾಗಿ ನ್ಯಾಯಾಲಯದ ಮೊರೆ ಹೋಗಿದ್ದಾರೆ.ಮೂರು ವರ್ಷ ವಾದ ಆಲಿಸಿದ ಮೈಸೂರು ನ್ಯಾಯಾಲಯ ಉದ್ಯಮಿಗಳ ವಿರುದ್ದ FIR ದಾಖಲಿಸುವಂತೆ ಆದೇಶ ನೀಡಿದೆ.ಇದೇ ವೇಳೆ ಕೇಸ್ ವಾಪಸ್ ಪಡೆಯುವಂತೆ ಧಂಕಿ ಹಾಕಿದ್ದಾರೆಂದು ಆರೋಪಿಸಲಾಗಿದೆ.ಸಧ್ಯ ಎನ್.ಆರ್.ಪೊಲೀಸ್ ಠಾಣೆಯಲ್ಲಿ ಉದ್ಯಮಿಗಳ ವಿರುದ್ದ ಪ್ರಕರಣ ದಾಖಲಾಗಿದೆ…

Spread the love

Related post

ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು…

ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು…

ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು… ಎಚ್.ಡಿ.ಕೋಟೆ,ಜೂ4,Tv10 ಕನ್ನಡ ಸರ್ಕಾರಿ ಶಾಲಾ ದಾಖಲಾತಿಯಲ್ಲಿ ಬೋವಿ ಎಂಬುದನ್ನು ಬೋಯಿ ಎಂದು ತಿದ್ದಿದ ಆರೋಪದ ಹಿನ್ನಲೆ ಶಾಲೆ ಮುಖ್ಯಶಿಕ್ಷಕ ಅಮಾನತುಪಡಿಸಲಾಗಿದೆ.ಹೆಚ್.ಡಿ.ಕೋಟೆ…
ಚಿಕ್ಕಾಟಿ ಗ್ರಾಮದಲ್ಲಿ ಮಹಿಳೆಯರಿಗೆ ಮುಟ್ಟು ವೃತು ಚಕ್ರ ಜಾಗೃತಿ

ಚಿಕ್ಕಾಟಿ ಗ್ರಾಮದಲ್ಲಿ ಮಹಿಳೆಯರಿಗೆ ಮುಟ್ಟು ವೃತು ಚಕ್ರ ಜಾಗೃತಿ

ಚಿಕ್ಕಾಟಿ ಗ್ರಾಮದಲ್ಲಿ ಮಹಿಳೆಯರಿಗೆ ಮುಟ್ಟು ವೃತು ಚಕ್ರ ಜಾಗೃತಿ ಚಾಮರಾಜನಗರ ಜಿಲ್ಲೆಯ ಚಿಕ್ಕಾಟಿ ಗ್ರಾಮದಲ್ಲಿ ಗ್ರಾಮ ಪಂಚಾಯತ್, ಸಂಜೀವಿನಿ ಇಲಾಖೆ ಹಾಗೂ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ಮಹಿಳೆಯರ ಆರೋಗ್ಯ…
ವಿಜಯನಗರ ಪೊಲೀಸರ ಕಾರ್ಯಾಚರಣೆ…ನರ್ಸಿಂಗ್ ಸೇವೆ ನೀಡುವ ನೆಪದಲ್ಲಿ ಚಿನ್ನಾಭರಣ ಕಳುವು…ಆರೋಪಿ ಅಂದರ್…22.10 ಲಕ್ಷ ಮೌಲ್ಯದ ಪದಾರ್ಥ ವಶ…

ವಿಜಯನಗರ ಪೊಲೀಸರ ಕಾರ್ಯಾಚರಣೆ…ನರ್ಸಿಂಗ್ ಸೇವೆ ನೀಡುವ ನೆಪದಲ್ಲಿ ಚಿನ್ನಾಭರಣ ಕಳುವು…ಆರೋಪಿ ಅಂದರ್…22.10…

ವಿಜಯನಗರ ಪೊಲೀಸರ ಕಾರ್ಯಾಚರಣೆ…ನರ್ಸಿಂಗ್ ಸೇವೆ ನೀಡುವ ನೆಪದಲ್ಲಿ ಚಿನ್ನಾಭರಣ ಕಳುವು…ಆರೋಪಿ ಅಂದರ್…22.10 ಲಕ್ಷ ಮೌಲ್ಯದ ಪದಾರ್ಥ ವಶ… ಮೈಸೂರು,ಮೇ27,Tv10 ಕನ್ನಡ ವೃದ್ದೆ ಮನೆಯಲ್ಲಿ ನರ್ಸಿಂಗ್ ಸೇವೆಗೆ ಸೇರಿಕೊಂಡ ಐನಾತಿ…

Leave a Reply

Your email address will not be published. Required fields are marked *