ನಿರ್ಲಕ್ಷ್ಯಕ್ಕೆ ಒಳಗಾದ ಕಳಲೆ ಲಕ್ಷ್ಮಿಕಾಂತ ದೇವಸ್ಥಾನ…ಶತಮಾನಗಳ ಇತಿಹಾಸವಿರುವ ದೇವಾಲಯಕ್ಕೆ ಬೇಕಿದೆ ಕಾಯಕಲ್ಪ…

ನಿರ್ಲಕ್ಷ್ಯಕ್ಕೆ ಒಳಗಾದ ಕಳಲೆ ಲಕ್ಷ್ಮಿಕಾಂತ ದೇವಸ್ಥಾನ…ಶತಮಾನಗಳ ಇತಿಹಾಸವಿರುವ ದೇವಾಲಯಕ್ಕೆ ಬೇಕಿದೆ ಕಾಯಕಲ್ಪ…

ನಂಜನಗೂಡು,ಜೂ23,Tv10 ಕನ್ನಡ

ಶಿಥಿಲಗೊಂಡ ದೇವಾಲಯದ ಕಟ್ಟಡ,ಗೋಪುರಗಳ ಮೇಲೆ ಬೆಳೆದು ನಿಂತ ಸಸ್ಯಗಳು,ಬಿರುಕು ಬಿಟ್ಟ ಕಟ್ಟಡ,ಭಿನ್ನವಾಗಿರುವ ದೇವರ ಮೂರ್ತಿಗಳು,ಮುರಿದು ಮೂಲೆ ಸೇರಿರುವ ರಥದ ಚಕ್ರಗಳು,ಮಣ್ಣು ಹಿಡಿದ ರಥ ಎಳೆಯವ ಹಗ್ಗಗಳು,ಭಕ್ತರಿಗೆ ರೋಗರುಜಿನ ಹರಡಲು ಸಜ್ಜಾಗಿರುವ ಕಸದ ರಾಶಿ ಹೀಗೆ ಒಂದಲ್ಲ ಹತ್ತಾರು ಸಮಸ್ಯೆಗಳನ್ನ ಹೊತ್ತು ನಿಂತಿದೆ ನಂಜನಗೂಡು ತಾಲೂಕಿನಲ್ಲಿರುವ ಕಳಲೆ ಗ್ರಾಮದ ಲಕ್ಷ್ಮಿಕಾಂತಸ್ವಾಮಿ ದೇವಾಲಯ

ಶತಮಾನಗಳ ಇತಿಹಾಸವಿರುವ ದೇವಾಲಯ ಅಭಿವೃದ್ದಿಯನ್ನೇ ಕಂಡಿಲ್ಲ.ಮುಜರಾಯಿ ಇಲಾಖೆಗೆ ಸೇರಿದ ದೇವಾಲಯದ ಆಡಳಿತದ ಉಸ್ತುವಾರಿ ನಂಜನಗೂಡಿನ ಶ್ರೀಕಂಠೇಶ್ವರನ ದೇವಾಲಯದ ಆಡಳಿತ ಮಂಡಳಿಗೆ ಸೇರಿದೆ.ನಂಜನಗೂಡು ದೇವಾಲಯಕ್ಕೆ ಪ್ರತಿತಿಂಗಳು ಕೋಟಿ ರೂಪಾಯಿ ಆದಾಯವಿದೆ.ಹೀಗಿದ್ದರೂ ಲಕ್ಷ್ಮಿಕಾಂತಸ್ವಾಮಿ ದೇವಾಲಯದ ಅಭಿವೃದ್ದಿ ಶೂನ್ಯ.ಈ

ದೇವಾಲಯಕ್ಕೆ ಬಣ್ಣ ಹೊಡೆದು ದಶಕಗಳೇ ಉರುಳಿ ಹೋಗಿದೆ.ಸ್ವಚ್ಛತೆ ಮರೀಚಿಕೆಯಾಗಿದೆ.ಈ ದೇವಾಲಯಕ್ಕೂ ಸಹ ಭಕ್ತರು ಹೆಚ್ಚಿನ ಸಂಖ್ಯೆಯಲ್ಲೇ ಬರುತ್ತಾರೆ.ಹುಂಡಿಗೆ ಸಾಕಷ್ಟು ಹಣವೂ ಸೇರುತ್ತದೆ.ಆದ್ರೆ ಅಭಿವೃದ್ದಿ ಮಾತ್ರ ಕಂಡಿಲ್ಲ.

ಗಂಗಾ ಹೊಯ್ಸಳರ ಕಾಲದಲ್ಲಿ ದೇವಸ್ಥಾನ ನಿರ್ಮಿಸಲಾಗಿದೆ ಎಂದು ಪುರಾತತ್ವ ಇಲಾಖೆ ಹೇಳುತ್ತದೆ.ಪ್ರತಿ ವರ್ಷ ದಸರಾ ವೇಳೆ ಈ ದೇವಾಲಯದಿಂದ ಅರಮನೆಯಲ್ಲಿ ನಡೆಯುವ ಧಾರ್ಮಿಕ ಕಾರ್ಯಕ್ರಮದ ವೇಳೆ ತೀರ್ಥ ಪ್ರಸಾದ ತಲುಪುತ್ತದೆ.ಶತಮಾನಗಳ ಇತಿಹಾಸವಿರುವ ಈ ದೇವಾಲಯಕ್ಕೆ ಕಾಯಕಲ್ಪದ

ಅಗತ್ಯವಿದೆ.ದೇವಾಲಯ ದಿನೇ ದಿನೇ ಅಳಿವಿನ ಅಂಚಿಗೆ ತಲುಪುತ್ತಿದ್ದರೂ ಮುಜರಾಯಿ ಇಲಾಖೆ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆ.ಅವಸಾನದ ಅಂಚಿಗೆ ತಲುಪಿ ಭಕ್ತರಿಂದ ಕಡೆಗಣಿಸುವ ಮುನ್ನ ದೇವಾಲಯದ ಸರ್ವತೋಮುಖ ಅಭಿವೃದ್ದಿಗೆ ಸರ್ಕಾರ ಮುಂದಾಗಲಿ…

Spread the love

Related post

ಸರ್ಕಾರಿ ಜಾಗದಲ್ಲಿ ಅಕ್ರಮ ಹೋಟೆಲ್ ನಿರ್ಮಾಣ ಆರೋಪ – ಜಿಲ್ಲಾಧಿಕಾರಿ ಗಮನ ಹರಿಸಲು ರೈತರ ಮನವಿ

ಸರ್ಕಾರಿ ಜಾಗದಲ್ಲಿ ಅಕ್ರಮ ಹೋಟೆಲ್ ನಿರ್ಮಾಣ ಆರೋಪ – ಜಿಲ್ಲಾಧಿಕಾರಿ ಗಮನ…

ಸರ್ಕಾರಿ ಜಾಗದಲ್ಲಿ ಅಕ್ರಮ ಹೋಟೆಲ್ ನಿರ್ಮಾಣ ಆರೋಪ – ಜಿಲ್ಲಾಧಿಕಾರಿ ಗಮನ ಹರಿಸಲು ರೈತರ ಮನವಿ ಗುಂಡ್ಲುಪೇಟೆ ತಾಲೂಕಿನ ಹಿರಿಕಾಟಿ ಗೇಟ್ ಸಮೀಪದ ಸರ್ವೇ ನಂ.218/1ಕ್ಕೆ ಸೇರಿದ ಸರ್ಕಾರಿ…
ಮೈಸೂರು, ಏಪ್ರಿಲ್ 13: ವಿಶ್ವಪ್ರಸಿದ್ಧ KRS Brindavan Gardens ನಲ್ಲಿ ಡಿಜಿಟಲ್ ಯುಗದಲ್ಲಿಯೂ “ಕ್ಯಾಶ್ ಮಾತ್ರ” ನಿಯಮ ಮುಂದುವರಿಯುತ್ತಿರುವುದು ಪ್ರವಾಸಿಗರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ.

ಮೈಸೂರು, ಏಪ್ರಿಲ್ 13: ವಿಶ್ವಪ್ರಸಿದ್ಧ KRS Brindavan Gardens ನಲ್ಲಿ ಡಿಜಿಟಲ್…

ಮೈಸೂರು, ಏಪ್ರಿಲ್ 13: ವಿಶ್ವಪ್ರಸಿದ್ಧ KRS Brindavan Gardens ನಲ್ಲಿ ಡಿಜಿಟಲ್ ಯುಗದಲ್ಲಿಯೂ “ಕ್ಯಾಶ್ ಮಾತ್ರ” ನಿಯಮ ಮುಂದುವರಿಯುತ್ತಿರುವುದು ಪ್ರವಾಸಿಗರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ. ಪ್ರವೇಶ ಟಿಕೆಟ್ ಪಡೆಯಲು ಬರುವವರಿಗೆ…
ಯುವಕನ ಕಿಡ್ನಾಪ್…ಮಂಗಳಮುಖಿ ವೇಷ ಹಾಕಿಸಿ ಕಲೆಕ್ಷನ್…ಸೆಕ್ಸ್ ವರ್ಕ್ ಗೆಯೂಸ್…ಕರಾಳದಂಧೆಯ ಮತ್ತೊಂದು ಮುಖ ಬಯಲು…

ಯುವಕನ ಕಿಡ್ನಾಪ್…ಮಂಗಳಮುಖಿ ವೇಷ ಹಾಕಿಸಿ ಕಲೆಕ್ಷನ್…ಸೆಕ್ಸ್ ವರ್ಕ್ ಗೆಯೂಸ್…ಕರಾಳದಂಧೆಯ ಮತ್ತೊಂದು ಮುಖ…

ಯುವಕನ ಕಿಡ್ನಾಪ್…ಮಂಗಳಮುಖಿ ವೇಷ ಹಾಕಿಸಿ ಕಲೆಕ್ಷನ್…ಸೆಕ್ಸ್ ವರ್ಕ್ ಗೆಯೂಸ್…ಕರಾಳದಂಧೆಯ ಮತ್ತೊಂದು ಮುಖ ಬಯಲು… ನಂಜನಗೂಡು,ಏ12,Tv10 ಕನ್ನಡ ಯುವಕನೊಬ್ಬನನ್ನ ಕಿಡ್ನಾಪ್ ಮಾಡಿ ಬಲವಂತವಾಗಿ ಮಂಗಳಮುಖಿ ವೇಷ ಹಾಕಿಸಿ ಕಲೆಕ್ಷನ್ ಹಾಗೂ…

Leave a Reply

Your email address will not be published. Required fields are marked *