ನಿರ್ಲಕ್ಷ್ಯಕ್ಕೆ ಒಳಗಾದ ಕಳಲೆ ಲಕ್ಷ್ಮಿಕಾಂತ ದೇವಸ್ಥಾನ…ಶತಮಾನಗಳ ಇತಿಹಾಸವಿರುವ ದೇವಾಲಯಕ್ಕೆ ಬೇಕಿದೆ ಕಾಯಕಲ್ಪ…

ನಿರ್ಲಕ್ಷ್ಯಕ್ಕೆ ಒಳಗಾದ ಕಳಲೆ ಲಕ್ಷ್ಮಿಕಾಂತ ದೇವಸ್ಥಾನ…ಶತಮಾನಗಳ ಇತಿಹಾಸವಿರುವ ದೇವಾಲಯಕ್ಕೆ ಬೇಕಿದೆ ಕಾಯಕಲ್ಪ…

ನಂಜನಗೂಡು,ಜೂ23,Tv10 ಕನ್ನಡ

ಶಿಥಿಲಗೊಂಡ ದೇವಾಲಯದ ಕಟ್ಟಡ,ಗೋಪುರಗಳ ಮೇಲೆ ಬೆಳೆದು ನಿಂತ ಸಸ್ಯಗಳು,ಬಿರುಕು ಬಿಟ್ಟ ಕಟ್ಟಡ,ಭಿನ್ನವಾಗಿರುವ ದೇವರ ಮೂರ್ತಿಗಳು,ಮುರಿದು ಮೂಲೆ ಸೇರಿರುವ ರಥದ ಚಕ್ರಗಳು,ಮಣ್ಣು ಹಿಡಿದ ರಥ ಎಳೆಯವ ಹಗ್ಗಗಳು,ಭಕ್ತರಿಗೆ ರೋಗರುಜಿನ ಹರಡಲು ಸಜ್ಜಾಗಿರುವ ಕಸದ ರಾಶಿ ಹೀಗೆ ಒಂದಲ್ಲ ಹತ್ತಾರು ಸಮಸ್ಯೆಗಳನ್ನ ಹೊತ್ತು ನಿಂತಿದೆ ನಂಜನಗೂಡು ತಾಲೂಕಿನಲ್ಲಿರುವ ಕಳಲೆ ಗ್ರಾಮದ ಲಕ್ಷ್ಮಿಕಾಂತಸ್ವಾಮಿ ದೇವಾಲಯ

ಶತಮಾನಗಳ ಇತಿಹಾಸವಿರುವ ದೇವಾಲಯ ಅಭಿವೃದ್ದಿಯನ್ನೇ ಕಂಡಿಲ್ಲ.ಮುಜರಾಯಿ ಇಲಾಖೆಗೆ ಸೇರಿದ ದೇವಾಲಯದ ಆಡಳಿತದ ಉಸ್ತುವಾರಿ ನಂಜನಗೂಡಿನ ಶ್ರೀಕಂಠೇಶ್ವರನ ದೇವಾಲಯದ ಆಡಳಿತ ಮಂಡಳಿಗೆ ಸೇರಿದೆ.ನಂಜನಗೂಡು ದೇವಾಲಯಕ್ಕೆ ಪ್ರತಿತಿಂಗಳು ಕೋಟಿ ರೂಪಾಯಿ ಆದಾಯವಿದೆ.ಹೀಗಿದ್ದರೂ ಲಕ್ಷ್ಮಿಕಾಂತಸ್ವಾಮಿ ದೇವಾಲಯದ ಅಭಿವೃದ್ದಿ ಶೂನ್ಯ.ಈ

ದೇವಾಲಯಕ್ಕೆ ಬಣ್ಣ ಹೊಡೆದು ದಶಕಗಳೇ ಉರುಳಿ ಹೋಗಿದೆ.ಸ್ವಚ್ಛತೆ ಮರೀಚಿಕೆಯಾಗಿದೆ.ಈ ದೇವಾಲಯಕ್ಕೂ ಸಹ ಭಕ್ತರು ಹೆಚ್ಚಿನ ಸಂಖ್ಯೆಯಲ್ಲೇ ಬರುತ್ತಾರೆ.ಹುಂಡಿಗೆ ಸಾಕಷ್ಟು ಹಣವೂ ಸೇರುತ್ತದೆ.ಆದ್ರೆ ಅಭಿವೃದ್ದಿ ಮಾತ್ರ ಕಂಡಿಲ್ಲ.

ಗಂಗಾ ಹೊಯ್ಸಳರ ಕಾಲದಲ್ಲಿ ದೇವಸ್ಥಾನ ನಿರ್ಮಿಸಲಾಗಿದೆ ಎಂದು ಪುರಾತತ್ವ ಇಲಾಖೆ ಹೇಳುತ್ತದೆ.ಪ್ರತಿ ವರ್ಷ ದಸರಾ ವೇಳೆ ಈ ದೇವಾಲಯದಿಂದ ಅರಮನೆಯಲ್ಲಿ ನಡೆಯುವ ಧಾರ್ಮಿಕ ಕಾರ್ಯಕ್ರಮದ ವೇಳೆ ತೀರ್ಥ ಪ್ರಸಾದ ತಲುಪುತ್ತದೆ.ಶತಮಾನಗಳ ಇತಿಹಾಸವಿರುವ ಈ ದೇವಾಲಯಕ್ಕೆ ಕಾಯಕಲ್ಪದ

ಅಗತ್ಯವಿದೆ.ದೇವಾಲಯ ದಿನೇ ದಿನೇ ಅಳಿವಿನ ಅಂಚಿಗೆ ತಲುಪುತ್ತಿದ್ದರೂ ಮುಜರಾಯಿ ಇಲಾಖೆ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆ.ಅವಸಾನದ ಅಂಚಿಗೆ ತಲುಪಿ ಭಕ್ತರಿಂದ ಕಡೆಗಣಿಸುವ ಮುನ್ನ ದೇವಾಲಯದ ಸರ್ವತೋಮುಖ ಅಭಿವೃದ್ದಿಗೆ ಸರ್ಕಾರ ಮುಂದಾಗಲಿ…

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *