ಯುವತಿ ಫೋಟೋಗಳನ್ನ ಸಾಮಾಜಿಕ ಜಾಲತಾಣದಲ್ಲಿ ಹಾಕುವ ಬೆದರಿಕೆ…ನಾಲ್ವರ ವಿರುದ್ದ FIR ದಾಖಲು…

ಯುವತಿ ಫೋಟೋಗಳನ್ನ ಸಾಮಾಜಿಕ ಜಾಲತಾಣದಲ್ಲಿ ಹಾಕುವ ಬೆದರಿಕೆ…ನಾಲ್ವರ ವಿರುದ್ದ FIR ದಾಖಲು…

ಮೈಸೂರು,ಜು24,Tv10 ಕನ್ನಡ

ಮದುವೆ ಆಗುವುದಾಗಿ ನಂಬಿಸಿ ಚೆಕ್ ಗಳನ್ನ ಪಡೆದು ಬೌನ್ಸ್ ಮಾಡಿ ಫೋಟೋಗಳನ್ನ ಸಾಮಾಜಿಕ ಜಾಲತಾಣದಲ್ಲಿ ಹಾಕುವುದಾಗಿ ಬೆದರಿಸಿ ಟಾರ್ಚರ್ ನೀಡಿದ ಆರೋಪದ ಮೇಲೆ ಮೈಸೂರು ಉದಯಗಿರಿ ಪೊಲೀಸ್ ಠಾಣೆಯಲ್ಲಿ ನಾಲ್ವರ ವಿರುದ್ದ ನೊಂದ ಯುವತಿ ಪ್ರಕರಣ ದಾಖಲಿಸಿದ್ದಾಳೆ.ತುಮಕೂರು ಮೂಲದ ಸದಾನಂದಗೌಡ,ಇವರ ಅಕ್ಕ ರಾಜಮ್ಮ,ಭಾವ ಹನುಮಂತಪ್ಪ ಹಾಗೂ ದಯಾನಂದ್ ಎಂಬುವರ ವಿರುದ್ದ ಪ್ರಕರಣ ದಾಖಲಾಗಿದೆ.

9 ವರ್ಷಗಳ ಹಿಂದೆ ಯುವತಿಗೆ ಸದಾನಂದ್ ಪರಿಚಯವಾಗಿದೆ.ಸ್ನೇಹ ಪ್ರೀತಿಗೆ ತಿರುಗಿ ಮದುವೆ ಪ್ರಸ್ತಾಪವಾಗಿದೆ.ಬೈಕ್ ಕೊಡಿಸುವ ನೆಪದಲ್ಲಿ ಸದಾನಂದ್ ಯುವತಿಯಿಂದ ಚೆಕ್ ಗಳನ್ನ ಪಡೆದಿದ್ದಾನೆ.ಬೈಕ್ ಹಣ ಹಿಂದಿರುಗಿಸಿದರೂ ಚೆಕ್ ಗಳನ್ನ ಹಿಂದಿರುಗಿಸಿಲ್ಲ.ನಂತರ ಮದುವೆ ಆಗುವುದಾಗಿ ನಂಬಿಸಿದ್ದಾನೆ.ಇಬ್ಬರೂ ಹಲವಾರು ಫೋಟೋಗಳನ್ನ ತೆಗೆಸಿಕೊಂಡಿದ್ದಾರೆ.ಎರಡು ವರ್ಷಗಳ ನಂತರ ಜಾತಿ ನೆಪ ಒಡ್ಡಿ ಮದುವೆ ನಿರಾಕರಿಸಿದ್ದಾನೆ.ಇದರಿಂದಾಗಿ ಯುವತಿ ಅಂತರ ಕಾಯ್ದುಕೊಂಡಿದ್ದಾಳೆ.ಕೆಲಕಾಲ ಸುಮ್ಮನಿದ್ದ ಸದಾನಂದ್ ಮತ್ತೆ ಸಂಪರ್ಕಕ್ಕೆ ಬಂದು ಮನೆಯಿಂದ ಮತ್ತೆ ಚೆಕ್ ಗಳನ್ನ ಕದ್ದು ಸ್ನೇಹಿತನ ಹೆಸರಲ್ಲಿ 8,50,000/- ಕ್ಕೆ ಬೌನ್ಸ್ ಮಾಡಿಸಿದ್ದಾನೆ.ಈ ವಿಚಾರದಲ್ಲಿ ಇಬ್ಬರ ನಡುವೆ ಗಲಾಟೆ ಆಗಿದೆ.ಮನೆಗೆ ಪ್ರವೇಶಿಸಿ ಅಸಭ್ಯವಾಗಿ ವರ್ತಿಸಿ ಅತ್ಯಾಚಾರಕ್ಕೆ ಯತ್ನಿಸಿದನೆಂದು ಆರೋಪಿಸುವ ನೊಂದ ಯುವತಿ ಮಾನಸಿಕವಾಗಿ ಹಾಗೂ ದೈಹಿಕವಾಗಿ ಹಿಂಸೆ ಅನುಭವಿಸಿದ್ದಾಳೆ.ಬೇರೊಬ್ಬನ ಜೊತೆ ವಿವಾಹ ನಿಶ್ಚಯವಾದಾಗ ಹುಡುಗನ ಮನೆಯವರಿಗೆ ಫೋಟೋಗಳನ್ನ ತೋರಿಸಿ ಮದುವೆ ಕಟ್ ಮಾಡಿದ್ದಲ್ಲದೆ ಸಾಮಾಜಿಕ ಜಾಲತಾಣದಲ್ಲಿ ಫೋಟೋಗಳನ್ನ ಹರಿದುಬಿಡುವುದಾಗಿ ಬೆದರಿಕೆ ಹಾಕಿದ್ದಾನೆ.ಸದಾನಂದ ಗೌಡ ಹಾಗೂ ಈತನಿಗೆ ಕುಮ್ಮಕ್ಕು ನೀಡುತ್ತಿರುವವರ ವಿರುದ್ದ ನೊಂದ ಯುವತಿ ಪ್ರಕರಣ ದಾಖಲಿಸಿದ್ದಾಳೆ…

Spread the love

Related post

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…
ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಕೊಳ್ಳೇಗಾಲ,ಜೂ26,Tv10 ಕನ್ನಡ ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ಮೂರು ಮರಿಗಳು ಅಸಹಜ ಸಾವಿಗೀಡಾಗಿರುವ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ…
ಪೀಡಿಯಾಟ್ರಿಕ್ ನ್ಯೂರೋಲಾಜಿಸ್ಟ್ ಡಾ. ಅನುಷಾ ರಾಜ್ ಗೆ ಮಿಸ್. ಮೆಡಿಕ್ವೀನ್ 2025 ಕಿರೀಟ…

ಪೀಡಿಯಾಟ್ರಿಕ್ ನ್ಯೂರೋಲಾಜಿಸ್ಟ್ ಡಾ. ಅನುಷಾ ರಾಜ್ ಗೆ ಮಿಸ್. ಮೆಡಿಕ್ವೀನ್ 2025…

ಮೈಸೂರು,ಜೂ26,Tv10 ಕನ್ನಡ ಮೈಸೂರಿನ ಪೀಡಿಯಾಟ್ರಿಕ್ ನ್ಯೂರಾಲಜಿಸ್ಟ್ ಡಾ.ಅನೂಷಾ ರಾಜ್ ರವರು ಮಿಸ್ ಮೆಡಿಕ್ವೀನ್ 2025 ಸ್ಪರ್ಧೆಯಲ್ಲಿ ವಿಜಯಿಯಾಗಿ ಹೊರಹೊಮ್ಮಿದ್ದಾರೆ. ಜೂನ್ 22 ರಂದು ಮಹಾರಾಷ್ಟ್ರದ ಪುಣೆಯಲ್ಲಿ ನಡೆದ ಸ್ಪರ್ಧೆಯಲ್ಲಿ…

Leave a Reply

Your email address will not be published. Required fields are marked *