ಯುವತಿ ಫೋಟೋಗಳನ್ನ ಸಾಮಾಜಿಕ ಜಾಲತಾಣದಲ್ಲಿ ಹಾಕುವ ಬೆದರಿಕೆ…ನಾಲ್ವರ ವಿರುದ್ದ FIR ದಾಖಲು…

ಯುವತಿ ಫೋಟೋಗಳನ್ನ ಸಾಮಾಜಿಕ ಜಾಲತಾಣದಲ್ಲಿ ಹಾಕುವ ಬೆದರಿಕೆ…ನಾಲ್ವರ ವಿರುದ್ದ FIR ದಾಖಲು…

ಮೈಸೂರು,ಜು24,Tv10 ಕನ್ನಡ

ಮದುವೆ ಆಗುವುದಾಗಿ ನಂಬಿಸಿ ಚೆಕ್ ಗಳನ್ನ ಪಡೆದು ಬೌನ್ಸ್ ಮಾಡಿ ಫೋಟೋಗಳನ್ನ ಸಾಮಾಜಿಕ ಜಾಲತಾಣದಲ್ಲಿ ಹಾಕುವುದಾಗಿ ಬೆದರಿಸಿ ಟಾರ್ಚರ್ ನೀಡಿದ ಆರೋಪದ ಮೇಲೆ ಮೈಸೂರು ಉದಯಗಿರಿ ಪೊಲೀಸ್ ಠಾಣೆಯಲ್ಲಿ ನಾಲ್ವರ ವಿರುದ್ದ ನೊಂದ ಯುವತಿ ಪ್ರಕರಣ ದಾಖಲಿಸಿದ್ದಾಳೆ.ತುಮಕೂರು ಮೂಲದ ಸದಾನಂದಗೌಡ,ಇವರ ಅಕ್ಕ ರಾಜಮ್ಮ,ಭಾವ ಹನುಮಂತಪ್ಪ ಹಾಗೂ ದಯಾನಂದ್ ಎಂಬುವರ ವಿರುದ್ದ ಪ್ರಕರಣ ದಾಖಲಾಗಿದೆ.

9 ವರ್ಷಗಳ ಹಿಂದೆ ಯುವತಿಗೆ ಸದಾನಂದ್ ಪರಿಚಯವಾಗಿದೆ.ಸ್ನೇಹ ಪ್ರೀತಿಗೆ ತಿರುಗಿ ಮದುವೆ ಪ್ರಸ್ತಾಪವಾಗಿದೆ.ಬೈಕ್ ಕೊಡಿಸುವ ನೆಪದಲ್ಲಿ ಸದಾನಂದ್ ಯುವತಿಯಿಂದ ಚೆಕ್ ಗಳನ್ನ ಪಡೆದಿದ್ದಾನೆ.ಬೈಕ್ ಹಣ ಹಿಂದಿರುಗಿಸಿದರೂ ಚೆಕ್ ಗಳನ್ನ ಹಿಂದಿರುಗಿಸಿಲ್ಲ.ನಂತರ ಮದುವೆ ಆಗುವುದಾಗಿ ನಂಬಿಸಿದ್ದಾನೆ.ಇಬ್ಬರೂ ಹಲವಾರು ಫೋಟೋಗಳನ್ನ ತೆಗೆಸಿಕೊಂಡಿದ್ದಾರೆ.ಎರಡು ವರ್ಷಗಳ ನಂತರ ಜಾತಿ ನೆಪ ಒಡ್ಡಿ ಮದುವೆ ನಿರಾಕರಿಸಿದ್ದಾನೆ.ಇದರಿಂದಾಗಿ ಯುವತಿ ಅಂತರ ಕಾಯ್ದುಕೊಂಡಿದ್ದಾಳೆ.ಕೆಲಕಾಲ ಸುಮ್ಮನಿದ್ದ ಸದಾನಂದ್ ಮತ್ತೆ ಸಂಪರ್ಕಕ್ಕೆ ಬಂದು ಮನೆಯಿಂದ ಮತ್ತೆ ಚೆಕ್ ಗಳನ್ನ ಕದ್ದು ಸ್ನೇಹಿತನ ಹೆಸರಲ್ಲಿ 8,50,000/- ಕ್ಕೆ ಬೌನ್ಸ್ ಮಾಡಿಸಿದ್ದಾನೆ.ಈ ವಿಚಾರದಲ್ಲಿ ಇಬ್ಬರ ನಡುವೆ ಗಲಾಟೆ ಆಗಿದೆ.ಮನೆಗೆ ಪ್ರವೇಶಿಸಿ ಅಸಭ್ಯವಾಗಿ ವರ್ತಿಸಿ ಅತ್ಯಾಚಾರಕ್ಕೆ ಯತ್ನಿಸಿದನೆಂದು ಆರೋಪಿಸುವ ನೊಂದ ಯುವತಿ ಮಾನಸಿಕವಾಗಿ ಹಾಗೂ ದೈಹಿಕವಾಗಿ ಹಿಂಸೆ ಅನುಭವಿಸಿದ್ದಾಳೆ.ಬೇರೊಬ್ಬನ ಜೊತೆ ವಿವಾಹ ನಿಶ್ಚಯವಾದಾಗ ಹುಡುಗನ ಮನೆಯವರಿಗೆ ಫೋಟೋಗಳನ್ನ ತೋರಿಸಿ ಮದುವೆ ಕಟ್ ಮಾಡಿದ್ದಲ್ಲದೆ ಸಾಮಾಜಿಕ ಜಾಲತಾಣದಲ್ಲಿ ಫೋಟೋಗಳನ್ನ ಹರಿದುಬಿಡುವುದಾಗಿ ಬೆದರಿಕೆ ಹಾಕಿದ್ದಾನೆ.ಸದಾನಂದ ಗೌಡ ಹಾಗೂ ಈತನಿಗೆ ಕುಮ್ಮಕ್ಕು ನೀಡುತ್ತಿರುವವರ ವಿರುದ್ದ ನೊಂದ ಯುವತಿ ಪ್ರಕರಣ ದಾಖಲಿಸಿದ್ದಾಳೆ…

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *