ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಹುಣಸೂರು,ಜೂ26,Tv10 ಕನ್ನಡ

ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನ
ಹುಣಸೂರು ಪೊಲೀಸರು ಬಂಧಿಸಿದ್ದಾರೆ. ಜಾನುವಾರು ಸಾಗಿಸುವ ವಾಹನಗಳ ತಡೆದು ಹಣ ವಸೂಲಿ ದಂಧೆಗಿಳಿದಿದ್ದ ಮಹಿಳೆ ಸೇರಿದಂತೆ ಏಳು ಮಂದಿ ತಂಡವನ್ನ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿ, ಎರಡು ಕಾರುಗಳನ್ನು ವಶಕ್ಕೆ ಪಡೆದಿದ್ದಾರೆ. ತಾಲೂಕಿನ ಕಟ್ಟೆಮಳಲವಾಡಿಯಲ್ಲಿ
ಹಿಂದೂ ರಾಷ್ಟ್ರೀಯ ರಕ್ಷಣಾ ವೇದಿಕೆ ಅಧ್ಯಕ್ಷ ಬೆಂಗಳೂರು ಉತ್ತರಹಳ್ಳಿಯ ರಾಮಕೃಷ್ಣ ಮತ್ತು ಬೆಂಗಳೂರಿನ ವಿವಿಧ ಬಡಾವಣೆ ನಿವಾಸಿಗಳಾದ ಶಿವಕುಮಾರ್, ಲಿಂಗರಾಜು, ಕಿಶೋರ್, ಪ್ರೇಮಕುಮಾರ್, ಪುಷ್ಪಲತಾ ಹಾಗೂ ಕೆ.ಆರ್.ಪೇಟೆ ತಾಲೂಕಿನ ಮಾರಗೌಡನಹಳ್ಳಿಯ ಸ್ವಾಮಿ ಬಂಧಿತರು.
ತಾಲೂಕಿನ ರತ್ನಪುರಿಯ ಕಿರಣ್ ಬುಧವಾರದಂದು ಸಾಲಿಗ್ರಾಮ ತಾಲೂಕಿನ ಚುಂಚನಕಟ್ಟೆ ಸಂತೆಯಲ್ಲಿ ಮೂರು ಜಾನುವಾರುಗಳನ್ನು ಖರೀದಿಸಿ ವಾಹನದಲ್ಲಿ ಸಾಗಿಸುತ್ತಿದ್ದ ವೇಳೆ ಕಾರಿನಲ್ಲಿ ಹಿಂಬಾಲಿಸಿಕೊಂಡು ಕಟ್ಟೆಮಳಲವಾಡಿ ಬಳಿ ಅಡ್ಡಗಟ್ಟಿ ಕಸಾಯಿಖಾನೆಗೆ ಜಾನುವಾರು ಸಾಗಿಸುತ್ತಿದ್ದೀರಾ ಎಂದು ಚಾಲಕ ಕಿರಣ್‌ನನ್ನು ಬೆದರಿಸಿ 25ಸಾವಿರ ರೂ ಹಣಕ್ಕಾಗಿ ಬೇಡಿಕೆ ಇಟ್ಟಿದ್ದಾರೆ. ನಾನು ವ್ಯವಸಾಯಕ್ಕಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದೇನೆಂದು ಹೇಳಿದರೂ ಕೇಳದೆ ಕೊನೆಗೆ 20 ಸಾವಿರ ಕೊಟ್ಟರೆ ಬಿಡುತ್ತೇವೆ. ಇಲ್ಲದಿದ್ದರೆ ಪೊಲೀಸರಿಗೆ ಮಾಹಿತಿ ನೀಡುವುದಾಗಿ ಬೆದರಿಕೆ ಹಾಕಿದ್ದಾರೆ.
ಈ ವೇಳೆ ಏನು ನಡೆಯುತ್ತಿದೆ ಎಂದು ರಸ್ತೆಯಲ್ಲಿ ಹೋಗುತ್ತಿದ್ದ ಜನರು ಜಮಾಯಿಸಿದರು. ವಿಷಯ ತಿಳಿದು ಜನರು ಆರೋಪಿಗಳ ವಿರುದ್ದ ತಿರುಗಿ ಬಿದ್ದು ತರಾಟೆ ತೆಗೆದುಕೊಂಡು ಗೂಸಾ ನೀಡಿ 112 ಗೆ ಮಾಹಿತಿ ನೀಡಿದ್ದಾರೆ.ಸ್ಥಳಕ್ಕಾಗಮಿಸಿದ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದಾಗ ಇವರ ಕುತಂತ್ರ ಬಯಲಾಗಿದೆ. ಈ ಸಂಬಂಧ ಕಿರಣ್ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ.
ಹಿಂದೂ ಸಂಘಟನೆ
ಇದೇ ತಂಡ ಕೆ.ಆರ್.ನಗರದಲ್ಲೂ ಗ್ಯಾಸ್ ಅಂಗಡಿಯೊಂದರ ಮಾಲಿಕನನ್ನು ಬೆದರಿಸಿ 20 ಸಾವಿರ ರೂ ಕಿತ್ತಿದ್ದಾರೆ. ಚಾಮರಾಜನಗರದಲ್ಲಿ ಎರಡು ವರ್ಷಗಳ ಹಿಂದೆ ಹಾಗೂ ಬೆಂಗಳೂರಿನಲ್ಲೂ ಇದೀಗ ಹುಣಸೂರು ಮತ್ತು ಕೆ.ಆರ್.ನಗರ ಠಾಣೆಯಲ್ಲಿ ಇವರ ವಿರುದ್ದ ಪ್ರಕರಣ ದಾಖಲಾಗಿದೆ.
ಅಡಿಷನಲ್ ಎಸ್.ಪಿ.ಮಲ್ಲಿಕ್ ಭೇಟಿ ನೀಡಿ ವಿಚಾರಣೆ ನಡೆಸಿದರು. ಡಿವೈಎಸ್‌ಪಿ ಗೋಪಾಲಕೃಷ್ಣ, ಇನ್ಸ್ಪೆಕ್ಟರ್ ಮುನಿಯಪ್ಪ ಹಾಜರಿದ್ದರು.
ಆರೋಪಿಗಳು ಕೃತ್ಯಕ್ಕೆ ಬಳಸುತ್ತಿದ್ದ ಕಾರಿನಲ್ಲಿ ಹಿಂದೂರಾಷ್ಟ್ರ ರಕ್ಷಣಾ ಪಡೆ ನಾಮಫಲಕ ಅಳವಡಿಸಿಕೊಂಡಿದ್ದಲ್ಲದೆಜೆ.ಕೆ.24*7 ಕನ್ನಡ ನ್ಯೂಸ್ ಚಾನಲ್ ಸಿಕ್ಕರ್ ಅಳವಡಿಸಿಕೊಂಡು ವಿವಿಧೆಡೆ ಹಣ ವಸೂಲಿಯನ್ನೇ ದಂದೆ ಮಾಡಿಕೊಂಡಿದ್ದರು. ರಾಮಕೃಷ್ಣ ತನ್ನ ಮೊಬೈಲ್ ನಲ್ಲಿ ಪುನೀತ್ತ್ ಕೆರೆಹಳ್ಳಿ ಜೊತೆ ಇರುವ ಪೊಟೋಗಳನ್ನು ಜಾನುವಾರು ಸಾಗಿಸುವವರಿಗೆ ತೋರಿಸಿ ಬೆದರಿಸುತ್ತಿರುವ ಬಗ್ಗೆ ಬಾಯ್ಬಿಟ್ಟಿದ್ದಾನೆಂದು ಹೇಳಲಾಗಿದೆ…

Spread the love

Related post

ಸರ್ಕಾರಿ ಜಾಗದಲ್ಲಿ ಅಕ್ರಮ ಹೋಟೆಲ್ ನಿರ್ಮಾಣ ಆರೋಪ – ಜಿಲ್ಲಾಧಿಕಾರಿ ಗಮನ ಹರಿಸಲು ರೈತರ ಮನವಿ

ಸರ್ಕಾರಿ ಜಾಗದಲ್ಲಿ ಅಕ್ರಮ ಹೋಟೆಲ್ ನಿರ್ಮಾಣ ಆರೋಪ – ಜಿಲ್ಲಾಧಿಕಾರಿ ಗಮನ…

ಸರ್ಕಾರಿ ಜಾಗದಲ್ಲಿ ಅಕ್ರಮ ಹೋಟೆಲ್ ನಿರ್ಮಾಣ ಆರೋಪ – ಜಿಲ್ಲಾಧಿಕಾರಿ ಗಮನ ಹರಿಸಲು ರೈತರ ಮನವಿ ಗುಂಡ್ಲುಪೇಟೆ ತಾಲೂಕಿನ ಹಿರಿಕಾಟಿ ಗೇಟ್ ಸಮೀಪದ ಸರ್ವೇ ನಂ.218/1ಕ್ಕೆ ಸೇರಿದ ಸರ್ಕಾರಿ…
ಮೈಸೂರು, ಏಪ್ರಿಲ್ 13: ವಿಶ್ವಪ್ರಸಿದ್ಧ KRS Brindavan Gardens ನಲ್ಲಿ ಡಿಜಿಟಲ್ ಯುಗದಲ್ಲಿಯೂ “ಕ್ಯಾಶ್ ಮಾತ್ರ” ನಿಯಮ ಮುಂದುವರಿಯುತ್ತಿರುವುದು ಪ್ರವಾಸಿಗರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ.

ಮೈಸೂರು, ಏಪ್ರಿಲ್ 13: ವಿಶ್ವಪ್ರಸಿದ್ಧ KRS Brindavan Gardens ನಲ್ಲಿ ಡಿಜಿಟಲ್…

ಮೈಸೂರು, ಏಪ್ರಿಲ್ 13: ವಿಶ್ವಪ್ರಸಿದ್ಧ KRS Brindavan Gardens ನಲ್ಲಿ ಡಿಜಿಟಲ್ ಯುಗದಲ್ಲಿಯೂ “ಕ್ಯಾಶ್ ಮಾತ್ರ” ನಿಯಮ ಮುಂದುವರಿಯುತ್ತಿರುವುದು ಪ್ರವಾಸಿಗರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ. ಪ್ರವೇಶ ಟಿಕೆಟ್ ಪಡೆಯಲು ಬರುವವರಿಗೆ…
ಯುವಕನ ಕಿಡ್ನಾಪ್…ಮಂಗಳಮುಖಿ ವೇಷ ಹಾಕಿಸಿ ಕಲೆಕ್ಷನ್…ಸೆಕ್ಸ್ ವರ್ಕ್ ಗೆಯೂಸ್…ಕರಾಳದಂಧೆಯ ಮತ್ತೊಂದು ಮುಖ ಬಯಲು…

ಯುವಕನ ಕಿಡ್ನಾಪ್…ಮಂಗಳಮುಖಿ ವೇಷ ಹಾಕಿಸಿ ಕಲೆಕ್ಷನ್…ಸೆಕ್ಸ್ ವರ್ಕ್ ಗೆಯೂಸ್…ಕರಾಳದಂಧೆಯ ಮತ್ತೊಂದು ಮುಖ…

ಯುವಕನ ಕಿಡ್ನಾಪ್…ಮಂಗಳಮುಖಿ ವೇಷ ಹಾಕಿಸಿ ಕಲೆಕ್ಷನ್…ಸೆಕ್ಸ್ ವರ್ಕ್ ಗೆಯೂಸ್…ಕರಾಳದಂಧೆಯ ಮತ್ತೊಂದು ಮುಖ ಬಯಲು… ನಂಜನಗೂಡು,ಏ12,Tv10 ಕನ್ನಡ ಯುವಕನೊಬ್ಬನನ್ನ ಕಿಡ್ನಾಪ್ ಮಾಡಿ ಬಲವಂತವಾಗಿ ಮಂಗಳಮುಖಿ ವೇಷ ಹಾಕಿಸಿ ಕಲೆಕ್ಷನ್ ಹಾಗೂ…

Leave a Reply

Your email address will not be published. Required fields are marked *