ಮೂರು ಹಸುಗಳ ಮೇಲೆ ಹುಲಿ ದಾಳಿ…ಒಂದು ಸಾವು ಎರಡಕ್ಕೆ ಗಾಯ…ಅರಣ್ಯ ಇಲಾಖೆ ಕ್ಯಾಮರ ಕಣ್ಣಿಗೆ ಸೆರೆಯಾದ ವ್ಯಾಘ್ರ…

ಮೂರು ಹಸುಗಳ ಮೇಲೆ ಹುಲಿ ದಾಳಿ…ಒಂದು ಸಾವು ಎರಡಕ್ಕೆ ಗಾಯ…ಅರಣ್ಯ ಇಲಾಖೆ ಕ್ಯಾಮರ ಕಣ್ಣಿಗೆ ಸೆರೆಯಾದ ವ್ಯಾಘ್ರ…

ನಂಜನಗೂಡು,ಜು4,Tv10 ಕನ್ನಡ

ಒಂದೇ ದಿನ ಮೂರು ಹಸುಗಳ ಮೇಲೆ ದಾಳಿ ಮಾಡಿದ ವ್ಯಾಘ್ರ ಒಂದು ಸಾವನ್ನಪ್ಪಿದ್ದು ಎರಡು ಹಸುಗಳು ಗಾಯಗೊಂಡ ಘಟನೆ ನಂಜನಗೂಡು ತಾಲೂಕು ಮಡುವಿನಹಳ್ಳಿ ಗ್ರಾಮದಲ್ಲಿ ನಡೆದಿದೆ.ಘಟನೆಯಿಂದ ಸುತ್ತಮುತ್ತಲ ರೈತರಲ್ಲಿ ಆತಂಕ ಹೆಚ್ಚಾಗಿದೆ.
ವ್ಯಾಘ್ರನ ಸೆರೆ ಹಿಡಿಯುವಂತೆ ರೈತರು ಅಗ್ರಹಿಸಿದ್ದಾರೆ.ಅರಣ್ಯ ಇಲಾಖೆ ಅಲರ್ಟ್ ಆಗಿದೆ.ಕೆಲ ದಿನಗಳಿಂದ ಹುಕಿ ಹೆಡಿಯಾಲ ಸುತ್ತಮುತ್ತಲ ಈರೇಗೌಡನ ಹುಂಡಿ ಅಂಜನಾಪುರ ಗ್ರಾಮಗಳ ಬಳಿ ಕಾಣಿಸಿಕೊಂಡಿದೆ.ಜಮೀನಿನಲ್ಲಿ ಬಾರಿ ಗಾತ್ರದ ಹೆಜ್ಜೆ ಗುರುತುಗಳು ಕಂಡುಬಂದಿತ್ತು. ಅರಣ್ಯ ಇಲಾಖೆಯ ಎಸಿಎಫ್ ಪರಮೇಶ್ ನೇತೃತ್ವದಲ್ಲಿ ಕಳೆದ ಮೂರು ನಾಲ್ಕು ದಿನಗಳಿಂದ ಹುಲಿಯ ಹೆಜ್ಜೆ ಗುರುತುಗಳ ಓಡಾಟವನ್ನು ಗಮನಿಸಿ ಮಡುವಿನಹಳ್ಳಿ ಸಮೀಪದ ಜಮೀನೊಂದರಲ್ಲಿ ಕ್ಯಾಮರ ಅಳವಡಿಸಿದ್ದರು.ಕಣ್ತಪ್ಪಿಸಿ ಓಡಾಡುತ್ತಿರುವ ಹುಲಿ ಕ್ಯಾಮರ ಕಣ್ಣಿಗೆ ಸೆರೆಯಾಗಿದೆ.ಇಂದು ಮಧ್ಯಾಹ್ನ ಒಂದು ಗಂಟೆಯ ಸಮಯದಲ್ಲಿ ಮಡುವಿನಹಳ್ಳಿ ಗ್ರಾಮದ ನಿಜಲಿಂಗಪ್ಪ ಎಂಬುವರಿಗೆ ಸೇರಿದ ಒಂದು ಹಸುವನ್ನು ಬಲಿಪಡೆದು ಮಹೇಶ್ ಎಂಬ ರೈತರಿಗೆ ಸೇರಿದ ಮತ್ತೆರಡು ಹಸುಗಳ ಮೇಲೂ ದಾಳಿ ನಡೆಸಿ ಗಾಯಗೊಳಿಸಿದೆ.
ಸ್ಥಳಕ್ಕೆ ಆಗಮಿಸಿದ ಹೆಡಿಯಾಲ ಉಪವಲಯ ಅರಣ್ಯ ಅಧಿಕಾರಿಗಳಾದ ಕಾರ್ತಿಕ್, ಕಿರಣ್ ಸ್ಥಳ ಪರಿಶೀಲಿಸಿ ಇಲಾಖೆಯಿಂದ ಸೂಕ್ತ ಪರಿಹಾರ ನೀಡುವ ಭರವಸೆ ನೀಡಿದ್ದಾರೆ. ತಕ್ಷಣವೇ ಸಂಬಂಧಪಟ್ಟ ಮೇಲಾಧಿಕಾರಿಗಳು, ಇತ್ತ ಗಮನ ಹರಿಸಿ, ಹುಲಿಗಳನ್ನು ಸೆರೆ ಹಿಡಿಯುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ…

Spread the love

Related post

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್… ಮಂಡ್ಯ,ಜೂ13,Tv10 ಕನ್ನಡ ಜಮೀನು ಖಾತೆಗೆ ರೂ.2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು 10 ಸಾವಿರ ಹಣ ಸ್ವೀಕರಿಸುವಾಗಲೋಕಾಯುಕ್ತ…
ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್… ಮೈಸೂರು,ಜೂ12,Tv10 ಕನ್ನಡ ಕಸದರಾಶಿ ಹಾವಳಿ ತಪ್ಪಿಸಲು ಮೈಸೂರು ಮಹಾನಗರ ಪಾಲಿಕೆ ಮಾಸ್ಟರ್ ಪ್ಲಾನ್…
ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…

Leave a Reply

Your email address will not be published. Required fields are marked *