ಮೂರು ಹಸುಗಳ ಮೇಲೆ ಹುಲಿ ದಾಳಿ…ಒಂದು ಸಾವು ಎರಡಕ್ಕೆ ಗಾಯ…ಅರಣ್ಯ ಇಲಾಖೆ ಕ್ಯಾಮರ ಕಣ್ಣಿಗೆ ಸೆರೆಯಾದ ವ್ಯಾಘ್ರ…

ಮೂರು ಹಸುಗಳ ಮೇಲೆ ಹುಲಿ ದಾಳಿ…ಒಂದು ಸಾವು ಎರಡಕ್ಕೆ ಗಾಯ…ಅರಣ್ಯ ಇಲಾಖೆ ಕ್ಯಾಮರ ಕಣ್ಣಿಗೆ ಸೆರೆಯಾದ ವ್ಯಾಘ್ರ…

ನಂಜನಗೂಡು,ಜು4,Tv10 ಕನ್ನಡ

ಒಂದೇ ದಿನ ಮೂರು ಹಸುಗಳ ಮೇಲೆ ದಾಳಿ ಮಾಡಿದ ವ್ಯಾಘ್ರ ಒಂದು ಸಾವನ್ನಪ್ಪಿದ್ದು ಎರಡು ಹಸುಗಳು ಗಾಯಗೊಂಡ ಘಟನೆ ನಂಜನಗೂಡು ತಾಲೂಕು ಮಡುವಿನಹಳ್ಳಿ ಗ್ರಾಮದಲ್ಲಿ ನಡೆದಿದೆ.ಘಟನೆಯಿಂದ ಸುತ್ತಮುತ್ತಲ ರೈತರಲ್ಲಿ ಆತಂಕ ಹೆಚ್ಚಾಗಿದೆ.
ವ್ಯಾಘ್ರನ ಸೆರೆ ಹಿಡಿಯುವಂತೆ ರೈತರು ಅಗ್ರಹಿಸಿದ್ದಾರೆ.ಅರಣ್ಯ ಇಲಾಖೆ ಅಲರ್ಟ್ ಆಗಿದೆ.ಕೆಲ ದಿನಗಳಿಂದ ಹುಕಿ ಹೆಡಿಯಾಲ ಸುತ್ತಮುತ್ತಲ ಈರೇಗೌಡನ ಹುಂಡಿ ಅಂಜನಾಪುರ ಗ್ರಾಮಗಳ ಬಳಿ ಕಾಣಿಸಿಕೊಂಡಿದೆ.ಜಮೀನಿನಲ್ಲಿ ಬಾರಿ ಗಾತ್ರದ ಹೆಜ್ಜೆ ಗುರುತುಗಳು ಕಂಡುಬಂದಿತ್ತು. ಅರಣ್ಯ ಇಲಾಖೆಯ ಎಸಿಎಫ್ ಪರಮೇಶ್ ನೇತೃತ್ವದಲ್ಲಿ ಕಳೆದ ಮೂರು ನಾಲ್ಕು ದಿನಗಳಿಂದ ಹುಲಿಯ ಹೆಜ್ಜೆ ಗುರುತುಗಳ ಓಡಾಟವನ್ನು ಗಮನಿಸಿ ಮಡುವಿನಹಳ್ಳಿ ಸಮೀಪದ ಜಮೀನೊಂದರಲ್ಲಿ ಕ್ಯಾಮರ ಅಳವಡಿಸಿದ್ದರು.ಕಣ್ತಪ್ಪಿಸಿ ಓಡಾಡುತ್ತಿರುವ ಹುಲಿ ಕ್ಯಾಮರ ಕಣ್ಣಿಗೆ ಸೆರೆಯಾಗಿದೆ.ಇಂದು ಮಧ್ಯಾಹ್ನ ಒಂದು ಗಂಟೆಯ ಸಮಯದಲ್ಲಿ ಮಡುವಿನಹಳ್ಳಿ ಗ್ರಾಮದ ನಿಜಲಿಂಗಪ್ಪ ಎಂಬುವರಿಗೆ ಸೇರಿದ ಒಂದು ಹಸುವನ್ನು ಬಲಿಪಡೆದು ಮಹೇಶ್ ಎಂಬ ರೈತರಿಗೆ ಸೇರಿದ ಮತ್ತೆರಡು ಹಸುಗಳ ಮೇಲೂ ದಾಳಿ ನಡೆಸಿ ಗಾಯಗೊಳಿಸಿದೆ.
ಸ್ಥಳಕ್ಕೆ ಆಗಮಿಸಿದ ಹೆಡಿಯಾಲ ಉಪವಲಯ ಅರಣ್ಯ ಅಧಿಕಾರಿಗಳಾದ ಕಾರ್ತಿಕ್, ಕಿರಣ್ ಸ್ಥಳ ಪರಿಶೀಲಿಸಿ ಇಲಾಖೆಯಿಂದ ಸೂಕ್ತ ಪರಿಹಾರ ನೀಡುವ ಭರವಸೆ ನೀಡಿದ್ದಾರೆ. ತಕ್ಷಣವೇ ಸಂಬಂಧಪಟ್ಟ ಮೇಲಾಧಿಕಾರಿಗಳು, ಇತ್ತ ಗಮನ ಹರಿಸಿ, ಹುಲಿಗಳನ್ನು ಸೆರೆ ಹಿಡಿಯುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ…

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *