ಅಸಲಿ ಇದ್ದರೂ ನಕಲಿ ವ್ಯಕ್ತಿಗಳಿಂದ ಆಸ್ತಿ ಕಬಳಿಸಲು ಸಂಚು…ಐವರ ವಿರುದ್ದ ಹಿರಿಯ ಉಪನೊಂದಣಾಧಿಕಾರಿಗಳಿಂದ ಪ್ರಕರಣ ದಾಖಲು…

ಅಸಲಿ ಇದ್ದರೂ ನಕಲಿ ವ್ಯಕ್ತಿಗಳಿಂದ ಆಸ್ತಿ ಕಬಳಿಸಲು ಸಂಚು…ಐವರ ವಿರುದ್ದ ಹಿರಿಯ ಉಪನೊಂದಣಾಧಿಕಾರಿಗಳಿಂದ ಪ್ರಕರಣ ದಾಖಲು…

ಮೈಸೂರು,ಜು10,Tv10 ಕನ್ನಡ

ಅಸಲಿ ವ್ಯಕ್ತಿ ಇದ್ದರೂ ನಕಲಿ ವ್ಯಕ್ತಿಗಳು ಆಸ್ತಿಯನ್ನ ಕಬಳಿಸಲು ಯತ್ನಿಸಿ ಸಿಕ್ಕಿಬಿದ್ದ ಘಟನೆ ಮೈಸೂರು ಪೂರ್ವ ಉಪನೊಂದಣಾಧಿಕಾರಿ ಕಚೇರಿಯಲ್ಲಿ ನಡೆದಿದೆ.ಸಂಚು ರೂಪಿಸಿ ಸಿಕ್ಕಿಬಿದ್ದ ಐದು ಭೂಗಳ್ಳರ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಹಿರಿಯ ಉಪನೊಂದಣಾಧಿಕಾರಿ ಹೆಚ್.ಎಲ್.ನಾಗರಾಜು ರವರು ಮೈಸೂರು ದಕ್ಷಿಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಮೈಸೂರಿನ ನೆಹರೂ ನಗರದ ನಿವಾಸಿಗಳಾದ ಉಮೇರಾಖಾನಂ,ಸೈಯದ್ ಇರ್ಫಾನ್,ಸಲ್ಮಾ ಸುಲ್ತಾನ,ಅಕ್ರಮ್ ಹಾಗೂ ಜೋಹರ್ ಆಲಮ್ ವಿರುದ್ದ ಪ್ರಕರಣ ದಾಖಲಾಗಿದೆ.ಗಾಯಿತ್ರಿಪುರಂ ನಿವಾಸ ಉಮೇರಾಖಾನಂ ಎಂಬುವರ ಹೆಸರಿನಲ್ಲಿದ್ದ ಆಸ್ತಿ ಲಪಟಾಯಿಸಲು ಸಂಚು ರೂಪಿಸಿ ಸಿಕ್ಕಿಬಿದ್ದಿದ್ದಾರೆ.

ಮೈಸೂರು ತಾಲೂಕು ಕಸಬಾ ಹೋಬಳಿ ರಮ್ಮನಹಳ್ಳಿ ಗ್ರಾಮ ಸರ್ವೆ ನಂ.201/1 ರ 1 ಎಕ್ರೆ 7 ಗುಂಟೆ ಹಾಗೂ ರಮ್ಮನಹಳ್ಳಿ ಗ್ರಾಮ ಸರ್ವೆ ನಂ.210/4 ರ 1 ಎಕ್ರೆ 5 ಗುಂಟೆ ಜಮೀನಿನ ಮಾಲೀಕರು ಗಾಯಿತ್ರಿಪುರಂ ನ ಉಮೇರಾಖಾನಂ ರವರು.ಸದರಿ ಆಸ್ತಿಯನ್ನ ತಮ್ಮದೆಂದು ದಾಖಲೆ ಸೃಷ್ಟಿಸಿದ್ದ ನೆಹರೂ ನಗರದ ನಕಲಿ ಉಮೇರಾಖಾನಂ ರವರು ನಕಲಿ ಆಧಾರ್ ಕಾರ್ಡ್,ಪಾನ್ ಕಾರ್ಡ್ ಗಳನ್ನ ಸಲ್ಲಿಸಿ ಉಪನೊಂದಣಾಧಿಕಾರಿಗಳ ಕಚೇರಿಯಲ್ಲಿ ನಿಗದಿತ ಮುದ್ರಾಂಕ ಶುಲ್ಕ ಹಾಗೂ ನೊಂದಣಿ ಶುಲ್ಕ ಪಾವತಿಸಿ ತಮ್ಮ ಮಗಳ ಹೆಸರಿನಲ್ಲಿ ಎರಡು ಪ್ರತ್ಯೇಕ ದಾನಪತ್ರ ಮಾಡಿ ನೊಂದಣಿ ಮಾಡಿಸಿದ್ದಾರೆ.ಈ ಬಗ್ಗೆ ದೂರು ಬಂದ ಆಧಾರದ ಮೇಲೆ ಹಿರಿಯ ಉಪನೊಂದಣಾಧಿಕಾರಿಗಳಾದ ನಾಗರಾಜು ರವರು ದಾಖಲೆಗಳನ್ನ ಪರಿಶೀಲಿಸಿದ್ದು ನಕಲಿ ಎಂದು ಖಚಿತವಾದ ಮೇಲೆ ಖುದ್ದಾಗಿ ಮೈಸೂರು ದಕ್ಷಿಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ನಕಲಿ ವ್ಯಕ್ತಿ ಹಾಗೂ ಇದಕ್ಕೆ ಸಹಕರಿಸಿದವರು ಸೇರಿದಂತೆ 5 ಮಂದಿ ವಿರುದ್ದ ಪ್ರಕರಣ ದಾಖಲಿಸಿದ್ದಾರೆ….

Spread the love

Related post

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್… ಮಂಡ್ಯ,ಜೂ13,Tv10 ಕನ್ನಡ ಜಮೀನು ಖಾತೆಗೆ ರೂ.2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು 10 ಸಾವಿರ ಹಣ ಸ್ವೀಕರಿಸುವಾಗಲೋಕಾಯುಕ್ತ…
ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್… ಮೈಸೂರು,ಜೂ12,Tv10 ಕನ್ನಡ ಕಸದರಾಶಿ ಹಾವಳಿ ತಪ್ಪಿಸಲು ಮೈಸೂರು ಮಹಾನಗರ ಪಾಲಿಕೆ ಮಾಸ್ಟರ್ ಪ್ಲಾನ್…
ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…

Leave a Reply

Your email address will not be published. Required fields are marked *