ಅಸಲಿ ಇದ್ದರೂ ನಕಲಿ ವ್ಯಕ್ತಿಗಳಿಂದ ಆಸ್ತಿ ಕಬಳಿಸಲು ಸಂಚು…ಐವರ ವಿರುದ್ದ ಹಿರಿಯ ಉಪನೊಂದಣಾಧಿಕಾರಿಗಳಿಂದ ಪ್ರಕರಣ ದಾಖಲು…

ಅಸಲಿ ಇದ್ದರೂ ನಕಲಿ ವ್ಯಕ್ತಿಗಳಿಂದ ಆಸ್ತಿ ಕಬಳಿಸಲು ಸಂಚು…ಐವರ ವಿರುದ್ದ ಹಿರಿಯ ಉಪನೊಂದಣಾಧಿಕಾರಿಗಳಿಂದ ಪ್ರಕರಣ ದಾಖಲು…

ಮೈಸೂರು,ಜು10,Tv10 ಕನ್ನಡ

ಅಸಲಿ ವ್ಯಕ್ತಿ ಇದ್ದರೂ ನಕಲಿ ವ್ಯಕ್ತಿಗಳು ಆಸ್ತಿಯನ್ನ ಕಬಳಿಸಲು ಯತ್ನಿಸಿ ಸಿಕ್ಕಿಬಿದ್ದ ಘಟನೆ ಮೈಸೂರು ಪೂರ್ವ ಉಪನೊಂದಣಾಧಿಕಾರಿ ಕಚೇರಿಯಲ್ಲಿ ನಡೆದಿದೆ.ಸಂಚು ರೂಪಿಸಿ ಸಿಕ್ಕಿಬಿದ್ದ ಐದು ಭೂಗಳ್ಳರ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಹಿರಿಯ ಉಪನೊಂದಣಾಧಿಕಾರಿ ಹೆಚ್.ಎಲ್.ನಾಗರಾಜು ರವರು ಮೈಸೂರು ದಕ್ಷಿಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಮೈಸೂರಿನ ನೆಹರೂ ನಗರದ ನಿವಾಸಿಗಳಾದ ಉಮೇರಾಖಾನಂ,ಸೈಯದ್ ಇರ್ಫಾನ್,ಸಲ್ಮಾ ಸುಲ್ತಾನ,ಅಕ್ರಮ್ ಹಾಗೂ ಜೋಹರ್ ಆಲಮ್ ವಿರುದ್ದ ಪ್ರಕರಣ ದಾಖಲಾಗಿದೆ.ಗಾಯಿತ್ರಿಪುರಂ ನಿವಾಸ ಉಮೇರಾಖಾನಂ ಎಂಬುವರ ಹೆಸರಿನಲ್ಲಿದ್ದ ಆಸ್ತಿ ಲಪಟಾಯಿಸಲು ಸಂಚು ರೂಪಿಸಿ ಸಿಕ್ಕಿಬಿದ್ದಿದ್ದಾರೆ.

ಮೈಸೂರು ತಾಲೂಕು ಕಸಬಾ ಹೋಬಳಿ ರಮ್ಮನಹಳ್ಳಿ ಗ್ರಾಮ ಸರ್ವೆ ನಂ.201/1 ರ 1 ಎಕ್ರೆ 7 ಗುಂಟೆ ಹಾಗೂ ರಮ್ಮನಹಳ್ಳಿ ಗ್ರಾಮ ಸರ್ವೆ ನಂ.210/4 ರ 1 ಎಕ್ರೆ 5 ಗುಂಟೆ ಜಮೀನಿನ ಮಾಲೀಕರು ಗಾಯಿತ್ರಿಪುರಂ ನ ಉಮೇರಾಖಾನಂ ರವರು.ಸದರಿ ಆಸ್ತಿಯನ್ನ ತಮ್ಮದೆಂದು ದಾಖಲೆ ಸೃಷ್ಟಿಸಿದ್ದ ನೆಹರೂ ನಗರದ ನಕಲಿ ಉಮೇರಾಖಾನಂ ರವರು ನಕಲಿ ಆಧಾರ್ ಕಾರ್ಡ್,ಪಾನ್ ಕಾರ್ಡ್ ಗಳನ್ನ ಸಲ್ಲಿಸಿ ಉಪನೊಂದಣಾಧಿಕಾರಿಗಳ ಕಚೇರಿಯಲ್ಲಿ ನಿಗದಿತ ಮುದ್ರಾಂಕ ಶುಲ್ಕ ಹಾಗೂ ನೊಂದಣಿ ಶುಲ್ಕ ಪಾವತಿಸಿ ತಮ್ಮ ಮಗಳ ಹೆಸರಿನಲ್ಲಿ ಎರಡು ಪ್ರತ್ಯೇಕ ದಾನಪತ್ರ ಮಾಡಿ ನೊಂದಣಿ ಮಾಡಿಸಿದ್ದಾರೆ.ಈ ಬಗ್ಗೆ ದೂರು ಬಂದ ಆಧಾರದ ಮೇಲೆ ಹಿರಿಯ ಉಪನೊಂದಣಾಧಿಕಾರಿಗಳಾದ ನಾಗರಾಜು ರವರು ದಾಖಲೆಗಳನ್ನ ಪರಿಶೀಲಿಸಿದ್ದು ನಕಲಿ ಎಂದು ಖಚಿತವಾದ ಮೇಲೆ ಖುದ್ದಾಗಿ ಮೈಸೂರು ದಕ್ಷಿಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ನಕಲಿ ವ್ಯಕ್ತಿ ಹಾಗೂ ಇದಕ್ಕೆ ಸಹಕರಿಸಿದವರು ಸೇರಿದಂತೆ 5 ಮಂದಿ ವಿರುದ್ದ ಪ್ರಕರಣ ದಾಖಲಿಸಿದ್ದಾರೆ….

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *