ಅಸಲಿ ಇದ್ದರೂ ನಕಲಿ ವ್ಯಕ್ತಿಗಳಿಂದ ಆಸ್ತಿ ಕಬಳಿಸಲು ಸಂಚು…ಐವರ ವಿರುದ್ದ ಹಿರಿಯ ಉಪನೊಂದಣಾಧಿಕಾರಿಗಳಿಂದ ಪ್ರಕರಣ ದಾಖಲು…

ಅಸಲಿ ಇದ್ದರೂ ನಕಲಿ ವ್ಯಕ್ತಿಗಳಿಂದ ಆಸ್ತಿ ಕಬಳಿಸಲು ಸಂಚು…ಐವರ ವಿರುದ್ದ ಹಿರಿಯ ಉಪನೊಂದಣಾಧಿಕಾರಿಗಳಿಂದ ಪ್ರಕರಣ ದಾಖಲು…

ಮೈಸೂರು,ಜು10,Tv10 ಕನ್ನಡ

ಅಸಲಿ ವ್ಯಕ್ತಿ ಇದ್ದರೂ ನಕಲಿ ವ್ಯಕ್ತಿಗಳು ಆಸ್ತಿಯನ್ನ ಕಬಳಿಸಲು ಯತ್ನಿಸಿ ಸಿಕ್ಕಿಬಿದ್ದ ಘಟನೆ ಮೈಸೂರು ಪೂರ್ವ ಉಪನೊಂದಣಾಧಿಕಾರಿ ಕಚೇರಿಯಲ್ಲಿ ನಡೆದಿದೆ.ಸಂಚು ರೂಪಿಸಿ ಸಿಕ್ಕಿಬಿದ್ದ ಐದು ಭೂಗಳ್ಳರ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಹಿರಿಯ ಉಪನೊಂದಣಾಧಿಕಾರಿ ಹೆಚ್.ಎಲ್.ನಾಗರಾಜು ರವರು ಮೈಸೂರು ದಕ್ಷಿಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಮೈಸೂರಿನ ನೆಹರೂ ನಗರದ ನಿವಾಸಿಗಳಾದ ಉಮೇರಾಖಾನಂ,ಸೈಯದ್ ಇರ್ಫಾನ್,ಸಲ್ಮಾ ಸುಲ್ತಾನ,ಅಕ್ರಮ್ ಹಾಗೂ ಜೋಹರ್ ಆಲಮ್ ವಿರುದ್ದ ಪ್ರಕರಣ ದಾಖಲಾಗಿದೆ.ಗಾಯಿತ್ರಿಪುರಂ ನಿವಾಸ ಉಮೇರಾಖಾನಂ ಎಂಬುವರ ಹೆಸರಿನಲ್ಲಿದ್ದ ಆಸ್ತಿ ಲಪಟಾಯಿಸಲು ಸಂಚು ರೂಪಿಸಿ ಸಿಕ್ಕಿಬಿದ್ದಿದ್ದಾರೆ.

ಮೈಸೂರು ತಾಲೂಕು ಕಸಬಾ ಹೋಬಳಿ ರಮ್ಮನಹಳ್ಳಿ ಗ್ರಾಮ ಸರ್ವೆ ನಂ.201/1 ರ 1 ಎಕ್ರೆ 7 ಗುಂಟೆ ಹಾಗೂ ರಮ್ಮನಹಳ್ಳಿ ಗ್ರಾಮ ಸರ್ವೆ ನಂ.210/4 ರ 1 ಎಕ್ರೆ 5 ಗುಂಟೆ ಜಮೀನಿನ ಮಾಲೀಕರು ಗಾಯಿತ್ರಿಪುರಂ ನ ಉಮೇರಾಖಾನಂ ರವರು.ಸದರಿ ಆಸ್ತಿಯನ್ನ ತಮ್ಮದೆಂದು ದಾಖಲೆ ಸೃಷ್ಟಿಸಿದ್ದ ನೆಹರೂ ನಗರದ ನಕಲಿ ಉಮೇರಾಖಾನಂ ರವರು ನಕಲಿ ಆಧಾರ್ ಕಾರ್ಡ್,ಪಾನ್ ಕಾರ್ಡ್ ಗಳನ್ನ ಸಲ್ಲಿಸಿ ಉಪನೊಂದಣಾಧಿಕಾರಿಗಳ ಕಚೇರಿಯಲ್ಲಿ ನಿಗದಿತ ಮುದ್ರಾಂಕ ಶುಲ್ಕ ಹಾಗೂ ನೊಂದಣಿ ಶುಲ್ಕ ಪಾವತಿಸಿ ತಮ್ಮ ಮಗಳ ಹೆಸರಿನಲ್ಲಿ ಎರಡು ಪ್ರತ್ಯೇಕ ದಾನಪತ್ರ ಮಾಡಿ ನೊಂದಣಿ ಮಾಡಿಸಿದ್ದಾರೆ.ಈ ಬಗ್ಗೆ ದೂರು ಬಂದ ಆಧಾರದ ಮೇಲೆ ಹಿರಿಯ ಉಪನೊಂದಣಾಧಿಕಾರಿಗಳಾದ ನಾಗರಾಜು ರವರು ದಾಖಲೆಗಳನ್ನ ಪರಿಶೀಲಿಸಿದ್ದು ನಕಲಿ ಎಂದು ಖಚಿತವಾದ ಮೇಲೆ ಖುದ್ದಾಗಿ ಮೈಸೂರು ದಕ್ಷಿಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ನಕಲಿ ವ್ಯಕ್ತಿ ಹಾಗೂ ಇದಕ್ಕೆ ಸಹಕರಿಸಿದವರು ಸೇರಿದಂತೆ 5 ಮಂದಿ ವಿರುದ್ದ ಪ್ರಕರಣ ದಾಖಲಿಸಿದ್ದಾರೆ….

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *