ಅಸಲಿ ಇದ್ದರೂ ನಕಲಿ ವ್ಯಕ್ತಿಗಳಿಂದ ಆಸ್ತಿ ಕಬಳಿಸಲು ಸಂಚು…ಐವರ ವಿರುದ್ದ ಹಿರಿಯ ಉಪನೊಂದಣಾಧಿಕಾರಿಗಳಿಂದ ಪ್ರಕರಣ ದಾಖಲು…

ಅಸಲಿ ಇದ್ದರೂ ನಕಲಿ ವ್ಯಕ್ತಿಗಳಿಂದ ಆಸ್ತಿ ಕಬಳಿಸಲು ಸಂಚು…ಐವರ ವಿರುದ್ದ ಹಿರಿಯ ಉಪನೊಂದಣಾಧಿಕಾರಿಗಳಿಂದ ಪ್ರಕರಣ ದಾಖಲು…

ಮೈಸೂರು,ಜು10,Tv10 ಕನ್ನಡ

ಅಸಲಿ ವ್ಯಕ್ತಿ ಇದ್ದರೂ ನಕಲಿ ವ್ಯಕ್ತಿಗಳು ಆಸ್ತಿಯನ್ನ ಕಬಳಿಸಲು ಯತ್ನಿಸಿ ಸಿಕ್ಕಿಬಿದ್ದ ಘಟನೆ ಮೈಸೂರು ಪೂರ್ವ ಉಪನೊಂದಣಾಧಿಕಾರಿ ಕಚೇರಿಯಲ್ಲಿ ನಡೆದಿದೆ.ಸಂಚು ರೂಪಿಸಿ ಸಿಕ್ಕಿಬಿದ್ದ ಐದು ಭೂಗಳ್ಳರ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಹಿರಿಯ ಉಪನೊಂದಣಾಧಿಕಾರಿ ಹೆಚ್.ಎಲ್.ನಾಗರಾಜು ರವರು ಮೈಸೂರು ದಕ್ಷಿಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಮೈಸೂರಿನ ನೆಹರೂ ನಗರದ ನಿವಾಸಿಗಳಾದ ಉಮೇರಾಖಾನಂ,ಸೈಯದ್ ಇರ್ಫಾನ್,ಸಲ್ಮಾ ಸುಲ್ತಾನ,ಅಕ್ರಮ್ ಹಾಗೂ ಜೋಹರ್ ಆಲಮ್ ವಿರುದ್ದ ಪ್ರಕರಣ ದಾಖಲಾಗಿದೆ.ಗಾಯಿತ್ರಿಪುರಂ ನಿವಾಸ ಉಮೇರಾಖಾನಂ ಎಂಬುವರ ಹೆಸರಿನಲ್ಲಿದ್ದ ಆಸ್ತಿ ಲಪಟಾಯಿಸಲು ಸಂಚು ರೂಪಿಸಿ ಸಿಕ್ಕಿಬಿದ್ದಿದ್ದಾರೆ.

ಮೈಸೂರು ತಾಲೂಕು ಕಸಬಾ ಹೋಬಳಿ ರಮ್ಮನಹಳ್ಳಿ ಗ್ರಾಮ ಸರ್ವೆ ನಂ.201/1 ರ 1 ಎಕ್ರೆ 7 ಗುಂಟೆ ಹಾಗೂ ರಮ್ಮನಹಳ್ಳಿ ಗ್ರಾಮ ಸರ್ವೆ ನಂ.210/4 ರ 1 ಎಕ್ರೆ 5 ಗುಂಟೆ ಜಮೀನಿನ ಮಾಲೀಕರು ಗಾಯಿತ್ರಿಪುರಂ ನ ಉಮೇರಾಖಾನಂ ರವರು.ಸದರಿ ಆಸ್ತಿಯನ್ನ ತಮ್ಮದೆಂದು ದಾಖಲೆ ಸೃಷ್ಟಿಸಿದ್ದ ನೆಹರೂ ನಗರದ ನಕಲಿ ಉಮೇರಾಖಾನಂ ರವರು ನಕಲಿ ಆಧಾರ್ ಕಾರ್ಡ್,ಪಾನ್ ಕಾರ್ಡ್ ಗಳನ್ನ ಸಲ್ಲಿಸಿ ಉಪನೊಂದಣಾಧಿಕಾರಿಗಳ ಕಚೇರಿಯಲ್ಲಿ ನಿಗದಿತ ಮುದ್ರಾಂಕ ಶುಲ್ಕ ಹಾಗೂ ನೊಂದಣಿ ಶುಲ್ಕ ಪಾವತಿಸಿ ತಮ್ಮ ಮಗಳ ಹೆಸರಿನಲ್ಲಿ ಎರಡು ಪ್ರತ್ಯೇಕ ದಾನಪತ್ರ ಮಾಡಿ ನೊಂದಣಿ ಮಾಡಿಸಿದ್ದಾರೆ.ಈ ಬಗ್ಗೆ ದೂರು ಬಂದ ಆಧಾರದ ಮೇಲೆ ಹಿರಿಯ ಉಪನೊಂದಣಾಧಿಕಾರಿಗಳಾದ ನಾಗರಾಜು ರವರು ದಾಖಲೆಗಳನ್ನ ಪರಿಶೀಲಿಸಿದ್ದು ನಕಲಿ ಎಂದು ಖಚಿತವಾದ ಮೇಲೆ ಖುದ್ದಾಗಿ ಮೈಸೂರು ದಕ್ಷಿಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ನಕಲಿ ವ್ಯಕ್ತಿ ಹಾಗೂ ಇದಕ್ಕೆ ಸಹಕರಿಸಿದವರು ಸೇರಿದಂತೆ 5 ಮಂದಿ ವಿರುದ್ದ ಪ್ರಕರಣ ದಾಖಲಿಸಿದ್ದಾರೆ….

Spread the love

Related post

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…

Leave a Reply

Your email address will not be published. Required fields are marked *