ಗೆಳತಿಯ ಫೋನ್ ರಿಸೀವ್ ಮಾಡಿದ ಗೆಳೆಯನ ಕೊಲೆ…ಬೈಕ್ ನಿಂದ ಗುದ್ದಿ ಹತ್ಯೆ… ಬರ್ತ್ ಡೇ ಪಾರ್ಟಿ ಆಚರಣೆ ವೇಳೆ ಕೃತ್ಯ…

ಗೆಳತಿಯ ಫೋನ್ ರಿಸೀವ್ ಮಾಡಿದ ಗೆಳೆಯನ ಕೊಲೆ…ಬೈಕ್ ನಿಂದ ಗುದ್ದಿ ಹತ್ಯೆ… ಬರ್ತ್ ಡೇ ಪಾರ್ಟಿ ಆಚರಣೆ ವೇಳೆ ಕೃತ್ಯ…

ಗೆಳತಿಯ ಫೋನ್ ರಿಸೀವ್ ಮಾಡಿದ ಗೆಳೆಯನ ಕೊಲೆ…ಬೈಕ್ ನಿಂದ ಗುದ್ದಿ ಹತ್ಯೆ… ಬರ್ತ್ ಡೇ ಪಾರ್ಟಿ ಆಚರಣೆ ವೇಳೆ ಕೃತ್ಯ…

ನಂಜನಗೂಡು,ಜು18,Tv10 ಕನ್ನಡ

ಗೆಳತಿಯ ಫೋನ್ ರಿಸೀವ್ ಮಾಡಿದ ಗೆಳೆಯನನ್ನ ಭೀಕರವಾಗಿ ಕೊಂದ ಘಟನೆ ನಂಜನಗೂಡು ತಾಲೂಕಿನ ಕೆಂಪಿಸಿದ್ದನಹುಂಡಿ ಗ್ರಾಮದಲ್ಲಿ ನಡೆದಿದೆ.ಕೇವಲ ಫೋನ್ ರಿಸೀವ್ ಮಾಡಿದ್ದಕ್ಕೆ ಬೈಕ್ ನಲ್ಲಿ ಗುದ್ದಿ ಕೊಲೆ ಮಾಡಲಾಗಿದೆ.ಘಟನೆಗೆ ಸಂಭಂಧಿಸಿದಂತೆ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ 5 ಸ್ನೇಹಿತರ ವಿರುದ್ದ ಪ್ರಕರಣ ದಾಖಲಾಗಿದ್ದು ಇಬ್ಬರನ್ನ ವಶಕ್ಕೆ ಪಡೆದಿದ್ದಾರೆ.

ಕೆಂಪಿಸಿದ್ದನಹುಂಡಿ ಗ್ರಾಮದ ವಸಂತ್ ಕುಮಾರ್,ಮಧುಸೂದನ್,ಚಂದ್ರು,ರವಿಚಂದ್ರ,ಸಿದ್ದರಾಜು ಎಂಬುವರ ವಿರುದ್ದ ಪ್ರಕರಣ ದಾಖಲಾಗಿದೆ.ಕಿರಣ್ ಮೃತ ದುರ್ದೈವಿ.

15-07-2025 ರಂದು ಸ್ನೇಹಿತ ರವಿಚಂದ್ರನ್ ಹುಟ್ಟುಹಬ್ಬ ಇತ್ತು.ಕಿರಣ್ ಬರ್ತ್ ಡೇ ಪಾರ್ಟಿ ಆಚರಿಸಲು 5 ಮಂದಿ ಸ್ನೇಹಿತರ ಜೊತೆ ಹೊರಟ.ಹೆಜ್ಜಿಗೆ ಸೇತುವೆಯ ತೋಪಿನ ಬಳಿ 6 ಮಂದಿ ಸೇರಿ ಎಣ್ಣೆ ಪಾರ್ಟಿ ಶುರುಮಾಡಿದ್ರು.ವಸಂತ್ ಮೂತ್ರ ವಿಸರ್ಜನೆ ಮಾಡಲು ಸ್ವಲ್ಪದೂರ ಹೋದ.ಈ ವೇಳೆ ವಸಂತ್ ಫೋನ್ ರಿಂಗ್ ಆಗಿ ಕಿರಣ್ ರಿಸೀವ್ ಮಾಡಿದ.ರಶ್ಮಿ ಎಂಬಾಕೆಯಿಂದ ಫೋನ್ ಬಂದಿತ್ತು.ಯಾಕೆ ವಸಂತ್ ಮೊಬೈಲ್ ಗೆ ಫೋನ್ ಮಾಡಿದ್ದೀಯ ಎಂದು ಕಿರಣ್ ಪ್ರಶ್ನಿಸಿದ.ಕೆಲಸಮಯದ ನಂತರ ಮತ್ತೆ ರಶ್ಮಿಯಿಂದ ಬಂದ ಫೋನ್ ವಸಂತ್ ರಿಸೀವ್ ಮಾಡಿದಾಗ ಕಿರಣ್ ರಿಸೀವ್ ಮಾಡಿದ್ದ ವಿಚಾರ ಗೊತ್ತಾಯಿತು.ಇಷ್ಟಕ್ಕೇ ಇಬ್ಬರ ನಡುವೆ ಗಲಾಟೆ ಶುರುವಾಯ್ತು.ವಸಂತ್ ಜೊತೆ ಸೇರಿದ ನಾಲ್ವರು ಸ್ನೇಹಿತರು ಕಿರಣ್ ಮೇಲೆ ಹಲ್ಲೆ ನಡೆಸಿದ್ರು.ಸ್ಕೂಟರ್ ನಿಂದ ಗುದ್ದಿ ಕೆಳಗೆ ಬೀಳಿಸಿ ಹಲ್ಲೆ ನಡೆಸಿ ಪರಾರಿಯಾದರು.ಮಾಹಿತಿ ಅರಿತ ಸಹೋದರ ಅಣ್ಣನನ್ನ ಆಸ್ಪತ್ರೆಗೆ ದಾಖಲಿಸಿದ.ಚಿಕಿತ್ಸೆ ಫಲಕಾರಿಯಾಗದೆ ಕಿರಣ್ ಮೃತಪಟ್ಟಿದ್ದಾರೆ.ಯುವತಿಯ ಫೋನ್ ರಿಸೀವ್ ಮಾಡಿದ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತ ಎನ್ನುವುದನ್ನ ಮರೆತು ಬರ್ತ್ ಡೇ ಪಾರ್ಟಿ ದಿನವೇ ಗೆಳೆಯನನ್ನ ಕೊಂದಿದ್ದಾರೆ.ಇಬ್ಬರು ಆರೋಪಿಗಳನ್ನ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ…

Spread the love

Related post

ಫ್ಲೆಕ್ಸ್ ಗಳಲ್ಲಿ ರಾಜಕಾರಣಿಗಳನ್ನೇ ಮೀರಿಸುತ್ತಿರುವ ಮಂಡ್ಯ ಎಸ್ಪಿ ಡಾ.ಶೋಭಾರಾಣಿ…

ಫ್ಲೆಕ್ಸ್ ಗಳಲ್ಲಿ ರಾಜಕಾರಣಿಗಳನ್ನೇ ಮೀರಿಸುತ್ತಿರುವ ಮಂಡ್ಯ ಎಸ್ಪಿ ಡಾ.ಶೋಭಾರಾಣಿ…

ಫ್ಲೆಕ್ಸ್ ಗಳಲ್ಲಿ ರಾಜಕಾರಣಿಗಳನ್ನೇ ಮೀರಿಸುತ್ತಿರುವ ಮಂಡ್ಯ ಎಸ್ಪಿ ಡಾ.ಶೋಭಾರಾಣಿ… ಮಂಡ್ಯ,ಮಾ21,Tv10 ಕನ್ನಡ ಮಂಡ್ಯ ಜಿಲ್ಲಾ ವರಿಷ್ಠಾಧಿಕಾರಿ ಡಾ.ವಿ.ಜೆ.ಶೋಭಾರಾಣಿ ರವರು ಫ್ಲೆಕ್ಸ್ ಗಳಲ್ಲಿ ರಾಜಕಾರಿಣಿಗಳನ್ನೇ ಮೀರಿಸುತ್ತಿದ್ದಾರೆ.ಮಂಡ್ಯದ ವಿವಿದೆಡೆ ಯುಗಾದಿ ಹಬ್ಬದ…
ಡಿಜಿಟಲ್ ಅರೆಸ್ಟ್ ಭೀತಿ ಸೃಷ್ಟಿ…ವೃದ್ದರೊಬ್ಬರಿಗೆ 8.50 ಲಕ್ಷ ವಂಚನೆ…ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು…

ಡಿಜಿಟಲ್ ಅರೆಸ್ಟ್ ಭೀತಿ ಸೃಷ್ಟಿ…ವೃದ್ದರೊಬ್ಬರಿಗೆ 8.50 ಲಕ್ಷ ವಂಚನೆ…ಸೆನ್ ಪೊಲೀಸ್ ಠಾಣೆಯಲ್ಲಿ…

ಡಿಜಿಟಲ್ ಅರೆಸ್ಟ್ ಭೀತಿ ಸೃಷ್ಟಿ…ವೃದ್ದರೊಬ್ಬರಿಗೆ 8.50 ಲಕ್ಷ ವಂಚನೆ…ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು… ಮೈಸೂರು,ಮಾ20,Tv10 ಕನ್ನಡ ಡಿಜಿಟಲ್ ಅರೆಸ್ಟ್ ಭೀತಿ ಸೃಷ್ಟಿಸಿ ವೃದ್ದರೊಬ್ಬರಿಗೆ 8,50,047/- ರೂ ವಂಚಿಸಿದ…
ರಮ್ಯಾ ಆರ್. ಮಹಿಳೆ ನ್ಯಾಯಾಧೀಶರಾಗಿ ಆಯ್ಕೆ ಮಹಿಳಾ ಸಬಲೀಕರಣಕ್ಕೆ ಹೊಸ ಮೈಲುಗಲ್ಲುಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಕಿರಗುಂದ ಗ್ರಾಮದ ರಾಜೇಂದ್ರ ಪ್ರಸಾದ್ MD(ಜಾನಪದ ಕಲಾವಿದರು

ರಮ್ಯಾ ಆರ್. ಮಹಿಳೆ ನ್ಯಾಯಾಧೀಶರಾಗಿ ಆಯ್ಕೆ ಮಹಿಳಾ ಸಬಲೀಕರಣಕ್ಕೆ ಹೊಸ ಮೈಲುಗಲ್ಲುಮೈಸೂರು…

ರಮ್ಯಾ ಆರ್. ಮಹಿಳೆ ನ್ಯಾಯಾಧೀಶರಾಗಿ ಆಯ್ಕೆ ಮಹಿಳಾ ಸಬಲೀಕರಣಕ್ಕೆ ಹೊಸ ಮೈಲುಗಲ್ಲುಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಕಿರಗುಂದ ಗ್ರಾಮದ ರಾಜೇಂದ್ರ ಪ್ರಸಾದ್ MD(ಜಾನಪದ ಕಲಾವಿದರು ) ಪಾರ್ವತಮ್ಮ N…

Leave a Reply

Your email address will not be published. Required fields are marked *