ವೈದ್ಯನಿಂದ PWD FDA ಗೆ ಧೋಖಾ…10.50 ಲಕ್ಷ ಕ್ಯಾಶ್,ಚಿನ್ನಾಭರಣ,ಬೆಳ್ಳಿಗೆ ಉಂಡೆನಾಮ…ನೊಂದ ಮಹಿಳೆಯಿಂದ ಪ್ರಕರಣ ದಾಖಲು…

ವೈದ್ಯನಿಂದ PWD FDA ಗೆ ಧೋಖಾ…10.50 ಲಕ್ಷ ಕ್ಯಾಶ್,ಚಿನ್ನಾಭರಣ,ಬೆಳ್ಳಿಗೆ ಉಂಡೆನಾಮ…ನೊಂದ ಮಹಿಳೆಯಿಂದ ಪ್ರಕರಣ ದಾಖಲು…

  • Crime
  • July 20, 2025
  • No Comment
  • 84

ಮೈಸೂರು,ಜು20,Tv10 ಕನ್ನಡ

ಲೋಕೋಪಯೋಗಿ ಇಲಾಖೆಯಲ್ಲಿ ಪ್ರಥಮದರ್ಜೆ ಸಹಾಯಕಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಮಹಿಳೆಗೆ ನಯವಂಚಕ ವೈದ್ಯನೊಬ್ಬ ಮರಳುಮಾತನಾಡಿ 10.50 ಲಕ್ಷ ಹಣ,500 ಗ್ರಾಂ ಚಿನ್ನಾಭರಣ ಹಾಗೂ 2 ಕೆಜಿ ಬೆಳ್ಳಿ ಗೆ ಉಂಡೆನಾಮ ಇಟ್ಟಿದ್ದಾನೆ.ವಂಚನೆಗೆ ಒಳಗಾದ ಮಹಿಳೆ ವೈದ್ಯನ ವಿರುದ್ದ ಜಯಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಶ್ವೇತಾ ಮಹಂತೇಶ್(46) ವಂಚನೆಗೆ ಒಳಗಾದವರು.ಡಾ.ಶಿವಕುಮಾರ್ ವಂಚಿಸಿದ ವೈದ್ಯ.ಕರೊನಾ ಸಂಧರ್ಭದಲ್ಲಿ ಶ್ವೇತಾ ರವರು ತಮ್ಮ ಪತಿ ಮಹಂತೇಶ್ ಹಾಗೂ ಮಗ ಇಕ್ಷುಧನ್ವ ಇಬ್ಬರನ್ನೂ ಕಳೆದುಕೊಂಡಿದ್ದರು.ಮಹಂತೇಶ್ ರವರು ಲೋಕೋಪಯೋಗಿ ಇಲಾಖೆಯಲ್ಲಿ ಎಫ್.ಡಿ.ಎ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.ಪತಿಯ ಸಾವಿನ ನಂತೆ ಅನುಕಂಪದ ಆಧಾರದ ಮೇಲೆ ಪತ್ನಿ ಶ್ವೇತಾ ರವರಿಗೆ ಕೆಲಸ ದೊರೆತಿತ್ತು.ಪತಿಯ ಕೆಲಸ ಧಕ್ಕಿಸಿಕೊಂಡ ಶ್ವೇತಾ ರವರ ಬಾಳಿಗೆ ಎಂಟ್ರಿ ಕೊಟ್ಟವನು ಡಾ.ಶಿವಕುಮಾರ್.ಫೇಸ್ ಬುಕ್ ಮೂಲಕ ಪರಿಚಯಿಸಿಕೊಂಡು ಮನೆಗೆ ಬಂದ ಡಾ.ಶಿವಕುಮಾರ್ ನಯವಾದ ಮಾತುಗಳಿಂದ ನಂಬಿಸಿ ಶ್ವೇತಾ ರವರ ಬಳಿ ಇದ್ದ 500 ಗ್ರಾಂ ಚಿನ್ನಾಭರಣ ಹಾಗೂ 2 ಕೆಜಿ ತೂಕದ 110 ಬೆಳ್ಳಿ ನಾಣ್ಯಗಳನ್ನ ತನ್ನ ಹೆಸರಿನಲ್ಲಿ ಆಕ್ಸಿಸ್ ಬ್ಯಾಂಕ್ ಲಾಕರ್ ಓಪನ್ ಮಾಡಿಸಿದರು.ಸುರಕ್ಷತೆ ಹೆಸರ ಹೇಳಿ ಲಾಕರ್ ಕೀ ಗಳನ್ನ ಶ್ವೇತಾ ಬಳಿ ಇರಿಸಿದ್ದರು.ನಂತರ ಹೆಚ್ಚಿನ ಲಾಭದ ಆಮಿಷ ತೋರಿಸಿ ಶ್ವೇತಾ ಬಳಿ ಇದ್ದ 10.50 ಲಕ್ಷ ಹಣವನ್ನ ಡಾ.ಶಿವಕುಮಾರ್ ವರ್ಗಾವಣೆ ಮಾಡಿಸಿಕೊಂಡರು.ಇದಾದ ಕೆಲವೇ ದಿನಗಳಲ್ಲಿ ಲಾಕರ್ ನಲ್ಲಿದ್ದ ವಜ್ರದ ಉಂಗುರ ಡಾ.ಶಿವಕುಮಾರ್ ಬೆರಳಿನಲ್ಲಿ ಕಾಣಿಸಿದೆ.ಲಾಕರ್ ಕೀ ನನ್ನ ಬಳಿ ಇರುವಾಗ ವಜ್ರದ ಉಂಗುರ ಹೇಗೆ ಬಂತು ಎಂದು ಪ್ರಶ್ನಿಸಿದಾಗ ಸಮಂಜಸ ಉತ್ತರ ಬಂದಿಲ್ಲ.ನಂತರ ಪರಿಶೀಲಿಸಿದಾಗ ಲಾಕರ್ ನಲ್ಲಿದ್ದ ಚಿನ್ನಾಭರಣ ಹಾಗೂ ಬೆಳ್ಳಿ ಪದಾರ್ಥಗಳು ಡಾ.ಶಿವಕುಮಾರ್ ಪಾಲಾಗಿತ್ತು.ತನ್ನ ಚಿನ್ನಾಭರಣ ಬೆಳ್ಳಿ ಹಾಗೂ ನಗದು ಹಣವನ್ನ ಹಿಂದಿರುಗಿಸುವಂತೆ ಕೇಳಿದಾಗ ಡಾ.ಶಿವಕುಮಾರ್ ಜೀವಬೆದರಿಕೆ ಹಾಕಿದ್ದಾರೆಂದು ಆರೋಪಿಸಿರುವ ಶ್ವೇತಾ ರವರು ಜಯಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್… ಮಂಡ್ಯ,ಜೂ13,Tv10 ಕನ್ನಡ ಜಮೀನು ಖಾತೆಗೆ ರೂ.2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು 10 ಸಾವಿರ ಹಣ ಸ್ವೀಕರಿಸುವಾಗಲೋಕಾಯುಕ್ತ…
ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್… ಮೈಸೂರು,ಜೂ12,Tv10 ಕನ್ನಡ ಕಸದರಾಶಿ ಹಾವಳಿ ತಪ್ಪಿಸಲು ಮೈಸೂರು ಮಹಾನಗರ ಪಾಲಿಕೆ ಮಾಸ್ಟರ್ ಪ್ಲಾನ್…
ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…

Leave a Reply

Your email address will not be published. Required fields are marked *