11ಇ ಸ್ಕೆಚ್ ವಿತರಿಸುವಲ್ಲಿ ಗೋಲ್ ಮಾಲ್…ಲೈಸೆನ್ಸ್ ಸರ್ವೆಯರ್ AT ನಾಗರಾಜ್ ಸಸ್ಪೆಂಡ್…ಜಿಲ್ಲಾಧಿಕಾರಿಗಳ ತಾಂತ್ರಿಕ ಸಹಾಯಕ ಮತ್ತು ಪದನಿಮಿತ್ತ ಭೂದಾಖಲೆಗಳ ಉಪನಿರ್ದೇಶಕಿ ರಮ್ಯಾ ರಿಂದ ಆದೇಶ…

11ಇ ಸ್ಕೆಚ್ ವಿತರಿಸುವಲ್ಲಿ ಗೋಲ್ ಮಾಲ್…ಲೈಸೆನ್ಸ್ ಸರ್ವೆಯರ್ AT ನಾಗರಾಜ್ ಸಸ್ಪೆಂಡ್…ಜಿಲ್ಲಾಧಿಕಾರಿಗಳ ತಾಂತ್ರಿಕ ಸಹಾಯಕ ಮತ್ತು ಪದನಿಮಿತ್ತ ಭೂದಾಖಲೆಗಳ ಉಪನಿರ್ದೇಶಕಿ ರಮ್ಯಾ ರಿಂದ ಆದೇಶ…

11ಇ ಸ್ಕೆಚ್ ವಿತರಿಸುವಲ್ಲಿ ಗೋಲ್ ಮಾಲ್…ಲೈಸೆನ್ಸ್ ಸರ್ವೆಯರ್ AT ನಾಗರಾಜ್ ಸಸ್ಪೆಂಡ್…ಜಿಲ್ಲಾಧಿಕಾರಿಗಳ ತಾಂತ್ರಿಕ ಸಹಾಯಕ ಮತ್ತು ಪದನಿಮಿತ್ತ ಭೂದಾಖಲೆಗಳ ಉಪನಿರ್ದೇಶಕಿ ರಮ್ಯಾ ರಿಂದ ಆದೇಶ

ಮೈಸೂರು,ಜು29,Tv10 ಕನ್ನಡ

ರಸ್ತೆ ಮತ್ತು ಮನೆಗಳಿರುವ ಜಾಗಕ್ಕೆ 11ಇ ಸ್ಕೆಚ್ ವಿತರಿಸಿ ಅಕ್ರಮವೆಸಗಿದ ಆರೋಪ ಸಾಬೀತಾದ ಹಿನ್ನಲೆ ಲೈಸೆನ್ಸ್ ಸರ್ವೆಯರ್ ಎ.ಟಿ.ನಾಗರಾಜ್ ರನ್ನ ಅಮಾನತುಪಡಿಸಲಾಗಿದೆ.ಜಿಲ್ಲಾಧಿಕಾರಿಗಳ ತಾಂತ್ರಿಕ ಸಹಾಯಕ ಮತ್ತು ಪದನಿಮಿತ್ತ ಭೂದಾಖಲೆಗಳ ಉಪನಿರ್ದೇಶಕರಾದ ರಮ್ಯಾ ರವರು ಆದೇಶ ಹೊರಡಿಸಿದ್ದಾರೆ.ಈ ಸಂಭಂಧ ಶ್ರೀ ಚಾಮುಂಡೇಶ್ವರಿ ರೆವಿನ್ಯೂ ಬಡಾವಣೆ ನಿವಾಸಿಗಳ ಕ್ಷೇಮಾಭಿವೃದ್ದಿ ಸಂಘ ದೂರು ನೀಡಿ ನ್ಯಾಯ ಒದಗಿಸುವಂತೆ ಪತ್ರ ಬರೆದಿದ್ದರು.ದಾಖಲೆಗಳನ್ನ ಪರಿಶೀಲಿಸಿದಾಗ 11ಇ ಸ್ಕೆಚ್ ವಿತರಿಸುವ ವೇಳೆ ಲೈಸೆನ್ಸ್ ಸರ್ವೆಯರ್ ಎಟಿ ನಾಗರಾಜ್ ಅಕ್ರಮ ಎಸಗಿರುವುದು ಖಚಿತವಾದ ಹಿನ್ನಲೆ ಅಮಾನತು ಆದೇಶ ಹೊರಡಿಸಲಾಗಿದೆ.

ಮೈಸೂರು ಜಿಲ್ಲೆ ಕಸಬಾ ಹೋಬಳಿ ಶ್ಯಾದನಹಳ್ಳಿ ಗ್ರಾಮದ ಸರ್ವೆ ನಂ 72/1 ಹಾಗೂ 72/11 ರ ಜಮೀನು ಮಾಲೀಕರಾದ ಪುಟ್ಟಪ್ಪ ಎಂಬುವರು ರೆವಿನ್ಯೂ ನಿವೇಶನಗಳನ್ನಾಗಿ ಪರಿವರ್ತಿಸಿ ಮಾರಾಟ ಮಾಡಿದ್ದಾರೆ.ಕ್ರಯಪತ್ರ ಪಡೆದವರು ಗ್ರಾಮ ಪಂಚಾಯ್ತಿಯಲ್ಲಿ ಖಾತೆ ಮಾಡಿಸಿಕೊಂಡು ಮನೆಗಳನ್ನ ನಿರ್ಮಿಸಿ ವಾಸವಿದ್ದಾರೆ.ಪುಟ್ಟಪ್ಪ ರವರು ಮರಣಹೊಂದಿದ ನಂತರ ಅವರ ಮಕ್ಕಳು ಪೌತಿಖಾತೆ ಮಾಡಿಸಿಕೊಂಡು ಮನೆಗಳಲ್ಲಿ ವಾಸವಿರುವ ಜನರಿಗೆ ತೊಂದರೆ ಕೊಡುತ್ತಿದ್ದಾರೆ.MR/H3/28-7-2022 ನ್ನು ರದ್ದುಪಡಿಸಿ ಕೊಡಬೇಕು ಹಾಗೂ ಮನೆಗಳಿರುವ ಜಾಗಕ್ಕೆ ಅಕ್ರಮವಾಗಿ ತತ್ಕಾಲ್ ಪೋಡಿ ಮಾಡಿ ಸರ್ವೆ ನಂ.72/11 ರಿಂದ 72/20 ಎಂದು 5 1/4 ಗುಂಟೆ ಪ್ರದೇಶಕ್ಕೆ ಮಾಡಿರುವ ಪೋಡಿಯನ್ನ ರದ್ದುಪಡಿಸಿ ಎಡಿಎಲ್ ಆರ್ ಸರ್ವೆಯರ್ ಎ.ಟಿ.ನಾಗರಾಜ್ ಹಾಗೂ ಆರ್.ಐ.ಮತ್ತು ವಿಎ ಗಳ ವಿರುದ್ದ ಕ್ರಮ ಕೈಗೊಳ್ಳುವಂತೆ ಸಂಘ ದೂರು ನೀಡಿದೆ.

ದೂರಿನ ಅನ್ವಯದಂತೆ ಭೂದಾಖಲೆಗಳ ಸಹಾಯಕ ನಿರ್ದೇಶಕರಾದ ಮಂಜುನಾಥ್ ರವರು ದಾಖಲೆಗಳನ್ನ ಪರಿಶೀಲಿಸಿದಾಗ ಸಾರ್ವಜನಿಕರು ಓಡಾಡುವ ರಸ್ತೆ ಹಾಗೂ ಮನೆಗಳಿರುವ ಜಾಗ 5 1/4 ಗುಂಟೆ ಪ್ರದೇಶಕ್ಕೆ ಅಕ್ರಮವಾಗಿ 11ಇ ಸ್ಕೆಚ್ ವಿತರಿಸಿರುವುದು ಕಂಡುಬಂದಿದೆ.ಮಂಜುನಾಥ್ ರವರು ನೀಡಿದ ವರದಿ ಅನ್ವಯದಂತೆ ಅಕ್ರಮ ಎಸಗಿದ ಲೈಸೆನ್ಸ್ ಸರ್ವೆಯರ್ ಎ.ಟಿ.ನಾಗರಾಜ್ ರನ್ನ ಸಸ್ಪೆಂಡ್ ಮಾಡಿ ಆದೇಶ ಹೊರಡಿಸಲಾಗಿದೆ…

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *