ಯುವಕನನ್ನ ಅಕ್ರಮವಾಗಿ ಬಂಧನದಲ್ಲಿಟ್ಟು ಹಣ ವಸೂಲಿ ಮಾಡಿದ ಆರೋಪ…ಹುಣಸೂರು ಗ್ರಾಮಾಂತರ ಠಾಣೆ ಹಿಂದಿನ ಇನ್ಸ್‌ಪೆಕ್ಟರ್ ಸಿ.ವಿ.ರವಿ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಸೂಚನೆ…

ಯುವಕನನ್ನ ಅಕ್ರಮವಾಗಿ ಬಂಧನದಲ್ಲಿಟ್ಟು ಹಣ ವಸೂಲಿ ಮಾಡಿದ ಆರೋಪ…ಹುಣಸೂರು ಗ್ರಾಮಾಂತರ ಠಾಣೆ ಹಿಂದಿನ ಇನ್ಸ್‌ಪೆಕ್ಟರ್ ಸಿ.ವಿ.ರವಿ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಸೂಚನೆ…

ಹುಣಸೂರು,ಅ7,Tv10ಕನ್ನಡ

ಯುವಕನನ್ನು ಅಕ್ರಮ ಬಂಧನದಲ್ಲಿಟ್ಟು ಆತನಿಂದ 40 ಸಾವಿರ ರೂ. ಹಣ ಪಡೆದು ಸುಳ್ಳು ಪ್ರಕರಣ ದಾಖಲಿಸಿದ ಆರೋಪದಡಿ ಹುಣಸೂರು ಗ್ರಾಮಾಂತರ ಠಾಣೆಯ ಹಿಂದಿನ 2022-23 ರಲ್ಲಿ ಸರ್ಕಲ್ ಇನ್ಸ್‌ಪೆಕ್ಟ‌ರ್ ಆಗಿದ್ದ ಸಿ.ವಿ.ರವಿ ವಿರುದ್ಧ ಎಫ್‌ಐಆ‌ರ್ ದಾಖಲಿಸಿ ವರದಿ ಸಲ್ಲಿಸುವಂತೆ ಹುಣಸೂರು ಟೌನ್ ಪೊಲೀಸರಿಗೆ ಹುಣಸೂರು ಜೆಎಂಎಫ್‌ಸಿ ನ್ಯಾಯಾ ಲಯದ ನ್ಯಾಯಾಧೀಶರಾದ ಅನಿತಾ ಅವರು ಆದೇಶ ನೀಡಿರುತ್ತಾರೆ.
ಹುಣಸೂರು ತಾಲೂಕು ಕಡೇಮನುಗನಹಳ್ಳಿ ಗ್ರಾಮದ ಅಶೋಕ್ ಎಂಬ ಯುವಕನನ್ನು 2023ರ ಆಗಸ್ಟ್ 9ರಿಂದ 12 ರವರೆಗೆ ಸರ್ಕಲ್ ಇನ್ಸಪೆಕ್ಟರ್ ಸಿ.ವಿ.ರವಿ ಪೊಲೀಸ್ ಠಾಣೆಯಲ್ಲಿ ಅಕ್ರಮ ಬಂಧನದಲ್ಲಿ ಇರಿಸಿದ್ದರು. ಆತನನ್ನು ಬೆದರಿಸಿ 40 ಸಾವಿರ ರೂ. ಪಡೆದ ನಂತರ ಯುವಕನ ವಿರುದ್ಧ ಸುಳ್ಳು ಎಫ್‌ಐಆರ್ ದಾಖಲಿಸಿ ಠಾಣೆಯ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದಾರೆ ಎಂದು ನ್ಯಾಯಾಲಯದಲ್ಲಿ ಖಾಸಗಿ ಪ್ರಕರಣ ದಾಖಲಾಗಿತ್ತು.
ವಿಚಾರಣೆ ನಡೆಸಿದ ನ್ಯಾಯಾಧೀಶರು ಸರ್ಕಲ್ ಇನ್ಸ್‌ಪೆಕ್ಟರ್ ಸಿ.ವಿ.ರವಿ ಹಾಗೂ ಇತರರ ವಿರುದ್ಧ ಐಪಿಸಿ ಸೆಕ್ಷನ್ 343 ಮತ್ತು 383ರಡಿ ಎಫ್‌ಐಆರ್ ದಾಖಲಿಸಿ,ವರದಿಯನ್ನು ಸೆ.15ರೊಳಗೆ ನ್ಯಾಯಾಲಯಕ್ಕೆ ಸಲ್ಲಿಸುವಂತೆ ಹುಣಸೂರು ಟೌನ್ ಪೋಲಿಸರಿಗೆ ಆದೇಶಿಸಿದ್ದಾರೆ.ಸಿ.ವಿ‌ ರವಿ ರವರು ಹುಣಸೂರು ಠಾಣೆಯಲ್ಲಿ 2022-23ರಲ್ಲಿ ಇನ್ಸ್ ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸಿದ್ದರು…

Spread the love

Related post

ಸರ್ಕಾರಿ ಜಾಗದಲ್ಲಿ ಅಕ್ರಮ ಹೋಟೆಲ್ ನಿರ್ಮಾಣ ಆರೋಪ – ಜಿಲ್ಲಾಧಿಕಾರಿ ಗಮನ ಹರಿಸಲು ರೈತರ ಮನವಿ

ಸರ್ಕಾರಿ ಜಾಗದಲ್ಲಿ ಅಕ್ರಮ ಹೋಟೆಲ್ ನಿರ್ಮಾಣ ಆರೋಪ – ಜಿಲ್ಲಾಧಿಕಾರಿ ಗಮನ…

ಸರ್ಕಾರಿ ಜಾಗದಲ್ಲಿ ಅಕ್ರಮ ಹೋಟೆಲ್ ನಿರ್ಮಾಣ ಆರೋಪ – ಜಿಲ್ಲಾಧಿಕಾರಿ ಗಮನ ಹರಿಸಲು ರೈತರ ಮನವಿ ಗುಂಡ್ಲುಪೇಟೆ ತಾಲೂಕಿನ ಹಿರಿಕಾಟಿ ಗೇಟ್ ಸಮೀಪದ ಸರ್ವೇ ನಂ.218/1ಕ್ಕೆ ಸೇರಿದ ಸರ್ಕಾರಿ…
ಮೈಸೂರು, ಏಪ್ರಿಲ್ 13: ವಿಶ್ವಪ್ರಸಿದ್ಧ KRS Brindavan Gardens ನಲ್ಲಿ ಡಿಜಿಟಲ್ ಯುಗದಲ್ಲಿಯೂ “ಕ್ಯಾಶ್ ಮಾತ್ರ” ನಿಯಮ ಮುಂದುವರಿಯುತ್ತಿರುವುದು ಪ್ರವಾಸಿಗರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ.

ಮೈಸೂರು, ಏಪ್ರಿಲ್ 13: ವಿಶ್ವಪ್ರಸಿದ್ಧ KRS Brindavan Gardens ನಲ್ಲಿ ಡಿಜಿಟಲ್…

ಮೈಸೂರು, ಏಪ್ರಿಲ್ 13: ವಿಶ್ವಪ್ರಸಿದ್ಧ KRS Brindavan Gardens ನಲ್ಲಿ ಡಿಜಿಟಲ್ ಯುಗದಲ್ಲಿಯೂ “ಕ್ಯಾಶ್ ಮಾತ್ರ” ನಿಯಮ ಮುಂದುವರಿಯುತ್ತಿರುವುದು ಪ್ರವಾಸಿಗರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ. ಪ್ರವೇಶ ಟಿಕೆಟ್ ಪಡೆಯಲು ಬರುವವರಿಗೆ…
ಯುವಕನ ಕಿಡ್ನಾಪ್…ಮಂಗಳಮುಖಿ ವೇಷ ಹಾಕಿಸಿ ಕಲೆಕ್ಷನ್…ಸೆಕ್ಸ್ ವರ್ಕ್ ಗೆಯೂಸ್…ಕರಾಳದಂಧೆಯ ಮತ್ತೊಂದು ಮುಖ ಬಯಲು…

ಯುವಕನ ಕಿಡ್ನಾಪ್…ಮಂಗಳಮುಖಿ ವೇಷ ಹಾಕಿಸಿ ಕಲೆಕ್ಷನ್…ಸೆಕ್ಸ್ ವರ್ಕ್ ಗೆಯೂಸ್…ಕರಾಳದಂಧೆಯ ಮತ್ತೊಂದು ಮುಖ…

ಯುವಕನ ಕಿಡ್ನಾಪ್…ಮಂಗಳಮುಖಿ ವೇಷ ಹಾಕಿಸಿ ಕಲೆಕ್ಷನ್…ಸೆಕ್ಸ್ ವರ್ಕ್ ಗೆಯೂಸ್…ಕರಾಳದಂಧೆಯ ಮತ್ತೊಂದು ಮುಖ ಬಯಲು… ನಂಜನಗೂಡು,ಏ12,Tv10 ಕನ್ನಡ ಯುವಕನೊಬ್ಬನನ್ನ ಕಿಡ್ನಾಪ್ ಮಾಡಿ ಬಲವಂತವಾಗಿ ಮಂಗಳಮುಖಿ ವೇಷ ಹಾಕಿಸಿ ಕಲೆಕ್ಷನ್ ಹಾಗೂ…

Leave a Reply

Your email address will not be published. Required fields are marked *