ಮೇಟಗಳ್ಳಿ ಸ್ಮಶಾನ ಸುತ್ತ ಬೆಳಕಿನ ಭಾಗ್ಯ…ಹೈಮಾಸ್ಕ್ ದೀಪಗಳಿಗೆ ಮರುಜೀವ…Tv10 ಕನ್ನಡ ವರದಿಗೆ ಪಾಲಿಕೆ ಸ್ಪಂದನೆ…ಗಾಂಜಾ ವ್ಯಸನಿಗಳ ಹಾವಳಿಗೆ ಬ್ರೇಕ್…

ಮೇಟಗಳ್ಳಿ ಸ್ಮಶಾನ ಸುತ್ತ ಬೆಳಕಿನ ಭಾಗ್ಯ…ಹೈಮಾಸ್ಕ್ ದೀಪಗಳಿಗೆ ಮರುಜೀವ…Tv10 ಕನ್ನಡ ವರದಿಗೆ ಪಾಲಿಕೆ ಸ್ಪಂದನೆ…ಗಾಂಜಾ ವ್ಯಸನಿಗಳ ಹಾವಳಿಗೆ ಬ್ರೇಕ್…

ಮೈಸೂರು,ಆ7,Tv10 ಕನ್ನಡ

ರಾತ್ರಿ ವೇಳೆ ಕಗ್ಗತ್ತಲಿನಲ್ಲಿ ಮುಳುಗುತ್ತಿದ್ದ ಮೇಟಗಳ್ಳಿ ಸ್ಮಶಾನಕ್ಕೆ ಬೆಳಕಿನ ವ್ಯವಸ್ಥೆ ಮಾಡಲಾಗಿದೆ.ಸ್ಮಶಾನದ ಸುತ್ತ ಅಳವಡಿಸಲಾಗಿದ್ದ ಹೈಮಾಸ್ಕ್ ದೀಪಗಳನ್ನ ದುರಸ್ಥಿ ಮಾಡಲಾಗಿದೆ.ಕಳೆದ 5 ವರ್ಷಗಳಿಂದ ನಿರ್ಜೀವವಾಗಿದ್ದ ಹೈಮಾಸ್ಕ್ ದೀಪಗಳಿಗೆ ಮರುಜೀವ ದೊರೆತಂತಾಗಿದೆ.ಇದು Tv10 ಕನ್ನಡ ವರದಿಯ ಫಲಶೃತಿಯಾಗಿದೆ. ಮೈಸೂರು ಮಹಾನಗರ ಪಾಲಿಕೆ ಕೆಇಬಿ ಇಂಜಿನಿಯರ್ ಗೋವಿಂದ ನಾಯಕ್ ಮತ್ತು ಸಿಬ್ಬಂದಿಗಳು ದೀಪಗಳನ್ನ ಅಳವಡಿಸಿ ಸ್ಮಶಾನಕ್ಕೆ ಬೆಳಕಿನ ಭಾಗ್ಯ ನೀಡಿದ್ದಾರೆ.ಮೇಟಗಳ್ಳಿ ಇನ್ಸ್ಪೆಕ್ಟರ್ ಅರುಣ್ ರವರು ಬೀದಿ ದೀಪಗಳನ್ನ ಸರಿಪಡಿಸುವಂತೆ ಪಾಲಿಕೆಗೆ ಮಾಡಿದ್ದ ಮನವಿಗೂ ಸ್ಪಂದನೆ ದೊರೆತಂತಾಗಿದೆ. 5 ಹೈ ಮಾಸ್ಕ್ ವಿದ್ಯುತ್ ಕಂಬಗಳಿಗೆ ಮರುಜೀವ ಬಂದಿದೆ

ಕತ್ತಲಾದರೆ ಮೇಟಗಳ್ಳಿ ಸ್ಮಶಾನ ಗಾಂಜಾ ವ್ಯಸನಿಗಳ ತಾಣವಾಗುತ್ತಿತ್ತು.ಸ್ಥಳೀಯರಿಗಂತೂ ಕಿರಿಕಿರಿ ಆಗುತ್ತಿತ್ತು.ಕೆಲವು ದಿನಗಳ ಹಿಂದೆ ಇನ್ಸ್ಪೆಕ್ಟರ್ ಅರುಣ್ ರವರು ಧಢೀರ್ ದಾಳಿ ನಡೆಸಿ ಗಾಂಜಾ ವ್ಯಸನಿಗಳಿಗೆ ಎಚ್ಚರಿಕೆ ಗಂಟೆ ನೀಡಿದ್ದರು.ಕತ್ತಲು ಇರುವ ಕಾರಣ ವ್ಯಸನಿಗಳು ಕಣ್ಣಾಮುಚ್ಚಾಲೆ ಆಡುತ್ತಿದ್ದರು.ಬೀದಿ ದೀಪಗಳನ್ನ ಸರಿಪಡಿಸುವಂತೆ ಸಾಕಷ್ಟು ಮನವಿಗಳನ್ನೂ ಸಲ್ಲಿಸಲಾಗಿತ್ತು.ಈ ಅವ್ಯವಸ್ಥೆ ಬಗ್ಗೆ ಇತ್ತೀಚೆಗೆ Tv10 ಕನ್ನಡ ವಾಹಿನಿಯಲ್ಲಿ ಪ್ರಸಾರ ಮಾಡಿ ಪಾಲಿಕೆ ಅಧಿಕಾರಿಗಳ ಗಮನ ಸೆಳೆಯಲಾಗಿತ್ತು.ಎಚ್ಚೆತ್ತ ಅಧಿಕಾರಿಗಳು ಇಂದು ಹೈಮಾಸ್ಕ್ ದೀಪಗಳಿಗೆ ಬಲ್ಪ್ ಗಳನ್ನ ಅಳವಡಿಸಿ ಬೆಳಕಿನ ವ್ಯವಸ್ಥೆ ಕಲ್ಪಿಸಿದ್ದಾರೆ.ಇದರಿಂದಾಗಿ ಗಾಂಜಾ ವ್ಯಸನಿಗಳ ಕಾಟ ತಪ್ಪಿದಂತಾಗಿದೆ.ಇದು Tv10 ಕನ್ನಡ ಇಂಪ್ಯಾಕ್ಟ್ ಆಗಿದೆ…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು… ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *