ಮೇಟಗಳ್ಳಿ ಸ್ಮಶಾನ ಸುತ್ತ ಬೆಳಕಿನ ಭಾಗ್ಯ…ಹೈಮಾಸ್ಕ್ ದೀಪಗಳಿಗೆ ಮರುಜೀವ…Tv10 ಕನ್ನಡ ವರದಿಗೆ ಪಾಲಿಕೆ ಸ್ಪಂದನೆ…ಗಾಂಜಾ ವ್ಯಸನಿಗಳ ಹಾವಳಿಗೆ ಬ್ರೇಕ್…

ಮೇಟಗಳ್ಳಿ ಸ್ಮಶಾನ ಸುತ್ತ ಬೆಳಕಿನ ಭಾಗ್ಯ…ಹೈಮಾಸ್ಕ್ ದೀಪಗಳಿಗೆ ಮರುಜೀವ…Tv10 ಕನ್ನಡ ವರದಿಗೆ ಪಾಲಿಕೆ ಸ್ಪಂದನೆ…ಗಾಂಜಾ ವ್ಯಸನಿಗಳ ಹಾವಳಿಗೆ ಬ್ರೇಕ್…

ಮೈಸೂರು,ಆ7,Tv10 ಕನ್ನಡ

ರಾತ್ರಿ ವೇಳೆ ಕಗ್ಗತ್ತಲಿನಲ್ಲಿ ಮುಳುಗುತ್ತಿದ್ದ ಮೇಟಗಳ್ಳಿ ಸ್ಮಶಾನಕ್ಕೆ ಬೆಳಕಿನ ವ್ಯವಸ್ಥೆ ಮಾಡಲಾಗಿದೆ.ಸ್ಮಶಾನದ ಸುತ್ತ ಅಳವಡಿಸಲಾಗಿದ್ದ ಹೈಮಾಸ್ಕ್ ದೀಪಗಳನ್ನ ದುರಸ್ಥಿ ಮಾಡಲಾಗಿದೆ.ಕಳೆದ 5 ವರ್ಷಗಳಿಂದ ನಿರ್ಜೀವವಾಗಿದ್ದ ಹೈಮಾಸ್ಕ್ ದೀಪಗಳಿಗೆ ಮರುಜೀವ ದೊರೆತಂತಾಗಿದೆ.ಇದು Tv10 ಕನ್ನಡ ವರದಿಯ ಫಲಶೃತಿಯಾಗಿದೆ. ಮೈಸೂರು ಮಹಾನಗರ ಪಾಲಿಕೆ ಕೆಇಬಿ ಇಂಜಿನಿಯರ್ ಗೋವಿಂದ ನಾಯಕ್ ಮತ್ತು ಸಿಬ್ಬಂದಿಗಳು ದೀಪಗಳನ್ನ ಅಳವಡಿಸಿ ಸ್ಮಶಾನಕ್ಕೆ ಬೆಳಕಿನ ಭಾಗ್ಯ ನೀಡಿದ್ದಾರೆ.ಮೇಟಗಳ್ಳಿ ಇನ್ಸ್ಪೆಕ್ಟರ್ ಅರುಣ್ ರವರು ಬೀದಿ ದೀಪಗಳನ್ನ ಸರಿಪಡಿಸುವಂತೆ ಪಾಲಿಕೆಗೆ ಮಾಡಿದ್ದ ಮನವಿಗೂ ಸ್ಪಂದನೆ ದೊರೆತಂತಾಗಿದೆ. 5 ಹೈ ಮಾಸ್ಕ್ ವಿದ್ಯುತ್ ಕಂಬಗಳಿಗೆ ಮರುಜೀವ ಬಂದಿದೆ

ಕತ್ತಲಾದರೆ ಮೇಟಗಳ್ಳಿ ಸ್ಮಶಾನ ಗಾಂಜಾ ವ್ಯಸನಿಗಳ ತಾಣವಾಗುತ್ತಿತ್ತು.ಸ್ಥಳೀಯರಿಗಂತೂ ಕಿರಿಕಿರಿ ಆಗುತ್ತಿತ್ತು.ಕೆಲವು ದಿನಗಳ ಹಿಂದೆ ಇನ್ಸ್ಪೆಕ್ಟರ್ ಅರುಣ್ ರವರು ಧಢೀರ್ ದಾಳಿ ನಡೆಸಿ ಗಾಂಜಾ ವ್ಯಸನಿಗಳಿಗೆ ಎಚ್ಚರಿಕೆ ಗಂಟೆ ನೀಡಿದ್ದರು.ಕತ್ತಲು ಇರುವ ಕಾರಣ ವ್ಯಸನಿಗಳು ಕಣ್ಣಾಮುಚ್ಚಾಲೆ ಆಡುತ್ತಿದ್ದರು.ಬೀದಿ ದೀಪಗಳನ್ನ ಸರಿಪಡಿಸುವಂತೆ ಸಾಕಷ್ಟು ಮನವಿಗಳನ್ನೂ ಸಲ್ಲಿಸಲಾಗಿತ್ತು.ಈ ಅವ್ಯವಸ್ಥೆ ಬಗ್ಗೆ ಇತ್ತೀಚೆಗೆ Tv10 ಕನ್ನಡ ವಾಹಿನಿಯಲ್ಲಿ ಪ್ರಸಾರ ಮಾಡಿ ಪಾಲಿಕೆ ಅಧಿಕಾರಿಗಳ ಗಮನ ಸೆಳೆಯಲಾಗಿತ್ತು.ಎಚ್ಚೆತ್ತ ಅಧಿಕಾರಿಗಳು ಇಂದು ಹೈಮಾಸ್ಕ್ ದೀಪಗಳಿಗೆ ಬಲ್ಪ್ ಗಳನ್ನ ಅಳವಡಿಸಿ ಬೆಳಕಿನ ವ್ಯವಸ್ಥೆ ಕಲ್ಪಿಸಿದ್ದಾರೆ.ಇದರಿಂದಾಗಿ ಗಾಂಜಾ ವ್ಯಸನಿಗಳ ಕಾಟ ತಪ್ಪಿದಂತಾಗಿದೆ.ಇದು Tv10 ಕನ್ನಡ ಇಂಪ್ಯಾಕ್ಟ್ ಆಗಿದೆ…

Spread the love

Related post

ಬಿಸಿ ನೀರಿನ ಪಾತ್ರೆಯಲ್ಲಿ ಬಿದ್ದು ಮಗು ಸಾವು…

ಬಿಸಿ ನೀರಿನ ಪಾತ್ರೆಯಲ್ಲಿ ಬಿದ್ದು ಮಗು ಸಾವು…

ಬಿಸಿ ನೀರಿನ ಪಾತ್ರೆಯಲ್ಲಿ ಬಿದ್ದು ಮಗು ಸಾವು… ಹುಣಸೂರು,ಡಿ20,Tv10 ಕನ್ನಡ ಸುಡುತ್ತಿರುವ ಬಿಸಿನೀರಿನ ಪಾತ್ರೆಗೆ ಬಿದ್ದು ಹೆಣ್ಣುಮಗು ಸಾವನ್ನಪ್ಪಿದ ಘಟನೆ ಹುಣಸೂರು ತಾಲೂಕಿನ ವಿಜಯಗಿರಿ ಹಾಡಿಯಲ್ಲಿ ನಡೆದಿದೆ. ಆದಿವಾಸಿ…
ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಗಲಾಟೆ…ಓರ್ವನ ಕೊಲೆಯಲ್ಲಿ ಅಂತ್ಯ…

ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಗಲಾಟೆ…ಓರ್ವನ ಕೊಲೆಯಲ್ಲಿ ಅಂತ್ಯ…

ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಗಲಾಟೆ…ಓರ್ವನ ಕೊಲೆಯಲ್ಲಿ ಅಂತ್ಯ… ಹುಣಸೂರು,ಡಿ19,Tv10 ಕನ್ನಡ ಕ್ಲುಲ್ಲಕ ಕಾರಣಕ್ಕೆ ಸ್ನೇಹಿತನನ್ನೇ ಕೊಲೆ ಮಾಡಿರುವ ಘಟನೆ ಹುಣಸೂರು ನಗರದಲ್ಲಿ ನಡೆದಿದೆ.ನಿಜಾಂ ಮೊಹಲ್ಲಾದ ನಿವಾಸಿ ಖಾಜಾಪೀರ್(44)ಕೊಲೆಯಾದ…
ಕಾಂಗ್ರೆಸ್ ಮಾಜಿ ಶಾಸಕ ಹಾಗೂ ಪುತ್ರನ ಗೂಂಡಾಗಿರಿ…ಆಸ್ತಿ ವಿಚಾರದಲ್ಲಿ ದರ್ಪ…ಮೊಬೈಲ್ ನಲ್ಲಿ ಸೆರೆಯಾದ ಬೆದರಿಕೆ…

ಕಾಂಗ್ರೆಸ್ ಮಾಜಿ ಶಾಸಕ ಹಾಗೂ ಪುತ್ರನ ಗೂಂಡಾಗಿರಿ…ಆಸ್ತಿ ವಿಚಾರದಲ್ಲಿ ದರ್ಪ…ಮೊಬೈಲ್ ನಲ್ಲಿ…

ಕಾಂಗ್ರೆಸ್ ಮಾಜಿ ಶಾಸಕ ಹಾಗೂ ಪುತ್ರನ ಗೂಂಡಾಗಿರಿ…ಆಸ್ತಿ ವಿಚಾರದಲ್ಲಿ ದರ್ಪ…ಮೊಬೈಲ್ ನಲ್ಲಿ ಸೆರೆಯಾದ ಬೆದರಿಕೆ… ಮಂಡ್ಯ,ಡಿ19,Tv10 ಕನ್ನಡ ಜಮೀನು ವಿಚಾರದಲ್ಲಿ ಮಾಜಿ ಶಾಸಕ ಹಾಗೂ ಪುತ್ರ ವ್ಯಕ್ತಿ ಮೇಲೆ…

Leave a Reply

Your email address will not be published. Required fields are marked *