ಯೋಗ ನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಯಜುರುಪಾಕರ್ಮ…ಸಾಮೂಹಿಕ ಯಜ್ಞೋಪವೀತ ಬದಲಾವಣೆ…

ಯೋಗ ನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಯಜುರುಪಾಕರ್ಮ…ಸಾಮೂಹಿಕ ಯಜ್ಞೋಪವೀತ ಬದಲಾವಣೆ…

ಮೈಸೂರು,ಆ9,Tv10 ಕನ್ನಡ

ಮೈಸೂರಿನ ವಿಜಯನಗರದ ಶ್ರೀ ಯೋಗಾನರಸಿಂಹ ದೇವಾಲಯದಲ್ಲಿ ಸಾಮೂಹಿಕವಾಗಿ ಋಗ್ವೇದ ಹಾಗೂ ಯಜುರುಪಾಕರ್ಮ ಕಾರ್ಯಕ್ರಮ ನೆರವೇರಿತು.ನೂರಾರು ವಿಪ್ರರು ಭಾಗವಹಿಸಿ ಜನಿವಾರ ಬದಲಾಯಿಸಿಕೊಂಡರು.
ದೇವಸ್ಥಾನದ ಆಡಳಿತಾಧಿಕಾರಿ ಎನ್ ಶ್ರೀನಿವಾಸನ್ ನೇತೃತ್ವದಲ್ಲಿ ಕಾರ್ಯಕ್ರಮ ಅರ್ಥಪೂರ್ಣವಾಗಿ ನೆರವೇರಿತು. ಸಂಧ್ಯಾವಂದನೆ, ಗಾಯತ್ರಿ ಜಪ, ನೆರೆವೇರಿಸಿ ಯಜ್ಞೋಪವೀತ ಧಾರಣೆ ಹಾಗೂ ವಿಸರ್ಜಿಸುವ ಮಂತ್ರ ಜಪಿಸುವ ಮೂಲಕ ಜನಿವಾರ ಬದಲಾಯಿಸಿಕೊಂಡರು.

ಈ ಸಂದರ್ಭದಲ್ಲಿ ಮಾತನಾಡಿದ ಎನ್ ಶ್ರೀನಿವಾಸನ್
ಭಾರತೀಯ ಸನಾತನ ಹಿಂದೂ ಧರ್ಮದಲ್ಲಿ ವೇದ ಮತ್ತು ಶಾಸ್ತ್ರ ಅಧ್ಯಯನಕ್ಕೆ ಬಹಳ ಮಹತ್ವವಿದೆ, 8ನೇ ವರ್ಷಕ್ಕೆ ವಟುವಿಗೆ ಉಪನಯನ ಮಾಡಿ ಗಾಯತ್ರಿ ಮಂತ್ರ ಉಪದೇಶಿಸಿ ಗುರುಕುಲಕ್ಕೆ ಕಳಿಸುವ ಪಂಪರೆಯಿತ್ತು. ಯಜುರ್ ವೇದ ಋಗ್ವೇದ ಪ್ರಕಾರವಾಗಿ ಶಾಸ್ತ್ರಗಳನ್ನ ಪಾಲಿಸುವ ವೈದೀಕರು ತಮ್ಮ ಋಷಿಗಳಿಗೆ ಪೂಜಿಸಿ ಯಜ್ಞೋಪವೀತ ಜನಿವಾರ ಧಾರಣೆ ಮಾಡುವ ಉಪಾಕರ್ಮ‌ ಧರ್ಮರಕ್ಷಣೆಯ ಪ್ರತೀಕವಾಗಿದೆ. ಸಾವಿರಾರು ವರ್ಷಗಳ ಹಿಂದೆ ಸಂವತ್ಸರಗಳ ಹಬ್ಬಗಳಲ್ಲಿ ಪಂಚಾಂಗ ನಿರ್ಣಯಿಸಿರುವಂತೆ ಮಹೂರ್ತ ಆಚರಣೆ ಪಾಲಿಸುವ ಕ್ರಮಕ್ಕೆ ಮೊದಲೇ ನಿಶ್ಚಯಿಸಿರುತ್ತದೆ, ಎಂದರೆ ಸನಾತನ ಧರ್ಮದ ಶಕ್ತಿಯ ಸಂಕೇತವಾಗಿದೆ ಎಂದರು.

ಈ ಸಂದರ್ಭದಲ್ಲಿ ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ಪ್ರಧಾನ ಕಾರ್ಯದರ್ಶಿ ವಿಕ್ರಮ ಅಯ್ಯಂಗಾರ್, ಗಿರೀಶ್, ಅಶ್ವಿನ್, ಶ್ರೀರಾಮ್,ಹಾಗೂ ಇನ್ನಿತರರು ಹಾಜರಿದ್ದರು..

Spread the love

Related post

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…

Leave a Reply

Your email address will not be published. Required fields are marked *