ಯೋಗ ನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಯಜುರುಪಾಕರ್ಮ…ಸಾಮೂಹಿಕ ಯಜ್ಞೋಪವೀತ ಬದಲಾವಣೆ…

ಯೋಗ ನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಯಜುರುಪಾಕರ್ಮ…ಸಾಮೂಹಿಕ ಯಜ್ಞೋಪವೀತ ಬದಲಾವಣೆ…

ಮೈಸೂರು,ಆ9,Tv10 ಕನ್ನಡ

ಮೈಸೂರಿನ ವಿಜಯನಗರದ ಶ್ರೀ ಯೋಗಾನರಸಿಂಹ ದೇವಾಲಯದಲ್ಲಿ ಸಾಮೂಹಿಕವಾಗಿ ಋಗ್ವೇದ ಹಾಗೂ ಯಜುರುಪಾಕರ್ಮ ಕಾರ್ಯಕ್ರಮ ನೆರವೇರಿತು.ನೂರಾರು ವಿಪ್ರರು ಭಾಗವಹಿಸಿ ಜನಿವಾರ ಬದಲಾಯಿಸಿಕೊಂಡರು.
ದೇವಸ್ಥಾನದ ಆಡಳಿತಾಧಿಕಾರಿ ಎನ್ ಶ್ರೀನಿವಾಸನ್ ನೇತೃತ್ವದಲ್ಲಿ ಕಾರ್ಯಕ್ರಮ ಅರ್ಥಪೂರ್ಣವಾಗಿ ನೆರವೇರಿತು. ಸಂಧ್ಯಾವಂದನೆ, ಗಾಯತ್ರಿ ಜಪ, ನೆರೆವೇರಿಸಿ ಯಜ್ಞೋಪವೀತ ಧಾರಣೆ ಹಾಗೂ ವಿಸರ್ಜಿಸುವ ಮಂತ್ರ ಜಪಿಸುವ ಮೂಲಕ ಜನಿವಾರ ಬದಲಾಯಿಸಿಕೊಂಡರು.

ಈ ಸಂದರ್ಭದಲ್ಲಿ ಮಾತನಾಡಿದ ಎನ್ ಶ್ರೀನಿವಾಸನ್
ಭಾರತೀಯ ಸನಾತನ ಹಿಂದೂ ಧರ್ಮದಲ್ಲಿ ವೇದ ಮತ್ತು ಶಾಸ್ತ್ರ ಅಧ್ಯಯನಕ್ಕೆ ಬಹಳ ಮಹತ್ವವಿದೆ, 8ನೇ ವರ್ಷಕ್ಕೆ ವಟುವಿಗೆ ಉಪನಯನ ಮಾಡಿ ಗಾಯತ್ರಿ ಮಂತ್ರ ಉಪದೇಶಿಸಿ ಗುರುಕುಲಕ್ಕೆ ಕಳಿಸುವ ಪಂಪರೆಯಿತ್ತು. ಯಜುರ್ ವೇದ ಋಗ್ವೇದ ಪ್ರಕಾರವಾಗಿ ಶಾಸ್ತ್ರಗಳನ್ನ ಪಾಲಿಸುವ ವೈದೀಕರು ತಮ್ಮ ಋಷಿಗಳಿಗೆ ಪೂಜಿಸಿ ಯಜ್ಞೋಪವೀತ ಜನಿವಾರ ಧಾರಣೆ ಮಾಡುವ ಉಪಾಕರ್ಮ‌ ಧರ್ಮರಕ್ಷಣೆಯ ಪ್ರತೀಕವಾಗಿದೆ. ಸಾವಿರಾರು ವರ್ಷಗಳ ಹಿಂದೆ ಸಂವತ್ಸರಗಳ ಹಬ್ಬಗಳಲ್ಲಿ ಪಂಚಾಂಗ ನಿರ್ಣಯಿಸಿರುವಂತೆ ಮಹೂರ್ತ ಆಚರಣೆ ಪಾಲಿಸುವ ಕ್ರಮಕ್ಕೆ ಮೊದಲೇ ನಿಶ್ಚಯಿಸಿರುತ್ತದೆ, ಎಂದರೆ ಸನಾತನ ಧರ್ಮದ ಶಕ್ತಿಯ ಸಂಕೇತವಾಗಿದೆ ಎಂದರು.

ಈ ಸಂದರ್ಭದಲ್ಲಿ ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ಪ್ರಧಾನ ಕಾರ್ಯದರ್ಶಿ ವಿಕ್ರಮ ಅಯ್ಯಂಗಾರ್, ಗಿರೀಶ್, ಅಶ್ವಿನ್, ಶ್ರೀರಾಮ್,ಹಾಗೂ ಇನ್ನಿತರರು ಹಾಜರಿದ್ದರು..

Spread the love

Related post

ಸರ್ಕಾರಿ ಜಾಗದಲ್ಲಿ ಅಕ್ರಮ ಹೋಟೆಲ್ ನಿರ್ಮಾಣ ಆರೋಪ – ಜಿಲ್ಲಾಧಿಕಾರಿ ಗಮನ ಹರಿಸಲು ರೈತರ ಮನವಿ

ಸರ್ಕಾರಿ ಜಾಗದಲ್ಲಿ ಅಕ್ರಮ ಹೋಟೆಲ್ ನಿರ್ಮಾಣ ಆರೋಪ – ಜಿಲ್ಲಾಧಿಕಾರಿ ಗಮನ…

ಸರ್ಕಾರಿ ಜಾಗದಲ್ಲಿ ಅಕ್ರಮ ಹೋಟೆಲ್ ನಿರ್ಮಾಣ ಆರೋಪ – ಜಿಲ್ಲಾಧಿಕಾರಿ ಗಮನ ಹರಿಸಲು ರೈತರ ಮನವಿ ಗುಂಡ್ಲುಪೇಟೆ ತಾಲೂಕಿನ ಹಿರಿಕಾಟಿ ಗೇಟ್ ಸಮೀಪದ ಸರ್ವೇ ನಂ.218/1ಕ್ಕೆ ಸೇರಿದ ಸರ್ಕಾರಿ…
ಮೈಸೂರು, ಏಪ್ರಿಲ್ 13: ವಿಶ್ವಪ್ರಸಿದ್ಧ KRS Brindavan Gardens ನಲ್ಲಿ ಡಿಜಿಟಲ್ ಯುಗದಲ್ಲಿಯೂ “ಕ್ಯಾಶ್ ಮಾತ್ರ” ನಿಯಮ ಮುಂದುವರಿಯುತ್ತಿರುವುದು ಪ್ರವಾಸಿಗರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ.

ಮೈಸೂರು, ಏಪ್ರಿಲ್ 13: ವಿಶ್ವಪ್ರಸಿದ್ಧ KRS Brindavan Gardens ನಲ್ಲಿ ಡಿಜಿಟಲ್…

ಮೈಸೂರು, ಏಪ್ರಿಲ್ 13: ವಿಶ್ವಪ್ರಸಿದ್ಧ KRS Brindavan Gardens ನಲ್ಲಿ ಡಿಜಿಟಲ್ ಯುಗದಲ್ಲಿಯೂ “ಕ್ಯಾಶ್ ಮಾತ್ರ” ನಿಯಮ ಮುಂದುವರಿಯುತ್ತಿರುವುದು ಪ್ರವಾಸಿಗರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ. ಪ್ರವೇಶ ಟಿಕೆಟ್ ಪಡೆಯಲು ಬರುವವರಿಗೆ…
ಯುವಕನ ಕಿಡ್ನಾಪ್…ಮಂಗಳಮುಖಿ ವೇಷ ಹಾಕಿಸಿ ಕಲೆಕ್ಷನ್…ಸೆಕ್ಸ್ ವರ್ಕ್ ಗೆಯೂಸ್…ಕರಾಳದಂಧೆಯ ಮತ್ತೊಂದು ಮುಖ ಬಯಲು…

ಯುವಕನ ಕಿಡ್ನಾಪ್…ಮಂಗಳಮುಖಿ ವೇಷ ಹಾಕಿಸಿ ಕಲೆಕ್ಷನ್…ಸೆಕ್ಸ್ ವರ್ಕ್ ಗೆಯೂಸ್…ಕರಾಳದಂಧೆಯ ಮತ್ತೊಂದು ಮುಖ…

ಯುವಕನ ಕಿಡ್ನಾಪ್…ಮಂಗಳಮುಖಿ ವೇಷ ಹಾಕಿಸಿ ಕಲೆಕ್ಷನ್…ಸೆಕ್ಸ್ ವರ್ಕ್ ಗೆಯೂಸ್…ಕರಾಳದಂಧೆಯ ಮತ್ತೊಂದು ಮುಖ ಬಯಲು… ನಂಜನಗೂಡು,ಏ12,Tv10 ಕನ್ನಡ ಯುವಕನೊಬ್ಬನನ್ನ ಕಿಡ್ನಾಪ್ ಮಾಡಿ ಬಲವಂತವಾಗಿ ಮಂಗಳಮುಖಿ ವೇಷ ಹಾಕಿಸಿ ಕಲೆಕ್ಷನ್ ಹಾಗೂ…

Leave a Reply

Your email address will not be published. Required fields are marked *