ಮಾವುತರು ಹಾಗೂ ಕವಾಡಿಗರೊಂದಿಗೆ ರಕ್ಷಾಬಂಧನ್ ಆಚರಣೆ…ರಾಖಿ ಕಟ್ಟಿ ಶುಭ ಹಾರೈಸಿದ ಮಹಿಳೆಯರು…

ಮಾವುತರು ಹಾಗೂ ಕವಾಡಿಗರೊಂದಿಗೆ ರಕ್ಷಾಬಂಧನ್ ಆಚರಣೆ…ರಾಖಿ ಕಟ್ಟಿ ಶುಭ ಹಾರೈಸಿದ ಮಹಿಳೆಯರು…

ಮೈಸೂರು,ಆ12,Tv10 ಕನ್ನಡ

ದಸರಾ ಮಹೋತ್ಸವ ಆಚರಣೆಗಾಗಿ ಕಾಡಿನಿಂದ ನಾಡಿಗೆ ಬಂದ ಗಜಪಡೆಯ ಮಾಹುತರು ಹಾಗೂ ಕಾವಾಡಿಗರು ಮತ್ತು ಅರಣ್ಯ ಇಲಾಖೆ ಅಧಿಕಾರಿಗಳಿಗೆ ರಾಖಿ ಕಟ್ಟುವ ಮೂಲಕ ರಕ್ಷಾ ಬಂಧನ ಆಚರಣೆ ಮಾಡಲಾಯಿತು.ಇದೇ ವೇಳೆ ಶ್ರಾವಣ ಮಾಸದ ಲಡ್ಡು ಪ್ರಸಾದ ವಿತರಣೆ ಮಾಡಿ ದಸರಾ ಮಹೋತ್ಸವ ಯಶಸ್ಸಿಗಾಗಿ ಮಹಿಳೆಯರು ಹಾರೈಸಿದರು.
ಅರಮನೆ ಆವರಣದಲ್ಲಿ ತಂಗಿರುವ ಮಾಹುತರು ಮತ್ತು ಕಾವಾಡಿಗಳಿಗೆ ಆರತಿ ಬೆಳಗಿ, ಕುಂಕುಮದ ತಿಲಕವನ್ನುಇಟ್ಟು, ಶ್ರಾವಣ ಮಾಸದ ಲಡ್ಡು ಪ್ರಸಾದವನ್ನು ವಿತರಿಸಿ, ರಕ್ಷೆಯನ್ನು ಕಟ್ಟುವ ಮೂಲಕ ಶ್ರೀ ದುರ್ಗಾ ಫೌಂಡೇಶನ್ ಮಹಿಳೆಯರು ವಿಶೇಷವಾಗಿ ರಕ್ಷಾಬಂಧನನ್ನು ಆಚರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶ್ರೀ ದುರ್ಗಾ ಫೌಂಡೇಶನ್ ಅಧ್ಯಕ್ಷರಾದ ರೇಖಾ ಶ್ರೀನಿವಾಸ್ ಸಹೋದರರ ಸಮಾನರಾದ ಮಾವುತರು ಹಾಗೂ ಕವಾಡಿಗಳಿಗೆ ರಕ್ಷೆ ಕಟ್ಟುವ ಸೌಭಾಗ್ಯ ನಮ್ಮದಾಗಿರುವುದು ಸಂತಸವನ್ನುಂಟು ಮಾಡಿದೆ. ಭಾರತೀಯ ಪರಂಪರೆಯಲ್ಲಿ ರಕ್ಷಾ ಬಂಧನ್ ಹಬ್ಬಕ್ಕೆ ಬಹಳ ಮಹತ್ವವಿದೆ, ಸಹೋದರಿಯರು ತಮ್ಮ ಸಹೋದರರಿಗೆ ರಕ್ಷೆ ಕೋರಿ ರಕ್ಷಾಬಂಧನ ಕಟ್ಟುವ ಭಾವನಾತ್ಮಕ ಮತ್ತು ಪವಿತ್ರ
ಹಬ್ಬವಿದು ಎಂದು ಬಣ್ಣಿಸಿದರು.ಈ ಸಂದರ್ಭದಲ್ಲಿ ಡಿಸಿಎಫ್ ಪ್ರಭು ರವರಿಗೆ ಮಹಿಳೆಯರು ರಕ್ಷೆಯನ್ನು ಕಟ್ಟಿ ಶುಭಹಾರೈಸಿದರು.

ಈ ಸಂದರ್ಭದಲ್ಲಿ ಶ್ರೀ ದುರ್ಗಾ ಫೌಂಡೇಶನ್ ಖುಷಿ ವಿನು,ಕಾವ್ಯ,ಜಿ ರಾಘವೇಂದ್ರ,ಎಸ್.ಎನ್ ರಾಜೇಶ್ ಹಾಗೂ ಇನ್ನಿತರರು ಹಾಜರಿದ್ದರು…

Spread the love

Related post

ಸರ್ಕಾರಿ ಜಾಗದಲ್ಲಿ ಅಕ್ರಮ ಹೋಟೆಲ್ ನಿರ್ಮಾಣ ಆರೋಪ – ಜಿಲ್ಲಾಧಿಕಾರಿ ಗಮನ ಹರಿಸಲು ರೈತರ ಮನವಿ

ಸರ್ಕಾರಿ ಜಾಗದಲ್ಲಿ ಅಕ್ರಮ ಹೋಟೆಲ್ ನಿರ್ಮಾಣ ಆರೋಪ – ಜಿಲ್ಲಾಧಿಕಾರಿ ಗಮನ…

ಸರ್ಕಾರಿ ಜಾಗದಲ್ಲಿ ಅಕ್ರಮ ಹೋಟೆಲ್ ನಿರ್ಮಾಣ ಆರೋಪ – ಜಿಲ್ಲಾಧಿಕಾರಿ ಗಮನ ಹರಿಸಲು ರೈತರ ಮನವಿ ಗುಂಡ್ಲುಪೇಟೆ ತಾಲೂಕಿನ ಹಿರಿಕಾಟಿ ಗೇಟ್ ಸಮೀಪದ ಸರ್ವೇ ನಂ.218/1ಕ್ಕೆ ಸೇರಿದ ಸರ್ಕಾರಿ…
ಮೈಸೂರು, ಏಪ್ರಿಲ್ 13: ವಿಶ್ವಪ್ರಸಿದ್ಧ KRS Brindavan Gardens ನಲ್ಲಿ ಡಿಜಿಟಲ್ ಯುಗದಲ್ಲಿಯೂ “ಕ್ಯಾಶ್ ಮಾತ್ರ” ನಿಯಮ ಮುಂದುವರಿಯುತ್ತಿರುವುದು ಪ್ರವಾಸಿಗರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ.

ಮೈಸೂರು, ಏಪ್ರಿಲ್ 13: ವಿಶ್ವಪ್ರಸಿದ್ಧ KRS Brindavan Gardens ನಲ್ಲಿ ಡಿಜಿಟಲ್…

ಮೈಸೂರು, ಏಪ್ರಿಲ್ 13: ವಿಶ್ವಪ್ರಸಿದ್ಧ KRS Brindavan Gardens ನಲ್ಲಿ ಡಿಜಿಟಲ್ ಯುಗದಲ್ಲಿಯೂ “ಕ್ಯಾಶ್ ಮಾತ್ರ” ನಿಯಮ ಮುಂದುವರಿಯುತ್ತಿರುವುದು ಪ್ರವಾಸಿಗರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ. ಪ್ರವೇಶ ಟಿಕೆಟ್ ಪಡೆಯಲು ಬರುವವರಿಗೆ…
ಯುವಕನ ಕಿಡ್ನಾಪ್…ಮಂಗಳಮುಖಿ ವೇಷ ಹಾಕಿಸಿ ಕಲೆಕ್ಷನ್…ಸೆಕ್ಸ್ ವರ್ಕ್ ಗೆಯೂಸ್…ಕರಾಳದಂಧೆಯ ಮತ್ತೊಂದು ಮುಖ ಬಯಲು…

ಯುವಕನ ಕಿಡ್ನಾಪ್…ಮಂಗಳಮುಖಿ ವೇಷ ಹಾಕಿಸಿ ಕಲೆಕ್ಷನ್…ಸೆಕ್ಸ್ ವರ್ಕ್ ಗೆಯೂಸ್…ಕರಾಳದಂಧೆಯ ಮತ್ತೊಂದು ಮುಖ…

ಯುವಕನ ಕಿಡ್ನಾಪ್…ಮಂಗಳಮುಖಿ ವೇಷ ಹಾಕಿಸಿ ಕಲೆಕ್ಷನ್…ಸೆಕ್ಸ್ ವರ್ಕ್ ಗೆಯೂಸ್…ಕರಾಳದಂಧೆಯ ಮತ್ತೊಂದು ಮುಖ ಬಯಲು… ನಂಜನಗೂಡು,ಏ12,Tv10 ಕನ್ನಡ ಯುವಕನೊಬ್ಬನನ್ನ ಕಿಡ್ನಾಪ್ ಮಾಡಿ ಬಲವಂತವಾಗಿ ಮಂಗಳಮುಖಿ ವೇಷ ಹಾಕಿಸಿ ಕಲೆಕ್ಷನ್ ಹಾಗೂ…

Leave a Reply

Your email address will not be published. Required fields are marked *