ಮಾವುತರು ಹಾಗೂ ಕವಾಡಿಗರೊಂದಿಗೆ ರಕ್ಷಾಬಂಧನ್ ಆಚರಣೆ…ರಾಖಿ ಕಟ್ಟಿ ಶುಭ ಹಾರೈಸಿದ ಮಹಿಳೆಯರು…

ಮಾವುತರು ಹಾಗೂ ಕವಾಡಿಗರೊಂದಿಗೆ ರಕ್ಷಾಬಂಧನ್ ಆಚರಣೆ…ರಾಖಿ ಕಟ್ಟಿ ಶುಭ ಹಾರೈಸಿದ ಮಹಿಳೆಯರು…

ಮೈಸೂರು,ಆ12,Tv10 ಕನ್ನಡ

ದಸರಾ ಮಹೋತ್ಸವ ಆಚರಣೆಗಾಗಿ ಕಾಡಿನಿಂದ ನಾಡಿಗೆ ಬಂದ ಗಜಪಡೆಯ ಮಾಹುತರು ಹಾಗೂ ಕಾವಾಡಿಗರು ಮತ್ತು ಅರಣ್ಯ ಇಲಾಖೆ ಅಧಿಕಾರಿಗಳಿಗೆ ರಾಖಿ ಕಟ್ಟುವ ಮೂಲಕ ರಕ್ಷಾ ಬಂಧನ ಆಚರಣೆ ಮಾಡಲಾಯಿತು.ಇದೇ ವೇಳೆ ಶ್ರಾವಣ ಮಾಸದ ಲಡ್ಡು ಪ್ರಸಾದ ವಿತರಣೆ ಮಾಡಿ ದಸರಾ ಮಹೋತ್ಸವ ಯಶಸ್ಸಿಗಾಗಿ ಮಹಿಳೆಯರು ಹಾರೈಸಿದರು.
ಅರಮನೆ ಆವರಣದಲ್ಲಿ ತಂಗಿರುವ ಮಾಹುತರು ಮತ್ತು ಕಾವಾಡಿಗಳಿಗೆ ಆರತಿ ಬೆಳಗಿ, ಕುಂಕುಮದ ತಿಲಕವನ್ನುಇಟ್ಟು, ಶ್ರಾವಣ ಮಾಸದ ಲಡ್ಡು ಪ್ರಸಾದವನ್ನು ವಿತರಿಸಿ, ರಕ್ಷೆಯನ್ನು ಕಟ್ಟುವ ಮೂಲಕ ಶ್ರೀ ದುರ್ಗಾ ಫೌಂಡೇಶನ್ ಮಹಿಳೆಯರು ವಿಶೇಷವಾಗಿ ರಕ್ಷಾಬಂಧನನ್ನು ಆಚರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶ್ರೀ ದುರ್ಗಾ ಫೌಂಡೇಶನ್ ಅಧ್ಯಕ್ಷರಾದ ರೇಖಾ ಶ್ರೀನಿವಾಸ್ ಸಹೋದರರ ಸಮಾನರಾದ ಮಾವುತರು ಹಾಗೂ ಕವಾಡಿಗಳಿಗೆ ರಕ್ಷೆ ಕಟ್ಟುವ ಸೌಭಾಗ್ಯ ನಮ್ಮದಾಗಿರುವುದು ಸಂತಸವನ್ನುಂಟು ಮಾಡಿದೆ. ಭಾರತೀಯ ಪರಂಪರೆಯಲ್ಲಿ ರಕ್ಷಾ ಬಂಧನ್ ಹಬ್ಬಕ್ಕೆ ಬಹಳ ಮಹತ್ವವಿದೆ, ಸಹೋದರಿಯರು ತಮ್ಮ ಸಹೋದರರಿಗೆ ರಕ್ಷೆ ಕೋರಿ ರಕ್ಷಾಬಂಧನ ಕಟ್ಟುವ ಭಾವನಾತ್ಮಕ ಮತ್ತು ಪವಿತ್ರ
ಹಬ್ಬವಿದು ಎಂದು ಬಣ್ಣಿಸಿದರು.ಈ ಸಂದರ್ಭದಲ್ಲಿ ಡಿಸಿಎಫ್ ಪ್ರಭು ರವರಿಗೆ ಮಹಿಳೆಯರು ರಕ್ಷೆಯನ್ನು ಕಟ್ಟಿ ಶುಭಹಾರೈಸಿದರು.

ಈ ಸಂದರ್ಭದಲ್ಲಿ ಶ್ರೀ ದುರ್ಗಾ ಫೌಂಡೇಶನ್ ಖುಷಿ ವಿನು,ಕಾವ್ಯ,ಜಿ ರಾಘವೇಂದ್ರ,ಎಸ್.ಎನ್ ರಾಜೇಶ್ ಹಾಗೂ ಇನ್ನಿತರರು ಹಾಜರಿದ್ದರು…

Spread the love

Related post

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…

Leave a Reply

Your email address will not be published. Required fields are marked *