ಮಾವುತರು ಹಾಗೂ ಕವಾಡಿಗರೊಂದಿಗೆ ರಕ್ಷಾಬಂಧನ್ ಆಚರಣೆ…ರಾಖಿ ಕಟ್ಟಿ ಶುಭ ಹಾರೈಸಿದ ಮಹಿಳೆಯರು…

ಮಾವುತರು ಹಾಗೂ ಕವಾಡಿಗರೊಂದಿಗೆ ರಕ್ಷಾಬಂಧನ್ ಆಚರಣೆ…ರಾಖಿ ಕಟ್ಟಿ ಶುಭ ಹಾರೈಸಿದ ಮಹಿಳೆಯರು…

ಮೈಸೂರು,ಆ12,Tv10 ಕನ್ನಡ

ದಸರಾ ಮಹೋತ್ಸವ ಆಚರಣೆಗಾಗಿ ಕಾಡಿನಿಂದ ನಾಡಿಗೆ ಬಂದ ಗಜಪಡೆಯ ಮಾಹುತರು ಹಾಗೂ ಕಾವಾಡಿಗರು ಮತ್ತು ಅರಣ್ಯ ಇಲಾಖೆ ಅಧಿಕಾರಿಗಳಿಗೆ ರಾಖಿ ಕಟ್ಟುವ ಮೂಲಕ ರಕ್ಷಾ ಬಂಧನ ಆಚರಣೆ ಮಾಡಲಾಯಿತು.ಇದೇ ವೇಳೆ ಶ್ರಾವಣ ಮಾಸದ ಲಡ್ಡು ಪ್ರಸಾದ ವಿತರಣೆ ಮಾಡಿ ದಸರಾ ಮಹೋತ್ಸವ ಯಶಸ್ಸಿಗಾಗಿ ಮಹಿಳೆಯರು ಹಾರೈಸಿದರು.
ಅರಮನೆ ಆವರಣದಲ್ಲಿ ತಂಗಿರುವ ಮಾಹುತರು ಮತ್ತು ಕಾವಾಡಿಗಳಿಗೆ ಆರತಿ ಬೆಳಗಿ, ಕುಂಕುಮದ ತಿಲಕವನ್ನುಇಟ್ಟು, ಶ್ರಾವಣ ಮಾಸದ ಲಡ್ಡು ಪ್ರಸಾದವನ್ನು ವಿತರಿಸಿ, ರಕ್ಷೆಯನ್ನು ಕಟ್ಟುವ ಮೂಲಕ ಶ್ರೀ ದುರ್ಗಾ ಫೌಂಡೇಶನ್ ಮಹಿಳೆಯರು ವಿಶೇಷವಾಗಿ ರಕ್ಷಾಬಂಧನನ್ನು ಆಚರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶ್ರೀ ದುರ್ಗಾ ಫೌಂಡೇಶನ್ ಅಧ್ಯಕ್ಷರಾದ ರೇಖಾ ಶ್ರೀನಿವಾಸ್ ಸಹೋದರರ ಸಮಾನರಾದ ಮಾವುತರು ಹಾಗೂ ಕವಾಡಿಗಳಿಗೆ ರಕ್ಷೆ ಕಟ್ಟುವ ಸೌಭಾಗ್ಯ ನಮ್ಮದಾಗಿರುವುದು ಸಂತಸವನ್ನುಂಟು ಮಾಡಿದೆ. ಭಾರತೀಯ ಪರಂಪರೆಯಲ್ಲಿ ರಕ್ಷಾ ಬಂಧನ್ ಹಬ್ಬಕ್ಕೆ ಬಹಳ ಮಹತ್ವವಿದೆ, ಸಹೋದರಿಯರು ತಮ್ಮ ಸಹೋದರರಿಗೆ ರಕ್ಷೆ ಕೋರಿ ರಕ್ಷಾಬಂಧನ ಕಟ್ಟುವ ಭಾವನಾತ್ಮಕ ಮತ್ತು ಪವಿತ್ರ
ಹಬ್ಬವಿದು ಎಂದು ಬಣ್ಣಿಸಿದರು.ಈ ಸಂದರ್ಭದಲ್ಲಿ ಡಿಸಿಎಫ್ ಪ್ರಭು ರವರಿಗೆ ಮಹಿಳೆಯರು ರಕ್ಷೆಯನ್ನು ಕಟ್ಟಿ ಶುಭಹಾರೈಸಿದರು.

ಈ ಸಂದರ್ಭದಲ್ಲಿ ಶ್ರೀ ದುರ್ಗಾ ಫೌಂಡೇಶನ್ ಖುಷಿ ವಿನು,ಕಾವ್ಯ,ಜಿ ರಾಘವೇಂದ್ರ,ಎಸ್.ಎನ್ ರಾಜೇಶ್ ಹಾಗೂ ಇನ್ನಿತರರು ಹಾಜರಿದ್ದರು…

Spread the love

Related post

ಸಿಸಿಬಿ ಪೊಲೀಸರ ಕಾರ್ಯಾಚರಣೆ…ನಾಲ್ವರ ಬಂಧನ…10.40 ಲಕ್ಷ ಮೌಲ್ಯದ ಎಂಡಿಎಂಎ ಒಂದು ಕಾರ್ ವಶ…

ಸಿಸಿಬಿ ಪೊಲೀಸರ ಕಾರ್ಯಾಚರಣೆ…ನಾಲ್ವರ ಬಂಧನ…10.40 ಲಕ್ಷ ಮೌಲ್ಯದ ಎಂಡಿಎಂಎ ಒಂದು ಕಾರ್…

ಸಿಸಿಬಿ ಪೊಲೀಸರ ಕಾರ್ಯಾಚರಣೆ…ನಾಲ್ವರ ಬಂಧನ…10.40 ಲಕ್ಷ ಮೌಲ್ಯದ ಎಂಡಿಎಂಎ ಒಂದು ಕಾರ್ ವಶ… ಮೈಸೂರು,ಫೆ23,Tv10 ಕನ್ನಡ ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆಯಲ್ಲಿ ನಾಲ್ವರು ಆರೋಪಿಗಳನ್ನ ವಶಕ್ಕೆ ಪಡೆಯಲಾಗಿದ್ದು ಬಂಧಿತರಿಂದ…
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ! ಆಲ್ಫಾ ಅಂದರೇನೇ ಡಾಮಿನೇಶನ್. ಈ ವಾರ ತೆರೆಕಂಡ ಆಲ್ಫಾ‌ ಚಿತ್ರದಲ್ಲಿ ಡಾಮಿನೇಟ್ ಮಾಡುತ್ತಿರುವವರೇ ಚಿತ್ರದ ನಾಯಕ ಹೇಮಂತ್ ಕುಮಾರ್. ಹೇಮಂತ್…
ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ ಸಂಕೀರ್ಣ…ಸುಮಾರು 250 ಕೋಟಿ ಮೌಲ್ಯದ ಆಸ್ತಿ…ಅಲರ್ಟ್ ಆಗ್ತಾರ ಆಯುಕ್ತ ರಕ್ಷಿತ್…

ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ…

ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ ಸಂಕೀರ್ಣ…ಸುಮಾರು 250 ಕೋಟಿ ಮೌಲ್ಯದ ಆಸ್ತಿ…ಅಲರ್ಟ್ ಆಗ್ತಾರ ಆಯುಕ್ತ ರಕ್ಷಿತ್… ಮೈಸೂರು,ಫೆ17,Tv10 ಕನ್ನಡ ಮೈಸೂರಿನ ಹೃದಯಭಾಗದಲ್ಲಿರುವ…

Leave a Reply

Your email address will not be published. Required fields are marked *